ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ, ಡಿಕೆಶಿ ಸತ್ಯಹರಿಶ್ಚಂದ್ರರಾ?; ಸುಧಾಕರ್

|
Google Oneindia Kannada News

ಬೆಂಗಳೂರು, ಮಾರ್ಚ್ 24: " ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರಾ?. ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

Recommended Video

'ಎಲ್ಲಾ ನಾಯಕರ ತನಿಖೆಯಾಗಲಿ ಯಾರು ಏಕಪತ್ನಿವ್ರತಸ್ಥರು? ಯಾರಿಗೆಲ್ಲ ಅನೈತಿಕ ಸಂಬಂಧ ಇದೆ ಗೊತ್ತಾಗುತ್ತೆ' ಸಚಿವ ಸುಧಾಕರ್ ಹೇಳಿಕೆ | Oneindia Kannada

ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, "ನಾನೂ ಸೇರಿದಂತೆ 224 ಶಾಸಕರ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ" ಎಂದು ತಿಳಿಸಿದರು.

ಕಾಂಗ್ರೆಸ್ ಎಂದರೆ ಸಿಡಿ ತಯಾರು ಮಾಡುವ ಗ್ಯಾಂಗ್; ಎಂಪಿಆರ್‌ ಕಾಂಗ್ರೆಸ್ ಎಂದರೆ ಸಿಡಿ ತಯಾರು ಮಾಡುವ ಗ್ಯಾಂಗ್; ಎಂಪಿಆರ್‌

 Minister K Sudhakar Statement Sparked Controversy

"ಎಲ್ಲಾ ಮಂತ್ರಿಗಳದ್ದೂ, ಶಾಸಕರದ್ದೂ, ವಿರೋಧ ಪಕ್ಷದವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ? ಎಂಬುದು ತಿಳಿಯಲಿ ಬಿಡಿ" ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆಗೆ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ವಿವಿಧ ಪಕ್ಷದ ನಾಯಕರು ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ಎಸಿಬಿಗೆ ದೂರು ಸಲ್ಲಿಕೆಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ಎಸಿಬಿಗೆ ದೂರು ಸಲ್ಲಿಕೆ

ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ; ಎಲ್ಲರ ವಿರುದ್ಧ ತನಿಖೆಯಾಗಲಿ ಎಂಬ ಡಾ. ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, "ಬಹಳ ಸಂತೋಷ. ರಾಜ್ಯಕ್ಕೆ ನುಡಿಮುತ್ತುಗಳನ್ನು ಕೊಟ್ಟಿದ್ದಾರೆ. ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ. ಈ ಹೇಳಿಕೆ ಬಗ್ಗೆ ಇಲ್ಲಿ ಚರ್ಚೆ ಮಾಡೋಲ್ಲ, ಸದನದಲ್ಲಿ ಚರ್ಚೆ ಮಾಡುತ್ತೇವೆ. ಎಲ್ಲಾ ನಾಯಕರ ಜೊತೆ ಮಾತನಾಡುತ್ತೇನೆ. ಇದು ಸಾಮೂಹಿಕ ವಿಚಾರ" ಎಂದರು.

English summary
Probe should do on all 224 MLA's including me health minister Dr. K. Sudhakar statement sparked controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X