Plastic Rice: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ: ಸಚಿವ ಮುನಿಯಪ್ಪ ಸ್ಪಷ್ಟನೆ
ಸರ್ಕಾರ ವಿತರಣೆ ಮಾಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಇದೆ ಎನ್ನುವ ಆರೋಪ ಹಲವು ವರ್ಷಗಳಿಂದ ಕೂಡ ಕೇಳಿ ಬರುತ್ತಿದೆ. ಪ್ಲಾಸ್ಟಿಕ್ ಅಕ್ಕಿ ಇದೆ ಎಂದು ಹಲವರು ಪಡಿತರ ಅಕ್ಕಿಯನ್ನು ತಿನ್ನುವುದಕ್ಕೂ ಭಯ ಪಟ್ಟಿರುವ ಘಟನೆಗಳು ನಡೆದಿವೆ.
ಈ ಬಗ್ಗೆ ಅಧಿಕಾರಿಗಳು ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಆದರೂ ಜನರಲ್ಲಿನ ಆತಂಕ ದೂರವಾಗಿಲ್ಲ. ಈ ತಿಂಗಳು ವಿತರಣೆ ಮಾಡಿದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಇದೆ ಎಂದು ಹಲವರು ದೂರಿದ್ದಾರೆ.

ಇದಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಕೂಡ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವಂತೆ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆಯಾಗಿದೆ ಎನ್ನುವುದು ಸುಳ್ಳು ಎಂದು ಹೇಳಿದರು.
ಸಾರವರ್ಧಿತ ಅಕ್ಕಿ
ಮಹಿಳೆಯರು ಮತ್ತು ಮಕ್ಕಳಲ್ಲಿ ಹೆಚ್ಚಿನ ಮಟ್ಟದ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯನ್ನು ನಿವಾರಿಸಲು ರಾಜ್ಯವು ಸಮಗ್ರ ಶಿಶು ಅಭಿವೃದ್ಧಿ ಸೇವೆಗಳು ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಪಡಿತರ ಅಂಗಡಿಗಳ ಮೂಲಕ ಸಾರವರ್ಧಿತ ಅಕ್ಕಿಯನ್ನು ಪೂರೈಸುತ್ತಿದೆ ಎಂದು ಹೇಳಿದರು. ಇದನ್ನೇ ಪ್ಲಾಸ್ಟಿಕ್ ಅಕ್ಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಹೇಳಿದರು.
ಅಕ್ಕಿಯ ಬಲವರ್ಧನೆಯು ಆಹಾರದಲ್ಲಿ ವಿಟಮಿನ್ ಮತ್ತು ಖನಿಜಾಂಶವನ್ನು ಹೆಚ್ಚಿಸಲು ವೆಚ್ಚ-ಪರಿಣಾಮಕಾರಿ ಮತ್ತು ಪೂರಕ ತಂತ್ರವಾಗಿದೆ ಮತ್ತು ಪೌಷ್ಟಿಕಾಂಶದ ಭದ್ರತೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದರು.
ಇಲಾಕೆ ಕೂಡ ನೀಡಿದೆ ಸ್ಪಷ್ಟನೆ
ಒಂದು ಕ್ವಿಂಟಾಲ್ ಸಾಮಾನ್ಯ ಅಕ್ಕಿಗೆ ಶೇಕಡಾ 1 ರಷ್ಟು (1 ಕೆಜಿಯಷ್ಟು) ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕೂಡ ಸ್ಪಷ್ಟನೆ ನೀಡಿದೆ.
ಸಾರವರ್ಧಿತ ಅಕ್ಕಿಯಲ್ಲಿ ಜೀವಸತ್ವಗಳು, ಪೋಷಕಾಂಶಗಳಾದ ಕಬ್ಬಿಣಾಂಶ, ಫೋಲಿಕ್ ಆಮ್ಲ ಹಾಗೂ ವಿಟಮಿನ್ ಬಿ-12 ಇರುತ್ತದೆ ಇದು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಪ್ಲಾಸ್ಟಿಕ್ ಅಕ್ಕಿಯಲ್ಲ, ಇದರಿಂದ ಯಾವ ತೊಂದರೆಯೂ ಆಗದು ಎಂದು ಇಲಾಖೆ ಹೇಳಿದೆ.
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡಲಾಗುತ್ತಿದೆ. ಇದರ ಸೇವನೆಯಿಂದ ಪೌಷ್ಟಿಕಾಂಶದ ಕೊರತೆ ನಿವಾರಣೆಯಾಗಲಿದೆ, ರಕ್ತಹೀನತೆ ಸಮಸ್ಯೆಗೂ ಇದು ಉತ್ತಮ ಆಹಾರ ಎಂದು ಹೇಳಲಾಗಿದೆ.
ಸಾರವರ್ಧಿತ ಅಕ್ಕಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗ ಒಳಪಡಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯವಾದ ಪೌಷ್ಟಿಕಾಂಶಭರಿತ ಅಕ್ಕಿ ಎಂದು ಪ್ರಮಾಣೀಕರಿಸಲಾಗಿದೆ. ಇದನ್ನು ಭಯವಿಲ್ಲದೆ ತಿನ್ನಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications