ಮೇಲುಕೋಟೆಗೆ ಕೇಳಿದ್ದು 500 ಕೋಟಿ ರು ಸಿಕ್ಕಿದ್ದು 20 ಕೋಟಿ
ಮೇಲುಕೋಟೆ, ಅ.06: ವೈಷ್ಣವರ ಪವಿತ್ರಕ್ಷೇತ್ರ ಮೇಲುಕೋಟೆ ಅಭಿವೃದ್ಧಿ ಹಾಗೂ ವಿಶಿಷ್ಟಾದೈತ ಪ್ರತಿಪಾದಕ ಶ್ರೀರಾಮಾನುಜಾಚಾರ್ಯರ ಜಯಂತಿ ಆಚರಣೆಗಾಗಿ 500 ಕೋಟಿ ರು ಕೇಳಿದ್ದ ಜಿಲ್ಲಾಡಳಿತಕ್ಕೆ 20ಕೋಟಿ ರು ಮಾತ್ರ ಮಂಜೂರಾಗಿದೆ.
ಇತಿಹಾಸ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಯಲ್ಲಿ 20 ಕೋಟಿ ರು ವೆಚ್ಚದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಡಾ.ಅಜಯ್ ನಾಗಭೂಷಣ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಈ ವಿಷಯ ಹಂಚಿಕೊಂಡಿದ್ದಾರೆ.
ಮೇಲುಕೋಟೆ ಅಭಿವೃದ್ಧಿ ಕಾರ್ಯ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಇಪ್ಪತ್ತು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಯ ನೀಲನಕ್ಷೆ ತಯಾರಿಸಿ ಅಕ್ಟೋಬರ್ 20 ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುತ್ತದೆ. ಅನುದಾನದ ಮೊತ್ತ ಶೀಘ್ರವೇ ಬಿಡುಗಡೆ ಮಾಡಿಸಲಾಗುತ್ತದೆ ಎಂದರು. [ಮೇಲುಕೋಟೆ ವೈರಮುಡಿ ಕ್ಷೇತ್ರ ಪುರಾಣ]

ವಿವಿಧ ಯೋಜನೆ: ವಸತಿಸಮುಚ್ಚಯಗಳ ನಿರ್ಮಾಣ, ಮೇಲುಕೋಟೆ ಸಂಪರ್ಕ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು, ಒಳಚರಂಡಿ ವ್ಯವಸ್ಥೆ, ವ್ಯವಸ್ಥಿತವಾದ ಅಂಗಡಿಗಳ ನಿರ್ಮಾಣ, ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರ ಸ್ಥಾಪನೆ, ಕಲ್ಯಾಣಿ ಮತ್ತು ದೇವಸ್ಥಾನದ ಬಳಿ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕ ಅಳವಡಿಕೆ, ಅನ್ನದಾನ ಭವನ, ಹೈಟೆಕ್ ಶೌಚಾಲಯಗಳ ನಿರ್ಮಾಣ, ಕಲ್ಯಾಣಿ ನೀರಿನಲ್ಲಿ ಸುರಕ್ಷತಾ ತಂತಿ ಅಳವಡಿಕೆ, ಯೋಗನರಸಿಂಹಸ್ವಾಮಿ ಬೆಟ್ಟದ ರಾಜಗೋಪುರ ನವೀಕರಣ, ಮೆಟ್ಟಿಲುಗಳ ದುರಸ್ತಿ, ಹಾಗೂ ಬೆಟ್ಟಕ್ಕೆ ರೋಪ್ ವೇ ಅಳವಡಿಕೆ, ಹೇಮಾವತಿ ವಸತಿಗೃಹಗಳನ್ನು ವಶಕ್ಕೆ ಪಡೆದು ಯಾತ್ರಿ ನಿವಾಸ ಮಾಡುವುದು ಪ್ರಮುಖ ಯೋಜನೆಗಳಾಗಿವೆ. [ರಾಮಾನುಜಾಚಾರ್ಯ 1000ನೇ ಜಯಂತಿಗೆ 500 ಕೋಟಿ ರು]

ಸಹಸ್ರಮಾನೋತ್ಸವ : 2017 ರಲ್ಲಿ ನಡೆಯುವ ಆಚಾರ್ಯ ರಾಮಾನುಜರ ಸಹಸ್ರಮಾನೋತ್ಸವನ್ನು ಅದ್ದೂರಿಯಾಗಿ ನಡೆಸಲು ಮಂಡ್ಯ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಪ್ರಾಥಮಿಕ ಅಭಿವೃದ್ಧಿಯ ಜೊತೆಗೆ ಹಲವಾರು ವಿಶೇಷ ಯೋಜನೆಗಳನ್ನು ಸಹ ಹಮ್ಮಿಕೊಂಡು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕೂ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಿಸಲಾಗುತ್ತದೆ ಈ ಬಗ್ಗೆ ಮುಜರಾಯಿ ಮಂತ್ರಿ ಹಾಗೂ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿದ್ದಾರೆ ಎಂದರು.
ಪಾಂಡವಪುರ ಉಪ ವಿಭಾಗಾಧಿಕಾರಿ ಡಾ.ನಾಗರಾಜು, ಜಿಲ್ಲಾಧಿಕಾರಿ ಡಾ.ಅಜಯ್ ನಾಗಭೂಷಣ್, ಪ್ರವಾಸೋದ್ಯಮ ಇಲಾಖೆಯ ಮಂಡ್ಯ ಸಹಾಯಕ ನಿರ್ದೇಶಕ ಹರೀಶ್,ಪಾಂಡವಪುರ ತಹಶೀಲ್ದಾರ್ ಶಂಕರಪ್ಪ, ಮಂಡ್ಯ ಚುನಾವಣಾ ತಹಸೀಲ್ದಾರ್ ದಿನೇಶ್ ಚಂದ್ರ, ಸಾಹಿತಿ ತೈಲೂರು ವೆಂಕಟಕೃಷ್ಣ, ಮೇಲುಕೋಟೆ ಎಸ್.ಐ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಪಿಡಿಒ ಶೈಲಜಾ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications