ಮಣಿಪುರದ ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು, ಶಿಕ್ಷಣ ವೆಚ್ಚ ಭರಿಸುವ ಭರವಸೆ ನೀಡಿದ ಜಮೀರ್ ಅಹಮದ್ ಖಾನ್
ಬೆಂಗಳೂರು, ಆಗಸ್ಟ್ 1: ಕರ್ನಾಟಕ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಮಂಗಳವಾರ ತಮ್ಮ ಜನ್ಮದಿನವನ್ನು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯ ನಂತರ ಆಶ್ರಯ ಪಡೆದಿರುವ ಮಣಿಪುರದ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡು ಸರಳತೆ ಮೆರೆದಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರ ವಿಧಾನಸಭಾ ಕ್ಷೇತ್ರ ಚಾಮರಾಜಪೇಟೆಯಲ್ಲಿರುವ ಸೇಂಟ್ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಮಣಿಪುರದ 29 ವಿದ್ಯಾರ್ಥಿನಿಯರು ಆಶ್ರಯ ಪಡೆದಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಣಿಪುರದ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡ ಜಮೀರ್ ಅವರು ವಿದ್ಯಾರ್ಥಿಗಳ ಶಿಕ್ಷಣ ಮತ್ತು ಯೋಗಕ್ಷೇಮವನ್ನು ಭರಿಸುವುದಾಗಿ ಸಚಿವರು ಘೋಷಿಸಿದರು. ಈ ಸಂದರ್ಭದಲ್ಲಿ ಅವರು 2 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದರು. ಬಳಿಕ ಜಮೀರ್ ಅಹಮದ್ ಖಾನ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಮಣಿಪುರದ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಈ ವೇಳೆ ವಿದ್ಯಾರ್ಥಿಗಳು ತಮ್ಮ ತವರು ರಾಜ್ಯದಲ್ಲಿನ ಅಪಾಯಕಾರಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿಗೆ ಬಂದಿರುವುದಾಗಿ ವಿವರಿಸಿದರು ಮತ್ತು ಆಶ್ರಯ ನೀಡಿದ ಸೇಂಟ್ ತೆರೇಸಾ ಶಿಕ್ಷಣ ಸಂಸ್ಥೆಗಳಿಗೆ ಧನ್ಯವಾದ ಅರ್ಪಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಕನಿಷ್ಠ ಏಳು ವರ್ಷಗಳ ಕಾಲ ಇಲ್ಲಿಯೇ ಇರಬೇಕಾಗುತ್ತದೆ ಹೀಗಾಗಿ ಇಡೀ ಅವಧಿಗೆ ಶಿಕ್ಷಣದ ವೆಚ್ಚ ಮತ್ತು ಅವರ ಕಲ್ಯಾಣವನ್ನು ಭರಿಸುವುದಾಗಿ ಸಚಿವರು ಭರವಸೆ ನೀಡಿದರು.
ವಿದ್ಯಾರ್ಥಿಗಳು ಇಲ್ಲಿ ಅತ್ಯಂತ ಸುರಕ್ಷಿತವಾಗಿದ್ದು, ಅವರಿಗೆ ಏನು ಬೇಕಾದರೂ ವ್ಯವಸ್ಥೆ ಮಾಡುವುದಾಗಿ ಸಚಿವರು ಹೇಳಿದರು. ಮಣಿಪುರದಿಂದ ಬೆಂಗಳೂರಿಗೆ ಸುಮಾರು 200 ವಿದ್ಯಾರ್ಥಿಗಳು ಬಂದಿದ್ದು, ಅದರಲ್ಲಿ 29 ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದಾರೆ ಮತ್ತು ಇತರರಿಗೆ ಇತರ ಸಂಸ್ಥೆಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications