ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧಿಕಾರ ತ್ಯಾಗಕ್ಕೆ ಒಪ್ಪದ ಸಚಿವರು, ಇಕ್ಕಟ್ಟಿನಲ್ಲಿ ಮೈತ್ರಿ ಸರ್ಕಾರ

|
Google Oneindia Kannada News

ಬೆಂಗಳೂರು, ಮೇ 30: ಕೆಲವು ಸಚಿವರಿಗೆ ಕೋಕ್ ನೀಡಿ ಅತೃಪ್ತರಿಗೆ ಅವಕಾಶ ಕೊಟ್ಟು ಸರ್ಕಾರವನ್ನು ಉಳಿಸಿಕೊಳ್ಳುವ ಯೋಜನೆ ಹಾಕಿದ್ದ ಕಾಂಗ್ರೆಸ್‌ ನಾಯಕರಿಗೆ ಹಿನ್ನಡೆಯಾಗಿದೆ.

ಇಂದು ನಡೆದ ಕಾಂಗ್ರೆಸ್ ಸಚಿವರ ಸಭೆಯಲ್ಲಿ ಕೆಲವು ಸಚಿವರಿಗೆ ತಮ್ಮ ಸ್ಥಾನವನ್ನು ತೆರವುಗೊಳಿಸಿಕೊಡುವಂತೆ ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ ಮುಖಂಡರ ಬೇಡಿಕೆಗೆ ಮಂತ್ರಿಗಳು ಒಪ್ಪಿಲ್ಲ ಎನ್ನಲಾಗಿದೆ.

ಪರಮೇಶ್ವರ್ ಮನೆಯಲ್ಲಿ ಕಾಂಗ್ರೆಸ್ ಮುಖಂಡರ ಸಭೆಪರಮೇಶ್ವರ್ ಮನೆಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ

ಮಂತ್ರಿಗಳು ತಮ್ಮ ಸ್ಥಾನವನ್ನು ತ್ಯಜಿಸಿ ಅತೃಪ್ತರಿಗೆ ಅವಕಾಶ ಮಾಡಿಕೊಡಲು ಒಪ್ಪಿಲ್ಲ, ಹಾಗಾಗಿ ಕಾಂಗ್ರೆಸ್ ಇಕ್ಕಟ್ಟಿನಲ್ಲಿ ಸಿಲುಕಿದ್ದು, ಮೈತ್ರಿ ಮತ್ತೆ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

ಕೆಲವು ಸಚಿವರಿಗೆ ಕೋಕ್ ಕೊಟ್ಟು, ಸರ್ಕಾರವನ್ನು ಉರುಳಿಸಲು ತುದಿಗಾಲಲ್ಲಿ ನಿಂತಿರುವ ಅತೃಪ್ತ ಶಾಸಕರಿಗೆ ಅವಕಾಶ ಮಾಡಿಕೊಟ್ಟು ಅವರನ್ನು ಅಸಮಾಧಾನ ಕಳೆಯುವ ಯೋಜನೆ ರೂಪಿಸಿಕೊಂಡು ಮೂರು ದಿನದಿಂದ ಸರಣಿ ಸಭೆಯಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದರು, ಆದರೆ ಕಾಂಗ್ರೆಸ್ ನಾಯಕರ ಶ್ರಮವೆಲ್ಲಾ ವ್ಯರ್ಥವಾಗಿದ್ದು, ಅಸಮಾಧಾನ ಮುಂದುವರೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

'ಸರ್ಕಾರ ರಚನೆ ಆದಾಗಿನಿಂದ ಕೆಲಸ ಮಾಡಲಾಗಿಲ್ಲ'

'ಸರ್ಕಾರ ರಚನೆ ಆದಾಗಿನಿಂದ ಕೆಲಸ ಮಾಡಲಾಗಿಲ್ಲ'

ಸರ್ಕಾರ ರಚನೆ ಆದಾಗಿನಿಂದಲೂ ಉಪಚುನಾವಣೆ, ಬಜೆಟ್, ಲೋಕಸಭೆ ಚುನಾವಣೆ ಇದರಲ್ಲೇ ಸಯ ಕಳೆದು ಹೋಗಿದೆ. ಸರ್ಕಾರ ರಚನೆ ಆಗಿ ವರ್ಷ ಸಹ ಆಗಿಲ್ಲ, ಈಗಲೇ ಸಚಿವ ಸ್ಥಾನ ಬಿಡು ಎಂದರೆ ಹೇಗೆ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.

'ಹಿರಿಯ ಸಚಿವರಿಂದ ರಾಜೀನಾಮೆ ಕೊಡಿಸಿ'

'ಹಿರಿಯ ಸಚಿವರಿಂದ ರಾಜೀನಾಮೆ ಕೊಡಿಸಿ'

ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಈಗಲೂ ಸಚಿವರಾಗಿರುವ ಕೃಷ್ಣಬೈರೇಗೌಡ, ಜಾರ್ಜ್ ಫರ್ನಾಂಡಿಸ್, ಯುಟಿ ಖಾದರ್, ದೇಶಪಾಂಡೆ ಇವರಲ್ಲಿ ಯಾರನ್ನಾದರೂ ಕೆಳಗೆ ಇಳಿಸಿ, ನಾವು ಈ ಬಾರಿ ಸಚಿವರಾಗಿದ್ದೇವೆ ನಮ್ಮ ತಂಟೆಗೆ ಬರಬೇಡಿ ಎಂದು ಸಚಿವರಾದ ವೆಂಕಟರಮಣಪ್ಪ, ತುಕಾರಾಂ, ಪುಟ್ಟರಂಗಶೆಟ್ಟಿ ಹೇಳಿದ್ದಾರೆ ಎನ್ನಲಾಗಿದೆ.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಸಂಪುಟ ವಿಸ್ತರಣೆ, ಪುನಾರಚನೆ ಮಾಡಲ್ಲ: ಸಿದ್ದರಾಮಯ್ಯ

ಸಂಪುಟ ವಿಸ್ತರಣೆ, ಪುನಾರಚನೆ ಮಾಡಲ್ಲ: ಸಿದ್ದರಾಮಯ್ಯ

ಸಚಿವರೊಂದಿಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಚಿವ ಸಂಪುಟ, ವಿಸ್ತರಣೆಯಾಗಲಿ, ಪುನಾರಚನೆಯಾಗಲಿ ಪ್ರಸ್ತುತ ಮಾಡುವುದಿಲ್ಲ , ಮುಂದೆ ಮಾಡುವುದಾದರೆ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಮೂವರು ಸಚಿವರಿಗೆ ಸಂಪುಟದಿಂದ ಕೊಕ್ ಸಾಧ್ಯತೆ? ಮಂಡ್ಯ ಜಿಲ್ಲೆಯ ಮೂವರು ಸಚಿವರಿಗೆ ಸಂಪುಟದಿಂದ ಕೊಕ್ ಸಾಧ್ಯತೆ?

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಲ್ಲ

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಲ್ಲ

ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ, ಅವರ ಜೊತೆ ಮಾತುಕತೆ ನಡೆದಿದೆ. ಅವರೊಂದಿಗೆ ನಾನೂ ಮಾತನಾಡುತ್ತೇನೆ, ಇನ್ನು ರೋಶನ್ ಬೇಗ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ನೊಟೀಸ್ ಕಳುಹಿಸಿದ್ದಾರೆ, ಅವರೇನು ಉತ್ತರ ಕೊಡುತ್ತಾರೋ ನೋಡೋಣ ಎಂದರು.

ಮೈತ್ರಿ ಸರ್ಕಾರದ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿಮೈತ್ರಿ ಸರ್ಕಾರದ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿ

English summary
Congress ministers did not agree to leave their minister post, so coalition government once again came into a danger zone. Siddaramaia and other Congress leaders request some ministers to leave a post, and give them to dissidents but they did not agree.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X