ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಗೆ ನಾಲ್ವಡಿ ಹೆಸರು ಸೂಚಿಸಿದ ಅಶ್ವತ್ಥ್ ನಾರಾಯಣ
ಬೆಂಗಳೂರು, ಜನವರಿ 5: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಗೆ ಮೈಸೂರು ಒಡೆಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಸೂಚಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಜಾರಿಗೊಳಿಸಿದ್ದಕ್ಕಾಗಿ ತಮ್ಮ ತಮ್ಮ ಪಕ್ಷಗಳಿಗೆ ಕ್ರೆಡಿಟ್ ಪಡೆದುಕೊಳ್ಳಲು ಕರ್ನಾಟಕದ ರಾಜಕೀಯ ನಾಯಕರು ಕಸರತ್ತು ಮಾಡುತ್ತಿದ್ದಾರೆ. ಆದರೆ, ಈಗ ಬಿಜೆಪಿಯೊಳಗಿನ ನಾಯಕರು 119 ಕಿಮೀ ವ್ಯಾಪ್ತಿಯ ರಸ್ತೆಗೆ ಹೆಸರಿಡುವ ಬಗ್ಗೆ ಭಿನ್ನ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 10 ಪಥಗಳ ಎಕ್ಸ್ಪ್ರೆಸ್ವೇ ಈ ವರ್ಷದ ಜನವರಿ ಅಥವಾ ಫೆಬ್ರವರಿಯಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ.
ಉನ್ನತ ಶಿಕ್ಷಣ ಸಚಿವ ಅಶ್ಚತ್ಥ್ ನಾರಾಯಣ ಅವರು ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ ಹೆಸರು ಸೂಚಿಸಿದ್ದು, ಅದಕ್ಕೂ ಮೊದಲೇ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಪತ್ರ ಬರೆದು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಗೆ ನಾಲ್ವಡಿ ಕೃಷ್ಣರಾಜ ಒಡೆಯರ ಹೆಸರನ್ನು ಇಡುವಂತೆ ಮನವಿ ಮಾಡಿದ್ದರು.
ಇದಕ್ಕೂ ಹಿಂದೆ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಉತ್ತರ ಪ್ರದೇಶದ ಗಂಗಾ ಎಕ್ಸ್ಪ್ರೆಸ್ವೇ ಮತ್ತು ಯಮುನಾ ಎಕ್ಸ್ಪ್ರೆಸ್ವೇ ಮಾದರಿಯಲ್ಲಿ ಹೊಸ ಎಕ್ಸ್ಪ್ರೆಸ್ವೇಗೆ ಕಾವೇರಿ ಎಕ್ಸ್ಪ್ರೆಸ್ವೇ ಎಂದು ಹೆಸರಿಸುವಂತೆ ಮನವಿ ಮಾಡಿದ್ದರು. ಡಿಸೆಂಬರ್ 21, 2022 ರಂದು ಬರೆದ ಪತ್ರದಲ್ಲಿ ಅವರು, ಭಾಗಶಃ ತೆರೆಯಲಾದ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇಗೆ ಕಾವೇರಿ ಹೆಸರನ್ನು ಇಡಬಹುದು ಎಂದು ಸೂಚಿಸಿದ್ದರು.
ಮಾಜಿ ವಿದೇಶಾಂಗ ಸಚಿವ ಮತ್ತು ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಅವರು ಗಡ್ಕರಿ ಅವರಿಗೆ ಪತ್ರದಲ್ಲಿ ಎಕ್ಸ್ಪ್ರೆಸ್ವೇಗೆ ಹಿಂದಿನ ಮೈಸೂರು ರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಇಡುವಂತೆ ಮನವಿ ಮಾಡಿದ್ದಾರೆ. ನಾಲ್ವಡಿ ಅವರು ದೃಷ್ಠಿಯುಳ್ಳ ಆಡಳಿತಗಾರ ಭವಿಷ್ಯದ ಪೀಳಿಗೆಯಿಂದ ನೆನಪಿನಲ್ಲಿಟ್ಟುಕೊಳ್ಳುವುದು ಅಗತ್ಯ ಎಂದು ತಿಳಿಸಿದ್ದರು.

ದಿನೇಶ್ ಗೂಳಿಗೌಡರಿಂದ ಗಡ್ಕರಿಗೆ ಪತ್ರ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ಕೋರಿ ಕಾಂಗ್ರೆಸ್ ಎಂಎಲ್ಸಿಗಳಾದ ಮಧು ಜಿ ಮಾದೇಗೌಡ ಮತ್ತು ದಿನೇಶ್ ಗೂಳಿಗೌಡ ಅವರು ಗಡ್ಕರಿ ಅವರಿಗೆ ಪತ್ರ ಬರೆದ ಕೆಲವು ದಿನಗಳ ನಂತರ ಎಸ್ಎಂ ಕೃಷ್ಣ ಅವರು ಪತ್ರ ಬರೆದಿದ್ದರು. ಈ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಾಣ ಕೂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ಕೋರಿದ್ದಾರೆ.

ಅಂದಾಜು ರೂ. 8,066 ಕೋಟಿ ವೆಚ್ಚ
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಇದು ಭಾರತಮಾಲಾ ಉಪ ಯೋಜನೆ ಹಂತ-1 ರ ಅಡಿಯಲ್ಲಿ ಹೈಬ್ರಿಡ್ ಆನ್ಯುಟಿ ಮಾಡೆಲ್ (ಎಚ್ಎಎಂ) ಅಡಿಯಲ್ಲಿ ಅಂದಾಜು ರೂ. 8,066 ಕೋಟಿ ವೆಚ್ಚವಾಗಲಿದೆ. ಎಕ್ಸ್ಪ್ರೆಸ್ವೇ ಉದ್ಘಾಟನೆಯಿಂದ ಬೆಂಗಳೂರು- ಮೈಸೂರು ನಡುವಿನ ಪ್ರಯಾಣದ ಅವಧಿ 150 ನಿಮಿಷದಿಂದ 90 ನಿಮಿಷಕ್ಕೆ ಕಡಿಮೆಯಾಗುತ್ತದೆ ಎಂದು ತಿಳಿಸಲಾಗಿದೆ.

ಮೋದಿ ಕಾಲದಲ್ಲಿ ಅನುಮೋದನೆ
ಈ ಹಿಂದೆ ಬಿಜೆಪಿಯ ನಡೆಸಿದ್ದ ಪ್ರಯತ್ನಗಳಿಂದ ಈ ಯೋಜನೆಗೆ ಮನ್ನಣೆ ಸಿಕ್ಕಿದೆ ಎಂದಿದ್ದಕ್ಕೆ ಸಂಸದ ಸಿಂಹ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎಂಎಲ್ಸಿ ಎ ಎಚ್ ವಿಶ್ವನಾಥ್ ಅವರಿಂದ ಟೀಕೆಗಳನ್ನು ಎದುರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಕಾಮಗಾರಿಗಳಿಗೆ ಅನುಮೋದನೆ ನೀಡಿ ಕಾರ್ಯಗತಗೊಳಿಸಲಾಗಿದೆ ಎಂದು ಸಂಸದರು ಹೇಳಿದ್ದರು.

ಆಸ್ಕರ್ ಫರ್ನಾಂಡಿಸ್ ಕಾಲದಲ್ಲಿ ಡಿಪಿಆರ್
ಮಾಜಿ ಪಿಡಬ್ಲ್ಯುಡಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಹೆಚ್ ಸಿ ಮಹದೇವಪ್ಪ ಅವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡು ವಿಸ್ತೃತ ಯೋಜನಾ ವರದಿ (ಡಿಪಿಆರ್) ಅನ್ನು ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಕಾಂಗ್ರೆಸ್ ಆಡಳಿತದಲ್ಲಿ ಸಿದ್ಧಪಡಿಸಲಾಗಿದೆ ಎಂದಿದ್ದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಾಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಯೋಜನೆಯ ಹಿಂದೆ ಇದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದು ವಿಶ್ವನಾಥ್ ಹೇಳಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications