ಮರಾಠ ಸಮುದಾಯಕ್ಕೆ ಶುಭ ಸುದ್ದಿ ನೀಡಿದ ಎಚ್ ಆಂಜನೇಯ
ಶಂಕರಪ್ಪ ನೇತೃತ್ವದ ವರದಿಯ ಶಿಫಾರಸ್ಸಿನಂತೆ ಪ್ರವರ್ಗ 3ಬಿ ನಲ್ಲಿರುವ ಮರಾಠ ಜನಾಂಗವನ್ನು 2ಎ ಗೆ ಸೇರಿಸುವ ಬಗ್ಗೆ ಪರಿಶೀಲನೆಯಲ್ಲಿದೆ ಸಮಾಜ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ ಅವರು ಭರವಸೆ ನೀಡಿದ್ದಾರೆ.
ಬೆಂಗಳೂರು, ಮಾರ್ಚ್ 16 : ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ಮರಾಠ ಸಮಾಜಕ್ಕೆ ರಾಜಕೀಯದಲ್ಲಿ ಸ್ಥಾನ-ಮಾನ ಸಿಕ್ಕಾಗ ಮಾತ್ರ ವಿಧಾನಸಭೆಯಲ್ಲಿ ನಮ್ಮ ಸಮಾಜಕ್ಕೆ ಆಗುತ್ತಿರುವ ಅನ್ಯಾಯ, ವಂಚನೆಯನ್ನು ಸರ್ಕಾರದ ಗಮನಕ್ಕೆ ತರಲು ಸಾಧ್ಯ ಎಂಬ ಕೂಗಿಗೆ ಕೊನೆ ಬೆಲೆ ಸಿಗುವ ಕಾಲ ಬಂದಿದೆ.
ಶಂಕರಪ್ಪ ನೇತೃತ್ವ್ಪದ ಆಯೋಗದ ವರದಿಯ ಶಿಫಾರಸ್ಸಿನಂತೆ ಪ್ರವರ್ಗ 3ಬಿ ನಲ್ಲಿರುವ ಮರಾಠ ಜನಾಂಗವನ್ನು 2ಎ ಗೆ ಸೇರಿಸುವ ಬಗ್ಗೆ ಪರಿಶೀಲನೆಯಲ್ಲಿದೆ ಸಮಾಜ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಅವರು ತಿಳಿಸಿದರು.[ಕ್ಷತ್ರಿಯ ಮರಾಠರೇ, ಬೆಂಗಳೂರು ಚಲೋಗೆ ಸಿದ್ಧರಾಗಿ; ಸಿಂಧ್ಯಾ]

ರಾಜ್ಯದ ಮರಾಠ ಸಮಾಜದವರನ್ನು ಹಿಂದುಳಿದ ಪ್ರವರ್ಗ 2ಎ ಗೆ ಸೇರಿಸಬೇಕೆನ್ನುವ ಶಾಸಕ ಗೋವಿಂದ ಕಾರಜೋಳ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಬಹಿರಂಗ ವಿಚಾರಣೆಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ.
ಸಾಮಾಜಿಕ ಸಮೀಕ್ಷೆ ವರದಿ ಅನ್ವಯ ಸರ್ಕಾರ ಸಾಮಾಜಿಕ ನ್ಯಾಯ ಕೊಡಲು ಬದ್ಧವಾಗಿದೆ. ಈ ಬಗ್ಗೆ ಆಯೋಗದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಸಮೀಕ್ಷೆಯ ಪೂರ್ಣ ವರದಿ ಬಂದ ನಂತರ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.
ಮರಾಠ ಸಮಾಜದವರನ್ನು 3 ಎ ಯಿಂದ 2ಎಗೆ ಸೇರಿಸಬೇಕೆಂದು ಒತ್ತಾಯಿಸಿ, 'ಬೆಂಗಳೂರು ಚಲೋ' ಕಾರ್ಯಕ್ರಮಕ್ಕೆ ಮರಾಠ ಸಮಾಜದವರು ಸಿದ್ದರಾಗಬೇಕೆಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರು ಇತ್ತೀಚೆಗೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿ ನಡೆದ ಶಿವಾಜಿ ಮಹಾರಾಜರ ತಂದೆ ಷಹಾಜಿ ಮಹಾರಾಜರ 353 ನೇ ಪುಣ್ಯತಿಥಿ ಸಮಾರಂಭದಲ್ಲಿ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ರಾಜ್ಯದಲ್ಲಿ ಸರಿ ಸುಮಾರು 40 ಲಕ್ಷಕ್ಕೂ ಅಧಿಕ ಮರಾಠಿಗರು ನೆಮ್ಮದಿಯ ನೆಲೆ ಕಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications