ಭಾರತ ಹಿಂದೂ ರಾಷ್ಟ್ರ ಆಗಲಿದೆ ಎನ್ನುವುದು ಈ ಕಾರಣಕ್ಕೆ ಹಾಸ್ಯಾಸ್ಪದ: ಸಚಿವ ಎಚ್.ಸಿ. ಮಹದೇವಪ್ಪ
ಕಳೆದ ಒಂದು ವಾರದಿಂದ ದೇಶದಲ್ಲಿ ಹಿಂದೂ ರಾಷ್ಟ್ರ ಪರಿಕಲ್ಪನೆ ವಿಚಾರ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಭಾರತವು ಹಿಂದೂ ರಾಷ್ಟ್ರವಾಗಿದ್ದು, ದೇಶದ ಹೊಣೆ ಹಿಂದೂಗಳ ಮೇಲಿದೆ ಎಂದು ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಹೇಳಿದ ಮೇಲೆ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ.
ಈ ವಿಚಾರವಾಗಿ ರಿಯಾಕ್ಟ್ ಮಾಡಿರುವ ಸಚಿವ ಡಾ ಎಚ್.ಸಿ ಮಹದೇವಪ್ಪ ಅವರು, ಈ ಕ್ಷಣಕ್ಕೂ ಜಾತೀಯ ಅಸಮಾನತೆಯ ಕೂಪವಾಗಿರುವ ಸಾಮಾಜಿಕ ವ್ಯವಸ್ಥೆಯನ್ನು ಸರಿ ಪಡಿಸಬೇಕೆಂಬ ಕನಿಷ್ಠ ಕಾಳಜಿ ಇಲ್ಲದೇ, ಅಸಮಾನತೆಯನ್ನೇ ಪೋಷಿಶಿಸಿಕೊಂಡು ಬದುಕಿರುವ ಮೋಹನ್ ಭಾಗವತ್ ಅಂತಹವರು, ಆಗಾಗ್ಗೆ ಪ್ರತ್ಯಕ್ಷರಾಗಿ, ಭಾರತ ಹಿಂದೂ ರಾಷ್ಟ್ರ ಆಗಲಿದೆ ಎಂದು ಹೇಳುವುದು ಹಾಸ್ಯಾಸ್ಪದ ಎಂದಿದ್ದಾರೆ.

ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ ಜಾತ್ಯಾತೀತ ದೇಶ. ಇದನ್ನೇ ನಮ್ಮ ದೇಶದ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಆದರೆ, ಒಂದು ದಿನವೂ ಈ ದೇಶದ ಸಂವಿಧಾನದ ಪುಟಗಳಲ್ಲಿ ಏನಿದೆ ಎಂಬುದನ್ನು ಕಣ್ಣೆತ್ತಿಯೂ ನೋಡದೇ ಬರೀ ಮನುಸ್ಮೃತಿಯನ್ನೇ ಭಾಗವತ್ ಅವರಿಗೆ ಧರ್ಮ ಎಂದರೆ ಏನೆಂಬುದು ಈವರೆಗೂ ತಿಳಿದಿಲ್ಲ.
ಈ ನೆಲದಲ್ಲಿ ಸ್ವಾಮಿ ವಿವೇಕಾನಂದರಿಂದ ಹಿಡಿದು ಬಹಳಷ್ಟು ಮಂದಿ ಸಂತರು, ಧರ್ಮ ಎಂದರೆ ಏನು ಎಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ. ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹ ಮಹನೀಯರೂ ತಮಗೆ ಕುಡಿಯಲು ನೀರುಕೊಡದ, ತಮ್ಮನ್ನು ಸಮಾನವಾಗಿ ಕಾಣದ ಹಿಂದೂ ಧರ್ಮದ ಅಮಾನವೀಯತೆಯನ್ನು ಪ್ರಶ್ನಿಸಿ, ಆ ಧರ್ಮವನ್ನೇ ತೊರೆದಿದ್ದಾರೆ.
ಹೀಗಿರುವಾಗ ಭಾರತ ಹಿಂದೂ ರಾಷ್ಟ್ರ ಆಗುತ್ತದೆ ಎಂದು ಆಗಾಗ್ಗೆ ಹೇಳುತ್ತಲೇ ಇರುವ ಮೋಹನ್ ಭಾಗವತ್ ಅವರು ಮೊದಲು ದೇಶದ ಜನರ ಕ್ಷಮೆ ಯಾಚಿಸಲಿ.
ನೊಂದಾಯಿತವಲ್ಲದ ಮತ್ತು ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದುಕೊಂಡು ಇರುತ್ತಿದ್ದ ಸಾವರ್ಕರ್ ಸಿದ್ಧಾಂತ ಪ್ರೇರಿತ RSS ಸಂಸ್ಥೆಯ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕೆಡಿಸಿ ದೇಶದ ಐಕ್ಯತೆ ಮತ್ತು ಸಾಮರಸ್ಯದ ಆತ್ಮವನ್ನು ಹಾಳು ಮಾಡುತ್ತಿರುವ ಮೋಹನ್ ಭಾಗವತ್ ಅವರು Extra Constitutional Authority ಆಗಿ ವರ್ತಿಸುವ ಪ್ರವೃತ್ತಿಯನ್ನು ಮೊದಲು ನಿಲ್ಲಿಸಲಿ ಎಂದು ಅವರು ಆಗ್ರಹಿಸಿದ್ದಾರೆ.
ಮನುಸ್ಮೃತಿ ಎಣೆದ ಜಾತಿಯ ಜೇಡರ ಬಲೆಯಲ್ಲಿ ದಲಿತರಿಗೆ ಇನ್ನೂ ಸಮಾನತೆ ಇಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವು ನೆಟ್ಟಿಗರು ಈ ಜಾತಿ ವ್ಯವಸ್ಥೆಯ ಆಧಾರದ ಮೇಲೆ ಅಲ್ಲವೇ ರಾಜಕೀಯ ನಡೆಯುತ್ತಿರುವುದು ಎಂದೂ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications