#ಮಿಟೂ: ಹಿರಿಯ ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು, ಅಕ್ಟೋಬರ್ 20: ಹಿರಿಯ ನಟ ಅರ್ಜುನ್ ಸರ್ಜಾ ಅವರ ಮೇಲೆ ಕನ್ನಡ ಖ್ಯಾತ ನಟಿ ಶೃತಿ ಹರಿಹರನ್ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
'ವಿಸ್ಮಯ' ಚಲನಚಿತ್ರ ಶೂಟಿಂಗ್ ವೇಳೆ ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಶೃತಿ ಹರಿಹರನ್ ಅವರು ಕನ್ನಡ ಮ್ಯಾಗಜೀನ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ನಂತರ ಅದೇ ಘಟನೆ ಬಗ್ಗೆ ವಿವರವಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿಯೂ ಬರೆದುಕೊಂಡಿದ್ದಾರೆ.
'ವಿಸ್ಮಯ' ಚಿತ್ರದ ಶೂಟಿಂಗ್ನ ತಾಲೀಮಿನ ಸಮಯದಲ್ಲಿ ಅರ್ಜುನ್ ಸರ್ಜಾ ಅವರು ಶೂಟಿಂಗ್ ತಂಡದ ಎದುರೇ ತಮ್ಮನ್ನು ಅಸಭ್ಯವಾಗಿ ತಬ್ಬಿಕೊಂಡು ಬೆನ್ನಮೇಲೆ ದುರುದ್ದೇಶದಿಂದ ಕೈ ಆಡಿಸಿದರು ಎಂದು ಶೃತಿ ಹರಿಹರನ್ ಅವರು ಆರೋಪಿಸಿದ್ದಾರೆ.

ಆ ವೇಳೆಯೇ ಚಿತ್ರದ ನಿರ್ದೇಶಕರ ಬಳಿ ನಾನು ಈ ಘಟನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ ಮತ್ತು ನನ್ನನ್ನು ತಾಲೀಮಿಗೆ ಕರೆಯಬೇಡಿ ನೇರವಾಗಿ ಶೂಟಿಂಗ್ನಲ್ಲಿ ಮಾತ್ರವೇ ನಾನು ಭಾಗವಹಿಸುತ್ತೇನೆ ಎಂದು ಹೇಳಿದ್ದೆ. ನನಗೆ ಇಷ್ಟವಿಲ್ಲದಿದ್ದರೂ ವೃತ್ತಿಪರ ನಟಿಯಾಗಿ ನಾನು ಶೂಟಿಂಗ್ನಲ್ಲಿ ಭಾಗವಹಿಸಿದೆ ಎಂದು ಅವರು ಹೇಳಿದ್ದಾರೆ.
ಶೂಟಿಂಗ್ ಮುಗಿದ ನಂತರ ಅರ್ಜುನ್ ಸರ್ಜಾ ಅವರು ನನ್ನನ್ನು ಕರೆಯುತ್ತಿದ್ದರು ಆದರೆ ನಾನು ಅವರ ಮಾತಿಗೆ ಗಮನಕೊಡುತ್ತಿರಲಿಲ್ಲ, ಅವರು ನನಗೆ ಕೆಲಸ ಮಾಡಲಾರದ ಸ್ಥಿತಿಯನ್ನು ಅಲ್ಲಿ ನಿರ್ಮಿಸಿಬಿಟ್ಟರು ಎಂದು ಸಹ ಅವರು ಬರೆದುಕೊಂಡಿದ್ದಾರೆ.
ಅಷ್ಟೆ ಅಲ್ಲದೆ ತಾವು ಎಳವೆಯಿಂದ ವಿವಿಧ ಹಂತದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿರುವುದಾಗಿಯೂ ಅವರ ತಮ್ಮ ಸುದೀರ್ಘ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. #ಮಿಟೂ ಅಭಿಯಾನ ಉತ್ತಮವಾಗಿ ನಡೆಯುತ್ತಿದ್ದು, ಇದರಿಂದ ಚಿತ್ರರಂಗ ಸ್ವಚ್ಛವಾದರೆ ಉತ್ತಮ ಎಂದೂ ಅವರು ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications