ಋತುಚಕ್ರ ರಜೆ: ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ: ಷರತ್ತುಗಳೇನು?
ಬೆಂಗಳೂರು, ಡಿಸೆಂಬರ್ 03: ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋುತುಚಕ್ರ ರಜೆ ಕಲ್ಪಿಸಲು ತೀರ್ಮಾನಿಸಿರುವ ಕರ್ನಾಟಕ ಸರ್ಕಾರ ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ.
ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು.

ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋುತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲಎಂದು ಸ್ಪಷ್ಟಪಡಿಸಲಾಗಿದೆ.
ಈ ರಜೆಯನ್ನು ರಜೆ / ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕಾಗಿ ನಮೂದಿಸಬೇಕು. ಋುತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ನಾನಾ ಕಾರ್ಮಿಕ ಕಾಯಿದೆಯಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ನೌಕರರಿಗೆ ಋುತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆ ಸೌಲಭ್ಯ ಕಲ್ಪಿಸಿ ಕಳೆದ ನ.12ರಂದು ಸರಕಾರ ಆದೇಶ ಹೊರಡಿಸಿತ್ತು.
ರಾಜ್ಯದ ಸರ್ಕಾರಿ ಮಹಿಳಾ ಉದ್ಯೋಗಿಗಳ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಜಾರಿ ಮಾಡಲಾದ ಋತುಚಕ್ರ ರಜೆಯು ಕಾರ್ಮಿಕ ಇಲಾಖೆಯ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಈ ಸೌಲಭ್ಯ ಜಾರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ. ಮಹಿಳಾ ನೌಕರರ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ರಜೆಯನ್ನು ನೀಡಬೇಕು ಎಂದು ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.
-
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ











Click it and Unblock the Notifications