ಮಕ್ಕಳನ್ನು ಹಾಸ್ಟೆಲ್ ಗೆ ಕಳುಹಿಸಿದರೆ, ಅವರು ತಂದೆತಾಯಿಯನ್ನು ವೃದ್ದಾಶ್ರಮಕ್ಕೆ ಕಳುಹಿಸುತ್ತಾರೆ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ, ಸೆಪ್ಟೆಂಬರ್ 28: ಜನರ ಮನಸ್ಸಿನಲ್ಲಿ ಸ್ವಾರ್ಥ ಹೆಚ್ಚುತ್ತಿದ್ದು, ಸಾಮಾಜಿಕ ಕಳಕಳಿ ಕುಸಿಯುತ್ತಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕೆಂಬ ಮನಸ್ಸುಗಳು ಹೆಚ್ಚಬೇಕಾಗಿದೆ ಎಂದು ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಈ ಕುರಿತು ಮಾತನಾಡಿದ ಅವರು, ತಾನು ಜನ್ಮ ಕಳೆದುಕೊಂಡರೂ ಮಗುವಿಗೆ ಜನ್ಮ ನೀಡುವ ತ್ಯಾಗಮಯಿ ಯಾರಾದರೂ ಇದ್ದರೆ ಅದು ತಾಯಿ ಮಾತ್ರ. ಏನೇ ಮಾಡಿದರೂ ತಾಯಿ ಋಣ ತೀರಿಸುವುದು ಸಾಧ್ಯವಿಲ್ಲ. ತಾಯಿ ಮಡಿಲು ದೊಡ್ಡ ನ್ಯಾಯಾಲಯ ಇದ್ದಂತೆ ಎಂದು ನುಡಿದರು.

ಪಾಲಕರು ತಮ್ಮ ಮಕ್ಕಳನ್ನು ಕರೆತರಬೇಕು ಅವರಿಗೆ ತಾಯಿ ಮಹತ್ವ ಏನೆಂಬುದು ಅರಿವಿಗೆ ಬರುತ್ತದೆ. ಮಕ್ಕಳನ್ನು ವಸತಿ ಶಾಲೆಗೆ ಹಾಕಿದರೆ ತಂದೆ-ತಾಯಿಯ ಕಷ್ಟ ಅವರಿಗೆ ತಿಳಿಯದಾಗುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡದಿದ್ದರೆ ಮುಂದೆ ಅವರೇ ನಿಮ್ಮನ್ನು ವೃದ್ಧಾಶ್ರಮಗಳಿಗೆ ಕಳುಹಿಸುತ್ತಾರೆ ಎಂಬುದನ್ನು ಮರೆಯುವುದು ಬೇಡ. ನನ್ನ ತಾಯಿ ಹಾಲು-ಮೊಸರು ಮಾರಾಟ ಮಾಡಿ ನನ್ನ ಕಾಲೇಜು ಕಲಿಕೆಗೆ ಹಣ ನೀಡುತ್ತಿದ್ದರು ಎಂದು ತಮ್ಮ ತಾಯಿ ಮಮತೆಯನ್ನು ಸ್ಮರಿಸಿಕೊಂಡರು.
ಎಸ್.ಆರ್.ಬೊಮ್ಮಾಯಿ ಅವರೊಂದಿಗೆ ಕಾರ್ಯನಿರ್ವಹಿಸಿದ್ದೇನೆ. ಕೋರ್ಟ್ ತೀರ್ಪುವೊಂದರಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಅವರು ದೂರದೃಷ್ಟಿಯ ನಾಯಕರು ಆಗಿದ್ದರು. ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಹೆಸರಲ್ಲಿ ಟ್ರಸ್ಟ್ ಮಾಡಿ ಪುಸ್ತಕಗಳನ್ನು ಹೊರತರುವುದು ಸೇರಿದಂತೆ ಹಲವು ಯೋಜನೆ ಹಮ್ಮಿಕೊಂಡಿದ್ದಾರೆ. ನಾನು ಸಹ ನನ್ನ ತಾಯಿ ಸ್ಮರಣೆಗೆ ಅವ್ವ ಸೇವಾ ಟ್ರಸ್ಟ್ ಮಾಡಿದ್ದೇನೆ ಆದರೆ, ಪುಸ್ತಕಗಳನ್ನು ಹೊರತಂದಿಲ್ಲ. ಇಲ್ಲಿನ ಪ್ರೇರಣೆಯಿಂದ ತಾಯಿ ಕುರಿತಾಗಿ ಅವ್ವ ಸೇವಾ ಟ್ರಸ್ಟ್ ನಿಂದ ಪುಸ್ತಕಗಳನ್ನು ಹೊರತರುವುದಾಗಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಇದೊಂದು ಭಾವನಾತ್ಮಕ ಸಮಾರಂಭವಾಗಿದೆ. ವ್ಯಕ್ತಿ ಜನ್ಮಪೂರ್ವದ ಸಂಬಂಧವನ್ನು ತಾಯಿಯಿಂದ ಹೊಂದಲು ಮಾತ್ರ ಸಾಧ್ಯ. ತಾಯಿ ಸಂಬಂಧ ದೇವರಿಗಿಂತಲೂ ಮಿಗಿಲಾಗಿದೆ. ತಾಯಿ ಅಂತಃಕರಣಕ್ಕೆ ಬೆಲೆ ಕಟ್ಟಲಾಗುದು ತಾಯಿತನ ನಿರಂತರ ಹಾಗೂ ಶಾಶ್ವತದ್ದಾಗಿದೆ. ನನ್ನ ತಾಯಿ ಗಂಗಮ್ಮ ಅವರು ಆಧ್ಯಾತ್ಮಿಕವಾಗಿ ಆಳವಾದ ಚಿಂತನೆ ಹೊಂದಿದವರಾಗಿದ್ದರಲ್ಲದೆ, ಅವರೊಬ್ಬ ದೊಡ್ಡ ದೇಶಭಕ್ತೆಯಾಗಿದ್ದರು.
ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ಇದುವರೆಗೆ ತಾಯಿ ಕುರಿತಾಗಿ ಸುಮಾರು ಏಳು ಆವೃತ್ತಿಗಳಲ್ಲಿ ಪುಸ್ತಕಗಳನ್ನು ಹೊರತಂದಿದ್ದು, ಇನ್ನು ಮೂರು ಆವೃತ್ತಿ ಸೇರಿದಂತೆ ಒಟ್ಟು ೧೦ ಆವೃತ್ತಿಗಳನ್ನು ಹೊರತಲಿದ್ದು, ಇವುಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಲಾಗುವುದು ಇದರಿಂದ ಸುಮಾರು ೩-೪ ಪಿಎಚ್ಡಿಗಳನ್ನು ಮಾಡಬಹುದಾಗಿದೆ ಎಂದರು.
ಟ್ರಸ್ಟ್ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಲಿದ್ದು, ಬರುವ ದಿನಗಳಲ್ಲಿ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಸಂಸ್ಥೆಗಳನ್ನು ಆರಂಭಿಸುವ ಚಿಂತನೆ ಹೊಂದಿದೆ ಎಂದರು.
ಭರತ ಬೊಮ್ಮಾಯಿ ಸ್ವಾಗತಿಸಿ ಮಾತನಾಡಿ, ನನ್ನ ಅಜ್ಜಿ ಗೆಲುವಿನ ಕಡೆ ಹೋಗುವ ಬದಲು ಜ್ಞಾನದ ಕಡೆ ಹೋಗು ಎಂದು ಹೇಳುತ್ತಿದ್ದರು. ಅವರ ಸರಳತೆ, ಚಿಂತನೆಗಳು ನಮ್ಮ ಇಡೀ ಕುಟುಂಬದ ಮೇಲೆ ಪರಿಣಾಮ ಬೀರಿದ್ದು, ಅವುಗಳ ಪಾಲನೆ ಮಾಡುತ್ತಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಟ್ರಸ್ಟ್ನಿಂದ ಶಿಗ್ಗಾಂವಿ ನಮ್ಮ ಮನೆಯನ್ನೇ ಕೋವಿಡ್ ಆರೈಕೆ ಕೇಂದ್ರವಾಗಿಸಿ ಅಗತ್ಯ ನೆರವು ನೀಡಲಾಗಿತ್ತು. ಕಿಮ್ಸ್ ಕ್ಯಾನ್ಸರ್ ವಿಭಾಗಕ್ಕೆ ೨೫ ಲಕ್ಷ ರೂ. ನೀಡಲಾಗಿದೆ. ವಿದ್ಯಾರ್ಥಿ ವೇತನ, ಪುಸ್ತಕಗಳ ನೀಡಿಕೆ ಕಾರ್ಯ ಮಾಡಲಾಗುತ್ತಿದ್ದು, ಟ್ರಸ್ಟ್ ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ತೆಗೆದುಕೊಂಡಿದ್ದೇನೆ ಎಂದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications