ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಮುಂದುವರಿದ ಯುದ್ಧ ಪರಿಸ್ಥಿತಿ ಮತ್ತು ಭೂರಾಜಕೀಯ ಉದ್ವಿಗ್ನತೆ ಜಾಗತಿಕ ವಿಮಾನಯಾನ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹಲವಾರು ದೇಶಗಳ ವಾಯುಪ್ರದೇಶಗಳಲ್ಲಿ ನಿರ್ಬಂಧಗಳು, ವಿಮಾನ ಮಾರ್ಗ ಬದಲಾವಣೆಗಳು ಹಾಗೂ ದಿಢೀರ್ ವಿಮಾನಗಳ ಸಂಚಾರ ರದ್ದತಿ ಹೆಚ್ಚುತ್ತಿರುವುದರಿಂದ ಜಾಗತಿಕ ವಿಮಾನ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇದರ ಪರಿಣಾಮವಾಗಿ ಯುರೋಪ್, ಏಷ್ಯಾ ಮತ್ತು ಆಫ್ರಿಕಾ ನಡುವಿನ ಹಲವಾರು ವಿಮಾನ ಮಾರ್ಗಗಳಲ್ಲಿ ಪ್ರಯಾಣ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ.
ಇರಾನ್-ಇಸ್ರೇಲ್ ಯುದ್ಧ ಪರಿಣಾಮ ಭಾರತದ ಪ್ರವಾಸೋದ್ಯಮ ಮತ್ತು ಟ್ರಾವೆಲ್ಸ್ ಕ್ಷೇತ್ರದ ಮೇಲೂ ಆಗಿದೆ ಎಂದು ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಕೆ. ರಾಧಾಕೃಷ್ಣ ಹೊಳ್ಳ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ದೃಷ್ಟಿಯಿಂದ ಈ ಪರಿಸ್ಥಿತಿ ವಿಶೇಷವಾಗಿ ಗಂಭೀರವಾಗಿದೆ. ಭಾರತದಿಂದ ವಿಶ್ವದ ಅನೇಕ ದೇಶಗಳಿಗೆ ಹೋಗುವ ವಿಮಾನ ಸಂಚಾರವು ಬಹುಪಾಲು ಮಧ್ಯಪ್ರಾಚ್ಯದ ಪ್ರಮುಖ ಹಬ್ಗಳಾದ ದುಬೈ, ದೋಹಾ ಮತ್ತು ಅಬುಧಾಬಿ ಮೂಲಕ ಸಾಗುತ್ತದೆ. ಈ ಮಾರ್ಗಗಳಲ್ಲಿ ಉಂಟಾಗಿರುವ ವ್ಯತ್ಯಯಗಳಿಂದ ವಿಮಾನ ಸೇವೆಗಳ ವೇಳಾಪಟ್ಟಿಯಲ್ಲಿ ಬದಲಾವಣೆಗಳು ಕಂಡು ಬರುತ್ತಿವೆ. ಪ್ರಯಾಣ ವೆಚ್ಚ ಹೆಚ್ಚಳದಿಂದ ಅನೇಕರು ತಮ್ಮ ಪ್ರಯಾಣವನ್ನು ಮುಂದೂಡಲು ಅಥವಾ ರದ್ದುಗೊಳಿಸಲು ಮುಂದಾಗುತ್ತಿದ್ದಾರೆ.
ಅರಬ್ ರಾಷ್ಟ್ರಗಳು ಮತ್ತು ಮಧ್ಯಪ್ರಾಚ್ಯ ದೇಶಗಳಿಂದ ಪ್ರತಿದಿನವೂ ಸುಮಾರು 25 ರಿಂದ 30 ವಿಮಾನಗಳು ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರುತ್ತಿದ್ದವು. ಆದರೆ ಇತ್ತೀಚಿನ ಯುದ್ಧ ಪರಿಸ್ಥಿತಿ ಮತ್ತು ಆಕ್ರಮಣಕಾರಿ ಭದ್ರತಾ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಅನೇಕ ವಿಮಾನ ಕಂಪನಿಗಳು ತಮ್ಮ ಹಾರಾಟವನ್ನು ಸ್ಥಗಿತಗೊಳಿಸಿವೆ. ಇದರಿಂದ ವಿದೇಶಿ ಸಂಪರ್ಕ ಗಂಭೀರವಾಗಿ ಕುಂಠಿತವಾಗಿದೆ. ಇದರ ಪರಿಣಾಮವಾಗಿ ದೇಶಾದ್ಯಂತ ವಿಮಾನಯಾನ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು ಶೇ. 40ರವರೆಗೆ ಕುಸಿತ ಕಂಡುಬಂದಿದ್ದು, ಬೆಂಗಳೂರಿನಂತಹ ಪ್ರಮುಖ ಅಂತರರಾಷ್ಟ್ರೀಯ ಪ್ರವೇಶ ದ್ವಾರಕ್ಕೆ ಇದು ನೇರ ಹೊಡೆತ ನೀಡಿದೆ ಎಂದು ಅವರು ವಿವರಿಸಿದರು.
ಮಧ್ಯಪ್ರಾಚ್ಯ ಪ್ರದೇಶವು ಭಾರತೀಯ ಪ್ರವಾಸಿಗರಿಗಾಗಿ ಪ್ರಮುಖ ಕೇಂದ್ರವಾಗಿದೆ. ಪ್ರತಿ ವರ್ಷ ಸುಮಾರು 8 ರಿಂದ 9 ಮಿಲಿಯನ್ ಭಾರತೀಯರು ಗಲ್ಫ್ ರಾಷ್ಟ್ರಗಳಿಗೆ ಪ್ರಯಾಣಿಸುತ್ತಾರೆ, ಜೊತೆಗೆ ಸುಮಾರು 13 ಮಿಲಿಯನ್ ಭಾರತೀಯರು ಆ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಉದ್ಯೋಗದಲ್ಲಿದ್ದಾರೆ. ಈ ನಿರಂತರ ಸಂಚಾರದಲ್ಲಿ ಉಂಟಾಗುವ ವ್ಯತ್ಯಯವು ಭಾರತದ ಪ್ರವಾಸೋದ್ಯಮ ಮತ್ತು ವಿಮಾನಯಾನ ಕ್ಷೇತ್ರಕ್ಕೆ ಗಂಭೀರ ಪರಿಣಾಮ ಬೀರುತ್ತದೆ.
ಇದರ ಜೊತೆಗೆ ವೈದ್ಯಕೀಯ ಪ್ರವಾಸೋದ್ಯಮಕ್ಕೂ ಇದರಿಂದ ಹೊಡೆತ ಬೀಳುವ ಸಾಧ್ಯತೆ ಇದೆ. ಭಾರತವು ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡುವ ದೇಶವಾಗಿ ಜಾಗತಿಕವಾಗಿ ಪ್ರಸಿದ್ಧವಾಗಿದೆ. ಪ್ರತಿ ವರ್ಷ ಸುಮಾರು 6 ರಿಂದ 7 ಲಕ್ಷ ವಿದೇಶಿ ರೋಗಿಗಳು ಚಿಕಿತ್ಸೆಗಾಗಿ ಭಾರತಕ್ಕೆ ಬರುತ್ತಾರೆ, ಇವರಲ್ಲಿ ಗಮನಾರ್ಹ ಸಂಖ್ಯೆಯವರು ಗಲ್ಫ್ ರಾಷ್ಟ್ರಗಳಿಂದ ಆಗಿರುತ್ತಾರೆ. ವಿಮಾನ ಸಂಚಾರದಲ್ಲಿ ಉಂಟಾಗಿರುವ ಅಡಚಣೆಗಳು ಮತ್ತು ಹೆಚ್ಚುತ್ತಿರುವ ಪ್ರಯಾಣ ವೆಚ್ಚದಿಂದ ಈ ಕ್ಷೇತ್ರವೂ ಕುಸಿತ ಎದುರಿಸುವ ಸಾಧ್ಯತೆ ಇದೆ.
ಮೋಜು ಮಸ್ತಿಗೆ ಬ್ರೇಕ್
ಈ ಎಲ್ಲಾ ಬೆಳವಣಿಗೆಗಳ ನೇರ ಪರಿಣಾಮ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಸಾರಿಗೆ ಕ್ಷೇತ್ರದಲ್ಲಿಯೂ ಕಾಣಿಸುತ್ತಿದೆ. ಅಂತಾರಾಷ್ಟ್ರೀಯ ಪ್ರವಾಸಿಗರು, ವಿಶೇಷವಾಗಿ ಬಿಸಿನೆಸ್ ಮತ್ತು ಹೈಎಂಡ್ ಪ್ರವಾಸಿಗರು, ಲಕ್ಸುರಿ ಟ್ಯಾಕ್ಸಿ ಮತ್ತು ಪ್ರವಾಸಿ ವಾಹನ ಸೇವೆಗಳ ಪ್ರಮುಖ ಗ್ರಾಹಕರು. ಆದರೆ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡುಬರುತ್ತಿರುವುದರಿಂದ ಹಲವಾರು ಲಕ್ಸುರಿ ಟ್ಯಾಕ್ಸಿಗಳು ಮತ್ತು ಪ್ರವಾಸಿ ವಾಹನಗಳು ಈಗ ನಿಂತಂತೆಯೇ ಇರುವ ಪರಿಸ್ಥಿತಿ ಉಂಟಾಗಿದೆ. ಟ್ರಾವೆಲ್ ಏಜೆನ್ಸಿಗಳು ಮತ್ತು ಪ್ರವಾಸ ವ್ಯವಸ್ಥಾಪಕರಿಗೂ ಬುಕಿಂಗ್ ರದ್ದತಿಗಳ ಪ್ರಮಾಣ ಹೆಚ್ಚುತ್ತಿದೆ ಎಂದರು.
ಇದರ ಜೊತೆಗೆ, ಹೆಚ್ಚಿನ ಅಂತಾರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು ನಗರವನ್ನು ಅವಲಂಬಿಸಿದೆ. ಇದರಿಂದ ಕರ್ನಾಟಕದ ಟ್ರಾವೆಲ್ಸ್ ಉದ್ಯಮಿಗಳಿಗೆ ಇನ್ನಷ್ಟು ಗಂಭೀರ ಹೊಡೆತ ಬಿದ್ದಿದೆ. ಬೆಂಗಳೂರು ಮೂಲಕವೇ ರಾಜ್ಯದ ವಿವಿಧ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವ ಹೈ-ವ್ಯಾಲ್ಯೂ ವಾಹನ ಬಳಕೆ ಮಾಡುವ ಪ್ರವಾಸಿಗರ ಕೊರತೆಯಿಂದ ಟ್ರಾವೆಲ್ಸ್ ಕಂಪನಿಗಳು, ಲಕ್ಸುರಿ ಕಾರ್ ಸೇವೆಗಳು ಮತ್ತು ಚಾಲಕರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ಆರ್ಥಿಕ ಹೊರೆ - ಉದ್ಯಮದ ಬದುಕಿಗೆ ಸವಾಲು, ವಾಸ್ತವ ಸ್ಥಿತಿ
ಈ ಸಂಕಷ್ಟವು ಕೇವಲ ಬೇಡಿಕೆ ಕುಸಿತಕ್ಕೆ ಮಾತ್ರ ಸೀಮಿತವಾಗಿಲ್ಲ; ಇದು ಉದ್ಯಮದ ಆರ್ಥಿಕ ಸ್ಥಿರತೆಯನ್ನೇ ಕುಸಿತಗೊಳಿಸುವ ಮಟ್ಟಕ್ಕೆ ತಲುಪಿದೆ. ಟ್ರಾವೆಲ್ಸ್ ಉದ್ಯಮಿಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಒಂದಷ್ಟು ಸಂಕ್ಷಿಪ್ತ ಮಾಹಿತ ಇಲ್ಲಿದೆ.
* ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಾಲಗಳ EMI ಪಾವತಿ ಒತ್ತಡ
* ವಾಹನಗಳ ಇನ್ಸುರನ್ಸ್, ಟ್ಯಾಕ್ಸ್ ಮತ್ತು ನಿರ್ವಹಣಾ ವೆಚ್ಚಗಳು
* ಚಾಲಕರಿಗೆ ಮಾಸಿಕ ವೇತನ ನೀಡುವ ಹೊಣೆ
* ವಾಹನಗಳು ನಿಲ್ಲುವ ಪರಿಸ್ಥಿತಿಯಲ್ಲಿದ್ದರೂ ಸ್ಥಿರ ವೆಚ್ಚಗಳ ನಿರಂತರ ಭಾರ
ಆದಾಯವು ತೀವ್ರವಾಗಿ ಕುಸಿದಿರುವಾಗ ಈ ಎಲ್ಲಾ ಖರ್ಚುಗಳನ್ನು ನಿರ್ವಹಿಸುವುದು ಬಹುತೇಕ ಉದ್ಯಮಿಗಳಿಗೆ ಅಸಾಧ್ಯವಾಗುತ್ತಿದೆ. ಇದರಿಂದ ಅನೇಕರು ಸಾಲದ ಬಾಧೆಗೆ ಸಿಲುಕುವ ಭೀತಿ ಎದುರಿಸುತ್ತಿದ್ದಾರೆ ಎಂದು ವಾಹನ ಚಾಲಕರು, ಮಾಲೀಕರ ಸಂಕಷ್ಟ, ಪ್ರವಾಸೋದ್ಯಮ ಸ್ಥಿತಿಗತಿ ವಿವರಿಸಿದರು.
ವ್ಯಾಪಕ ಆರ್ಥಿಕ ಪರಿಣಾಮ
ಭಾರತದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಮಹತ್ವದ ಪಾತ್ರವಹಿಸುತ್ತದೆ. ಈ ಕ್ಷೇತ್ರವು ದೇಶದ ಒಟ್ಟು ಆರ್ಥಿಕ ಉತ್ಪಾದನೆಯ ಸುಮಾರು 5-6 ಶೇಕಡಾ ಪಾಲು ನೀಡುವುದರ ಜೊತೆಗೆ 4 ಕೋಟಿ ಜನರಿಗೆ ನೇರ ಹಾಗೂ ಪರೋಕ್ಷ ಉದ್ಯೋಗವನ್ನು ಒದಗಿಸುತ್ತದೆ. ಆದ್ದರಿಂದ ಅಂತಾರಾಷ್ಟ್ರೀಯ ಪ್ರಯಾಣದಲ್ಲಿ ಉಂಟಾಗುವ ಯಾವುದೇ ದೊಡ್ಡ ವ್ಯತ್ಯಯವು ಆರ್ಥಿಕವಾಗಿ ವ್ಯಾಪಕ ಪರಿಣಾಮ ಬೀರುವ ಸಾಧ್ಯತೆ ಇದೆ.
ಕೊರೋನಾ ಮಹಾಮಾರಿಯಿಂದ ಭಾರೀ ಹೊಡೆತ ಅನುಭವಿಸಿದ ನಂತರ ಇದೀಗಷ್ಟೇ ಚೇತರಿಕೆ ಕಂಡುಕೊಳ್ಳುತ್ತಿದ್ದ ಪ್ರವಾಸೋದ್ಯಮ ಮತ್ತು ಟ್ರಾವೆಲ್ಸ್ ಕ್ಷೇತ್ರಕ್ಕೆ ಮಧ್ಯಪ್ರಾಚ್ಯದ ಈ ಸಂಘರ್ಷ ಮತ್ತೊಂದು ದೊಡ್ಡ ಸವಾಲಾಗಿ ಎದುರಾಗಿದೆ. ಈ ಪರಿಸ್ಥಿತಿ ಮುಂದುವರಿದರೆ ಟ್ರಾವೆಲ್ಸ್ ಮಾಲೀಕರು, ಚಾಲಕರು, ಟೂರ್ ಆಪರೇಟರ್ಗಳು ಹಾಗೂ ಈ ಕ್ಷೇತ್ರದ ಮೇಲೆ ಅವಲಂಬಿತವಾಗಿರುವ ಸಾವಿರಾರು ಕುಟುಂಬಗಳ ಜೀವನೋಪಾಯಕ್ಕೂ ಗಂಭೀರ ಪರಿಣಾಮ ಬೀರುವ ಸಂಭವವಿದೆ ಎಂದು ತಿಳಿಸಿದರು.
-
ಇರಾನ್ ಮೇಲೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಣೆ, ಇರಾನ್ ಮುಂದೆ ಮಂಡಿಯೂರಿತೇ ಅಮೆರಿಕ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ














Click it and Unblock the Notifications