ಗೌಡ, ಸ್ವಾಮಿ ಭೇಟಿಯೊಂದಿಗೆ ಮಹಾಮೈತ್ರಿ ದಂಡಯಾತ್ರೆ ಆರಂಭಿಸಿದ ನಾಯ್ಡು
ಬೆಂಗಳೂರು, ನವೆಂಬರ್ 08: ದೇಶವನ್ನು ಉಳಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು ದೇವೇಗೌಡರ ಸಲಹೆ, ನೆರವು ಕೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹೇಳಿದರು.
ದೇವೇಗೌಡ ಅವರ ನಿವಾಸಕ್ಕೆ ಬಂದಿದ್ದ ಅವರು ಕುಮಾತಸ್ವಾಮಿ ಹಾಗೂ ದೇವೇಗೌಡ ಅವರೊಂದಿಗೆ ಚರ್ಚಿಸಿದ ನಂತರ ಮಾತುಕತೆಯ ವಿವರವನ್ನು ಮಾಧ್ಯಮಗಳೊಂದಿಗೆ ಚಂದ್ರಬಾಬು ನಾಯ್ಡು ಹಂಚಿಕೊಂಡರು.
ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳು ಅಪಾಯದಲ್ಲಿವೆ. ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿಬಿಐ, ಸ್ವಾಯತ್ತ ಸಂಸ್ಥೆಯಾದ ಆರ್ಬಿಐ, ಐಟಿ, ಇಡಿಗಳು ಕೇಂದ್ರದ ಆಟದ ಸಾಮಗ್ರಿಗಳಾಗಿವೆ ದೇಶ ಅಪಾಯದಲ್ಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತನಿಖಾ ಸಂಸ್ಥೆಗಳ ಮೂಲಕ ದೌರ್ಜನ್ಯ
ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ರಾಜಕಾರಣಿಗಳ ಮೇಲೆ ದೌರ್ಜನ್ಯ ಎಸಗುತ್ತಿದೆ ಬಿಜೆಪಿ, ಹಿಂದೆಂದೂ ಇಂತಹಾ ಸ್ಥಿತಿಯನ್ನು ದೇಶ ಕಂಡಿರಲಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈಗಾಗಲೇ ಹಲವು ನಾಯಕರ ಭೇಟಿ
ಈಗಾಗಲೇ ಮಾಯಾವತಿ, ಅಖಿಲೇಶ್ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳ ಮುಖಂಡರನ್ನು ಭೇಟಿ ಆಗಿದ್ದಾಗಿದೆ. ಮೊದಲಿಗೆ ನಾವು ಚರ್ಚೆ ಮಾಡುತ್ತೇವೆ, ಮೈತ್ರಿಯು ಹೇಗೆ ಕಾರ್ಯ ನಿರ್ವಹಿಸಬೇಕು ಹೇಗೆ ಚುನಾವಣೆ ಎದುರಿಸಬೇಕು, ನಾಯಕತ್ವ ಯಾರು ವಹಿಸಿಕೊಳ್ಳುತ್ತಾರೆ ಅಥವಾ ಸಂಘಟಿತ ನಾಯಕತ್ವದ ರೂಪು-ರೇಷೆ ಹೇಗಿರುತ್ತದೆ ಎಂಬುದನ್ನು ಚರ್ಚಿಸಿ ಕಾರ್ಯರೂಪಕ್ಕೆ ತರುತ್ತೇವೆ ಎಂದು ಅವರು ಹೇಳಿದರು.

ಮೈತ್ರಿಯ ಪ್ರಾಥಮಿಕ ಪ್ರಯೋಗ ಪ್ರಾರಂಭ
ಮೈತ್ರಿಯ ಪ್ರಾಥಮಿಕ ಪ್ರಯೋಗಗಳು ಪ್ರಾರಂಭವಾಗಿವೆ, ಮಮತಾ ಬ್ಯಾನರ್ಜಿ ಅವರು ಜನವರಿಯಲ್ಲಿ ಮೈತ್ರಿ ನಾಯಕರನ್ನು ಒಟ್ಟು ಸೇರಿಸಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಿದ್ದಾರೆ. ಅಖಿಲೇಶ್ ಸಹ ಸಮಾವೇಶ ಆಯೋಜಿಸಲಿದ್ದಾರೆ. ನಾವು ಕಾಂಗ್ರೆಸ್ನ ಹೊರ ಬೆಂಬಲ ಪಡೆಯುವುದೋ ಅಥವಾ ಕಾಂಗ್ರೆಸ್ಗೆ ಬೆಂಬಲ ನೀಡುವುದೋ ಎಲ್ಲವೂ ಚರ್ಚಿಸಿ ನಿರ್ಣಯಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಬೆಂಬಲದ ಕುರಿತು ಚರ್ಚೆ
1996 ರಲ್ಲಿ ಯುನೈಟೆಡ್ ಪ್ರಂಟ್ನ ಅಧ್ಯಕ್ಷರು ದೇವೇಗೌಡರಾಗಿದ್ದರು, ನಾನು ಉಪಾಧ್ಯಕ್ಷ ಆಗಿದ್ದೆ ಆಗ ಕಾಂಗ್ರೆಸ್ನ ಬಾಹ್ಯ ಬೆಂಬಲದೊಂದಿಗೆ ತೃತೀಯ ರಂಗ ಅಧಿಕಾರ ಹಿಡಿಯಿತು ದೇವೇಗೌಡ ಅವರು ಪ್ರಧಾನಿ ಆದರು. ಈಗಿನ ಪರಿಸ್ಥಿತಿಯಲ್ಲಿ ಇನ್ನೂ ಮೈತ್ರಿ ಪ್ರಾಥಮಿಕ ಹಂತದಲ್ಲಿದ್ದು ಪ್ರಯೋಗಗಳು, ಮಾತುಕತೆಗಳ ಬಳಿಕ ಪಕ್ವವವಾಗಲಿದೆ ಎಂದು ಅವರು ಹೇಳಿದರು.

1996 ರ ಮ್ಯಾಜಿಕ್ ಮತ್ತೆ ನಡೆಯುತ್ತೆ
ಕುಮಾರಸ್ವಾಮಿ ಅವರು ಮಾತನಾಡಿ, ಜಾತ್ಯಾತೀತ ಶಕ್ತಿಗಳನ್ನು ಬಲಪಡಿಸಲು ಚಂದ್ರಬಾಬು ನಾಯ್ಡು ಅವರು ಮುಂದೆಬಂದಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಕಾರ್ಯಕ್ಕೆ ಬೆಂಬಲ ಕೇಳುತ್ತಿದ್ದಾರೆ. ದೇವೇಗೌಡ ಹಾಗೂ ನಾಯ್ಡು ಅವರು ಹಳೆಯ ಮಿತ್ರರು ಅವರಿಬ್ಬರ ಪುನರ್ ಸಂಗಮದಿಂದ 1996 ರ ಪ್ರಯೋಗ ಮರಳುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಅವರು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications