Get Updates
Get notified of breaking news, exclusive insights, and must-see stories!

ಸುಮ್ಮನಹಳ್ಳಿಯಿಂದ ತಾವರೆಕೆರೆವರೆಗೆ ಮೆಟ್ರೋ ವಿಸ್ತರಣೆ; ಆಸ್ತಿ ಬೆಲೆ ಹೆಚ್ಚಳ: ಅಪ್‌ಡೇಟ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಆಗಸ್ಟ್‌ 30: ಮಾಗಡಿಗೆ ಶ್ರೀರಂಗ ಕುಡಿಯುವ ನೀರಿನ ಯೋಜನೆ ನೀಡಿದ್ದು ಕಾಂಗ್ರೆಸ್ ಸರ್ಕಾರ. ಈಗ ಸತ್ತೇಗಾಲದಿಂದ ಕ್ಷೇತ್ರದ 44 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಯೋಜನೆ, 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ, ಮಂಚನಬೆಲೆ ಅಣೆಕಟ್ಟು ಕೆಳಭಾಗದ ಅಭಿವೃದ್ದಿಗೆ ರೂ.13 ಕೋಟಿ, ರೂ.35 ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಸೇರಿದಂತೆ ನೀರಾವರಿ ಇಲಾಖೆಯಿಂದ ಕ್ಷೇತ್ರದ ಅಭಿವೃದ್ದಿಗೆ ರೂ.100 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಮಾಗಡಿ ಯೋಜನಾ ಪ್ರಾಧಿಕಾರದಿಂದ ಗೌರಮ್ಮ ಕೆರೆ ಅಭಿವೃದ್ಧಿಗೆ ರೂ.20 ಕೋಟಿ ನೀಡಲಾಗಿದೆ. ಇ ಸ್ವತ್ತನ್ನು 1200 ಜನರಿಗೆ ವಿತರಣೆ ಮಾಡಲಾಗಿದ್ದು ಮಿಕ್ಕವರಿಗೂ ಶೀಘ್ರದಲ್ಲೇ ವಿತರಣೆ ಮಾಡಲಾಗುವುದು. ಇಂತಹ ನೂರಾರು ಕೆಲಸಗಳನ್ನು ನಿಮಗಾಗಿ ನೀಡಿದ್ದೇವೆ. ಸುಮ್ಮನಹಳ್ಳಿಯಿಂದ ತಾವರೆಕೆರೆವರೆಗೆ ಮೆಟ್ರೋ ಮಾರ್ಗ ವಿಸ್ತರಣೆಯಾಗಲಿದೆ. ಇದರಿಂದ ನಿಮ್ಮ ಕ್ಷೇತ್ರಕ್ಕೆ ಹೆಚ್ಚು ಲಾಭವಾಗಲಿದೆ ಎಂದು ತಿಳಿಸಿದರು.

Metro Line To Be Extended From Summanahalli To Tavarekere Says DK Shivakumar

ಆರೋಗ್ಯ ಕ್ಷೇತ್ರದಿಂದ ರೂ.40 ಕೋಟಿ ವೆಚ್ಚದ ಕಾಮಗಾರಿಗೆ ಆರೋಗ್ಯ ಸಚಿವರು ಮತ್ತು ನೂತನ ಬಸ್ ನಿಲ್ದಾಣ ಹಾಗೂ ಡಿಪೋ ಬಗ್ಗೆ ಸಾರಿಗೆ ಸಚಿವರು ವಾಗ್ದಾನ ನೀಡಿದ್ದಾರೆ. ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಎನ್ನುವುದಕ್ಕೆ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ಕೆಲಸಗಳೇ ಸಾಕ್ಷಿ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಆದರೆ ಕೆಂಪು ಬಂಡೆ ನಿಮ್ಮ ಬಾಲಕೃಷ್ಣ. ಇವರು ಗಟ್ಟಿಯಾಗಿ ಬಂಡೆಯಂತೆ ಕುಳಿತುಕೊಂಡು ಕ್ಷೇತ್ರದ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ. ಎಲ್ಲೇ ಹೋದರು ಕ್ಷೇತ್ರದ ಬಗ್ಗೆ ಅರ್ಜಿ ಹಿಡಿದುಕೊಂಡು ಬರುತ್ತಾರೆ. ಕ್ಷೇತ್ರದ ಜನರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಮಾಗಡಿ ಕ್ಷೇತ್ರ ಬಾಲಕೃಷ್ಣ ಅವರದ್ದಲ್ಲ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರ ಸ್ವಂತ ಕ್ಷೇತ್ರವಿದ್ದಂತೆ. ಕನಕಪುರದಲ್ಲಿ ಯಾವ ರೀತಿ ಕೆಲಸ ಮಾಡುತ್ತಾ ಇದ್ದೇವೋ ಅದೇ ರೀತಿ ಇಲ್ಲಿಯೂ ಕೆಲಸ ಮಾಡುತ್ತೇವೆ ಎಂದರು.

ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದಿದ್ದರೆ ಬದುಕಿಗೆ ಅವಮಾನ. ದೇವರು ನಮಗೆ ಕೊಟ್ಟ ಅವಕಾಶ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಸಕ ಬಾಲಕೃಷ್ಣ ಅವರು ಜನರ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ. ಈ ಐದು ಬೆರಳು ಸೇರಿ ಕೈ ಗಟ್ಟಿಯಾಯಿತು ಅದೇ ರೀತಿ ನಿಮ್ಮಿಂದ ಬಾಲಕೃಷ್ಣ ಅವರ ಕೈಗೆ ಶಕ್ತಿ ಬಂದಿದೆ. ನೀವು ಕೊಟ್ಟ ಮತಕ್ಕೆ ಅಭಿವೃದ್ದಿ ಮುಖಾಂತರ ಮರಳಿ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ನೀಡಿದ ಮತಕ್ಕಿಂತ ಹೆಚ್ಚಿನ ಮತ ನೀಡಿ 2028 ರಲ್ಲಿ ಗೆಲ್ಲಿಸಬೇಕು. ಇದೇ ನೀವು ನನಗೆ ನೀಡುವ ಸನ್ಮಾನ ಎಂದರು.

ಜನ ಸಾಮಾನ್ಯರ ಬದುಕು ಏಳಿಗೆಯಾಗಬೇಕು, ಎಲ್ಲರ ಬದುಕಿನಲ್ಲಿ ಹೊಸ ರೂಪ ಕಾಣಬೇಕು, ಎಲ್ಲರ ಆಸ್ತಿ ಮೌಲ್ಯ ಹೆಚ್ಚಳವಾಗಬೇಕು ಎನ್ನುವ ಕಾರಣಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದೇವೆ. ಜನತಾದಳದ ನಾಯಕರು ದೆಹಲಿಗೆ ಹೋಗಿ ಜಿಲ್ಲೆಯ ಹೆಸರು ಬದಲಾವಣೆ ಸಾಧ್ಯವಿಲ್ಲ ಎಂದು ಬರೆಸಿದ್ದರು. ಕುಮಾರಣ್ಣ ಇದರ ವಿರುದ್ಧ ಬಂದ್ ಮಾಡಿಸಿದರು. ಆದರೂ ಸಹ ಹೆಸರು ಬದಲಾವಣೆಗಾಗಿ ನಾನು ದೊಡ್ಡ ಹೋರಾಟ ಮಾಡಿದೆ ಎಂದು ತಿಳಿಸಿದರು.

ಅವರ ಬದುಕನ್ನು ಏಳಿಗೆ ಮಾಡಿಕೊಳ್ಳಬೇಕು ಎಂದು ಇದೇ ಕುಮಾರಣ್ಣ ಹಾಸನದಿಂದ ಬೆಂಗಳೂರಿಗೆ ಬಂದು ಆಸ್ತಿ ತೆಗೆದುಕೊಂಡಿಲ್ಲವೇ? ರಾಮನಗರದಲ್ಲಿ ನೀವು, ನಿಮ್ಮ ತಂದೆಯವರು ರಾಜಕಾರಣ ಮಾಡಿದರೂ ನಾವು ಬೇಸರಿಸಿಕೊಳ್ಳಲಿಲ್ಲ. ನೀವು ನಿಮ್ಮ ಊರಿನಲ್ಲಿ ಆಸ್ತಿ ತೆಗೆದುಕೊಳ್ಳದೇ ಇಲ್ಲೇಕೆ ಆಸ್ತಿ ತೆಗೆದುಕೊಂಡಿರಿ? ಎಂದು ಪ್ರಶ್ನಿಸಿದರು.

ಕೆಲವರು ರಾಮನಗರ ಜಿಲ್ಲೆ ಎಂದು ಹೇಳುತ್ತಿದ್ದರು. ಇದು ಬೆಂಗಳೂರು ದಕ್ಷಿಣ ಜಿಲ್ಲೆ. ಶಾಸಕರಾದ ಹುಲಿಕಟ್ಟೆ ಬಾಲಕೃಷ್ಣ, ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್, ಎಚ್.ಡಿ ಕುಮಾರಸ್ವಾಮಿ ಹೀಗೆ ನಮ್ಮ ಗುರುತನ್ನು ಅಳಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಬೆಂಗಳೂರು ಜಿಲ್ಲೆಯವರಾದ ನಮ್ಮ ಅಸ್ಮಿತೆಯನ್ನು ಬಿಟ್ಟು ಕೊಡಲು ಸಾಧ್ಯವೇ? ಎಂದರು ಪ್ರಶ್ನಿಸಿದರು. ನಾನು ಹಿಂದೆ ಬೆಂಗಳೂರಿನ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದೆ. ಹೀಗಿರುವಾಗ ನಮ್ಮ ಇತಿಹಾಸ ಕಳೆದುಕೊಳ್ಳಲು ಸಾಧ್ಯವೇ? ಜಿಲ್ಲೆಯ ಹೆಸರು ಬದಲಾವಣೆಯಿಂದ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಬೆಂಗಳೂರನ್ನು ಅಂತರರಾಷ್ಟ್ರೀಯ ನಗರವನ್ನಾಗಿ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಿದ್ದೇವೆ, ಮೆಟ್ರೋ ಸುರಂಗಮಾರ್ಗ, ಡಬಲ್ ಡೆಕ್ಕರ್ ಹೀಗೆ ಹಲವಾರು ಯೋಜನೆ ರೂಪಿಸಿದ್ದೇವೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+