ಮಧ್ಯಂತರ ಚುನಾವಣೆ ನಮ್ಮ ಆಯ್ಕೆ ಅಲ್ಲ: ಯಡಿಯೂರಪ್ಪ
Recommended Video
ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಅಳಿವೋ ಉಳಿವೋ ಎಂಬುದು ಮಂಗಳವಾರದಂದು ಬಹುತೇಕ ಖಾತ್ರಿ ಆಗಲಿದೆ. ಆದರೆ ಮಧ್ಯಂತರ ಚುನಾವಣೆ ಆಗಬಹುದಾ ಎಂಬ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇನೋ 'ಇಲ್ಲ, ನಾವು ಸರಕಾರ ರಚನೆ ಮಾಡುತ್ತೇವೆ' ಎಂದು ಹೇಳಿದ್ದಾರೆ.
ವಿಧಾನಸಭೆ ಕಾಲಾವಧಿ ಇನ್ನೂ ನಾಲ್ಕು ವರ್ಷ ಇದೆ. ಇಂಥ ಸಮಯದಲ್ಲಿ ಚುನಾವಣೆಗೆ ಹೋಗುವುದಿಲ್ಲ. ಆ ಮೂಲಕ ಸರಕಾರದ ಹಣವನ್ನು ಪೋಲು ಮಾಡುವುದಿಲ್ಲ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಬಂದಾಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆಗೆ ಹೋಗುವ ಬಗ್ಗೆ ಬಿಜೆಪಿಯ ಬಹುತೇಕ ನಾಯಕರು ಉತ್ಸುಕರಾಗಿದ್ದರು.

ಕರ್ನಾಟಕದ ಇಪ್ಪತ್ತೆಂಟು ಸ್ಥಾನಗಳ ಪೈಕಿ ಇಪ್ಪತ್ತೈದರಲ್ಲಿ ಗೆದ್ದಿದ್ದ ಬಿಜೆಪಿ ಅತ್ಯಂತ ವಿಶ್ವಾಸದಲ್ಲಿ ಇತ್ತು. ಆದರೆ ಯಡಿಯೂರಪ್ಪ ಅವರು ಈಗ ಆ ನಿಲುವಿನಿಂದ ಹಿಂದೆ ಸರಿದಂತೆ ಇದೆ. ಇನ್ನು ಸದ್ಯಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಇದೇ ಸಮಯದಲ್ಲಿ ಅವರು ಹೇಳಿದ್ದಾರೆ.












Click it and Unblock the Notifications