Get Updates
Get notified of breaking news, exclusive insights, and must-see stories!

ಮಹಾರಾಷ್ಟ್ರದಲ್ಲಿ ಕನ್ನಡ ಹೋರಾಟಗಾರನನ್ನು ಕೂಡಿಹಾಕಿ ಹಲ್ಲೆ!

ಬೆಂಗಳೂರು, ಡಿ. 21: ದೇಶದ್ರೋಹ ಕೇಸು ಹಾಕುವ ಎಚ್ಚರಿಕೆ ನಡುವೆಯೂ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಕನ್ನಡಿಗನ ಮೇಲೆ ದೌರ್ಜನ್ಯ ಎಸಗಿ ಪುಂಡತನ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಪರ ಸಂಘಟನೆ ಸದಸ್ಯನನ್ನು ಕೂಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಕನ್ನಡಪರ ಸಂಘಟನೆಯ ಮುಖಂಡನಾಗಿರುವ ಶಿವಕುಮಾರ್ ನಾಯ್ಕ ಹಲ್ಲೆಗೆ ಒಳಗಾದವರು. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಶಿವಕುಮಾರ್ ನಾಯ್ಕ ಮತ್ತು ಬೆಂಬಲಿಗರು ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಕೆಲವು ಕನ್ನಡ ಪರ ಸಂಘಟನೆಗಳ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದರು. ಪ್ರತಿಭಟನೆ ನಡೆಸುವ ಮುನ್ನ ಲಾಡ್ಜ್ ನಲ್ಲಿ ತಂಗಿದ್ದ ಶಿವಕುಮಾರ್ ನಾಯ್ಕನನ್ನು ರೂಮ್‌ನಲ್ಲಿ ಕೂಡಿ ಹಾಕಿದ್ದಾರೆ. ಅಮೇಲೆ ಕ್ಷಮೆ ಕೇಳುವಂತೆ ಒತ್ತಾಯಿಸಿ ಬಹಿರಂಗವಾಗಿ ಹಲ್ಲೆ ಮಾಡಿದ್ದಾರೆ. ಕ್ಷಮೆ ಕೇಳಿದರೂ ಬಿಡದೇ ಎಂಇಎಸ್ ಪುಂಡರು ಹಲ್ಲೆ ಮಾಡಿ, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡಿದ್ದಾರೆ. ಒಂಟಿಯಾಗಿ ಸಿಕ್ಕಿದ ಕನ್ನಡ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಈ ಘಟನೆ ಸಂಬಂಧ ಕನ್ನಡರಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕನ್ನಡ ಪರ ಸಂಘಟನೆಗಳ ಆಕ್ರೋಶ:
ಕನ್ನಡಿಗರನ್ನು ಅನವಶ್ಯಕವಾಗಿ ಕೆಣಕಿದರೆ ಸುಮ್ಮನೆ ಕೂರಲ್ಲ. ಏಕಾಂಗಿಯಾಗಿ ಸಿಕ್ಕಿದ ಎಂಬ ಕಾರಣಕ್ಕೆ ಕನ್ನಡ ಪರ ಸಂಘಟನೆ ಕಾರ್ಯಕರ್ತನನ್ನು ಕೂಡಿ ಹಾಕಿ ಹಲ್ಲೆ ಮಾಡುವುದು ತಪ್ಪು. ಬೆಳಗಾವಿ ವಿಚಾರದಲ್ಲಿ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಬ್ಯಾನ್ ಮಾಡಬೇಕು. ಮಾತ್ರವಲ್ಲ ಹಲ್ಲೆ ಮಾಡಿರುವ ಪುಂಡರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕನ್ನಡ ಪರ ಸಂಘಟನೆ ಹೋರಾಟಗಾರ ಯತಿರಾಜ್ ಆಗ್ರಹಿಸಿದ್ದಾರೆ.

MES members Assault Kannada Fighter Shivakumar Naik in Maharashtra; Video Goes Viral

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಸಂಬಂಧ ಕೇಸು ದಾಖಲಿಸಿಕೊಂಡಿದ್ದ ಸದಾಶಿವನಗರ ಪೊಲೀಸರು ಘಟನೆ ನಡೆದ 24 ತಾಸಿನಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ಈ ಮೂಲಕ ಶಾಂತಿ ಕದಡುವ ಪ್ರಯತ್ನವನ್ನು ತಪ್ಪಿಸಿದ್ದರು. ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದ ಸದಾಶಿವನಗರ ಪೊಲೀಸರು, ಎರಡು ರಾಜ್ಯಗಳ ನಡುವಿನ ಶಾಂತಿ ಕದಡುವ ಪ್ರಯತ್ನವನ್ನು ತಣ್ಣಗೆ ಮಾಡಿದ್ದರು.

MES members Assault Kannada Fighter Shivakumar Naik in Maharashtra; Video Goes Viral

ಅದೇ ರೀತಿ ಮಹಾರಾಷ್ಟ್ರದಲ್ಲಿ ಕನ್ನಡ ಪರ ಹೋರಾಟಗಾರನ ಮೇಲೆ ನಡೆದಿರುವ ಹಲ್ಲೆ ಸಂಬಂಧ ಮಹಾರಾಷ್ಟ್ರ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು. ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ ಈ ದೇಶದಲ್ಲಿ ಕಾನೂನು ದೊಡ್ಡದು ಎಂಬುದನ್ನು ತೋರಿಸಬೇಕು. ಆದರೆ, ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣ, ಕನ್ನಡ ಪರ ಸಂಘಟನೆ ಕಾರ್ಯಕರ್ತನ ಮೇಲಿನ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಹಾರಾಷ್ಟ್ರ ಪೊಲೀಸರು ಆರೋಪಿಗಳನ್ನು ಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಶಾಂತಿ ಕದಡುವ ಘಟನೆಗಳಿಗೆ ಕಾರಣವಾಗುವ ವಿಕೃತರನ್ನು ಕೂಡಲೇ ಬಂಧಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

Recommended Video

      ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯಕ್ಕೆ ಮಳೆ ಅಡ್ಡಿ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+