ಮಳೆಯಿಲ್ಲ, ಬೆಳೆಯಿಲ್ಲ, ಉತ್ತರದ ಮಂದಿ ಹೊಂಟರು ಗುಳೆ
ಬೆಂಗಳೂರು, ಏಪ್ರಿಲ್, 18: ಬೆಂಗಳೂರಿಗೆ ರಾಜ್ಯದ ವಿವಿಧ ಭಾಗಗಳಿಂದ ಜನರು ಪ್ರತಿದಿನ ಆಗಮಿಸುವುದು ಹೊಸ ಸುದ್ದಿ ಅಲ್ಲ. ಆದರೆ ಇತ್ತೀಚೆಗೆ ಉತ್ತರ ಕರ್ನಾಟಕ ಭಾಗದಿಂದ ಕೆಲಸ ಅರಸಿ ಬರುತ್ತಿರುವವರ ಸಂಖ್ಯೆ ದ್ವಿಗುಣವಾಗಿದೆ.
ಕೆಲಸವೊಂದನ್ನೇ ಅರಸಿ ಜನರು ಬರುತ್ತಿಲ್ಲ.ಗ್ರಾಮೀಣ ಭಾಗದಲ್ಲಿ ಉಂಟಾಗಿರುವ ನೀರಿನ ಹಾಹಾಕಾರ ಅವರನ್ನು ನಗರದತ್ತ ಮುಖ ಮಾಡುವಂತೆ ಮಾಡಿದೆ. ಉತ್ತರ ಕರ್ನಾಟಕದ ಬಿಸಿಲಿನ ಧಗೆ ಸರಾಸರಿ 44 ಡಿಗ್ರಿ ಸೆಲ್ಸಿಯಸ್ ಗೆ ತಲುಪಿದೆ. ಕೆಲವರು ಬೆಂಗಳೂರಿಗೆ ಆಗಮಿಸಿದರೆ ಇನ್ನು ಹಲವರು ಮೈಸೂರಿಗೆ ತೆರಳಿ ಜೀವನ ಕಟ್ಟಿಕೊಳ್ಳಲು ಮುಂದಾಗುತ್ತಿದ್ದಾರೆ.[ನೀರು ಪೂರೈಕೆ ಲೋಪವಾದರೆ ಕಠಿಣ ಕ್ರಮ : ಸಿದ್ದು ಎಚ್ಚರಿಕೆ]
ದಿನಕ್ಕೆ 50 ಅಥವಾ ನೂರು ರು. ದುಡಿಯುವ ವ್ಯಕ್ತಿ ಬಿಂದಿಗೆ ನೀರಿಗೆ 10 ರು. ನೀಡಬೇಕಾದ ಪರಿಸ್ಥಿತಿ ಬಂದೊದಗಿದೆ. ಪರಿಣಾಮ ನಗರಕ್ಕೆ ವಲಸೆ ಬಂದು ಪರ್ಯಾಯ ಕೆಲಸ ಹುಡುಕುವ ಆಯ್ಕೆಯನ್ನು ಜನ ಒಪ್ಪಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಪೀಡಿತ ಜಿಲ್ಲೆಗಳ ಪ್ರವಾಸ ಮಾಡುತ್ತಿದ್ದು ಜನರು ಗುಳೆ ಹೋಗದಂತೆ ಮನವಿಯನ್ನು ಮಾಡಿದ್ದಾರೆ.

ವಲಸೆ ಆರಂಭ
ಕಲಬುರಗಿ, ವಿಜಯಪುರ, ಬೀದರ್ ನ ಜನರು ತಮ್ಮ ಸಾಕು ಪ್ರಾಣಿಗಳನ್ನು ಹುಟ್ಟಿದ ಬೆಲೆಗೆ ಮಾರಿ ನಗರಕ್ಕೆ ವಲಸೆ ಬರುತ್ತಿದ್ದಾರೆ.

ಬದುಕಲು ಸಾಧ್ಯವಿಲ್ಲ
"ಕುರಿಗಳನ್ನು ಮಾರಿ ನಗರಕ್ಕೆ ಬಂದಿದ್ದೇವೆ. ನಾವು ಅಲ್ಲೇ ಇದ್ದರೆ ಕುಡಿಯಲು ನೀರಿಲ್ಲದೇ ದಾಹದಿಂದಲೇ ಸಾವನ್ನಪ್ಪಬೇಕಿತ್ತು" ಎಂದು ಭಾನುವಾರ ನಗರದ ರೈಲ್ವೆ ನಿಲ್ದಾಣಕ್ಕೆ ಹೆಂಡತಿಯೊಂದಿಗೆ ಬಂದಿಳಿದ ಸಣ್ಣಪ್ಪ ಹೇಳುತ್ತಾರೆ.

ಮುಂಬೈ-ಮೈಸೂರು
ಉತ್ತರ ಕರ್ನಾಟಕದ ಜನ ಮುಂಬೈ ಮತ್ತು ಮೈಸೂರಿನ ಕಡೆಗೂ ವಲಸೆ ಹೋಗುತ್ತಿದ್ದಾರೆ. ಜೀವನ ನಿರ್ವಹಣೆ ಸಾಧ್ಯವಾಗದ ಪರಿಸ್ಥಿತಿ ಎದುರಾಗಿದ್ದು ಗ್ರಾಮಕ್ಕೆ ಗ್ರಾಮವೇ ಖಾಲಿಯಾಗುತ್ತಿವೆ.

ಅಳಂದ ಅಳುವಿಗೆ ಉತ್ತರವಿಲ್ಲ
ತೀವ್ರ ಬರ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಕಲಬುರಗಿ ಜಿಲ್ಲೆಯ ಅಳಂದದಿಂದ ಅತಿ ಹೆಚ್ಚಿನ ಜನರು ಮಹಾನಗರಕ್ಕೆ ಆಗಮಿಸುತ್ತಿದ್ದಾರೆ.

ಹಣ ಬೇಕು
ಗ್ರಾಮೀಣ ಭಾಗದಲ್ಲಿ ಎಲ್ಲ ಕೆಲಸಗಳು ನಿಂತು ಹೋಗಿವೆ. ನಗರಕ್ಕೆ ಬಂದರೆ 300 ರಿಂದ 400 ರು. ದಿನಕ್ಕೆ ದುಡಿಯಬಹುದು ಎಂಬ ಲೆಕ್ಕಾಚಾರವೂ ವಲಸೆಗೆ ಪ್ರಮುಖ ಕಾರಣವಾಗಿದೆ.

ಮಳೆ ಬಂದರೆ ಜೀವನ
ಹವಾಮಾನ ಇಲಾಖೆ ನೀಡಿದ ವರದಿಯಂತೆ ಉತ್ತಮ ಮಳೆ ಬಂದರೆ ಉತ್ತರ ಕರ್ನಾಟಕದ ಜನರ ಜೀವನ ಮತ್ತೆ ಆರಂಭವಾಗಲಿದೆ. ಇಲ್ಲವಾದಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವುದರಲ್ಲಿ ಅನುಮಾನವೇ ಇಲ್ಲ.
-
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ











Click it and Unblock the Notifications