ಕ್ಷೌರಿಕರನ್ನು ಎಸ್ಟಿಗೆ ಸೇರಿಸುವ ಹೋರಾಟಕ್ಕೆ ಈಶ್ವರಪ್ಪ ಬೆಂಬಲ
ಬೆಂಗಳೂರು, ಅ 12: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಹೋರಾಟದಲ್ಲಿ ಕ್ಷೌರಿಕರನ್ನು ಸೇರಿಸಿಕೊಳ್ಳುವ ಮನವಿಗೆ ಸಚಿವ ಈಶ್ವರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕುರುಬರ ಹೋರಾಟ ಸಮಿತಿಯ ಮುಂದಾಳತ್ವ ವಹಿಸಿರುವ ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪ ಅವರನ್ನು ಭೇಟಿಯಾದ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ.ಬಿ ಶಿವಕುಮಾರ್, ಕ್ಷೌರಿಕರ ಗುರುಪೀಠದ ಡಾ|| ಲಿಂಗರಾಜ್ ಗುರೂಜಿ ಮತ್ತು ಅಭಿಮಾನಿ ಕ್ಷೌರಿಕ ಮುತ್ತುರಾಜ್, ಎಚ್ ಎನ್ ನರಸಿಂಹಮೂರ್ತಿ ಅವರ ನಿಯೋಗ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.
ದಿನನಿತ್ಯ ಅಪಮಾನಕ್ಕೆ ಅಪಹಾಸ್ಯಕ್ಕೆ ಜಾತಿನಿಂದನೆ, ಧ್ವನಿ ಇಲ್ಲದಂತಹ ಜಾತಿಯ ಶಕ್ತಿಯೂ ಇಲ್ಲದೆ ಶಕ್ತಿಹೀನವಾದಂತಹ, ನಿರ್ಗತಿಕ ಕ್ಷೌರಿಕ ಸಮಾಜಕ್ಕೆ ಸ್ವಾತಂತ್ರ ಬಂದು 73 ವರ್ಷ ಕಳೆದರೂ ರಾಜ್ಯದಲ್ಲಿ ಕೆಲವು ಹಳ್ಳಿಗಾಡಿನಲ್ಲಿ ದಲಿತರಿಗೆ ಮುಕ್ತವಾಗಿ ಸೇವೆ ಮಾಡುವುದಕ್ಕೆ ಆಗುತ್ತಿಲ್ಲ ಎಂದರೆ ಸರ್ಕಾರದಿಂದ ಸೌಲಭ್ಯವನ್ನು ತಗೆದುಕೊಳ್ಳುವುದು ಕಷ್ಟ. ಜಾತಿ ಜನಗಣತಿಯ ಸಮೀಕ್ಷೆ ಬಂದರೆ ಕ್ಷೌರಿಕರ ನಿಜವಾದ ಜನಸಂಖ್ಯೆ ಗೊತ್ತಾಗುತ್ತದೆ.

ಆಗ ನಮಗೆ ಮೀಸಲಾತಿ ಪಡೆಯಲು ಅನುಕೂಲವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕ್ಷೌರಿಕರ ಹೆಸರಿನಲ್ಲಿ ಕರೆಯಲ್ಪಡುವ ಸುಮಾರು 24 ಪಂಗಡಗಳಾದ ಬಂಡಾರಿ, ಹಡಪದ, ಸವಿತಾ, ಭಜಂತ್ರಿ, ನಾಯಿಂದ ಹಲವು ಹೆಸರಿನಿಂದ ಕರೆಯಲ್ಪಡುವ ಎಲ್ಲರೂ ಈ ಹೋರಾಟದಲ್ಲಿ ಭಾಗಿಯಾಗಲು ಸಜ್ಜಾಗಬೇಕು. ಕುರುಬ ಜನಾಂಗದ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ಎಸ್.ಟಿ ಗೆ ಸೇರಿಸಬೇಕು ಎಂಬ ಕ್ಷೌರಿಕರ ಮನವಿಗೆ ಬೆಂಬಲ ವ್ಯಕ್ತಪಡಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ.

ಈ ಮೂಲಕ ರಾಜ್ಯದ ಎಲ್ಲಾ ಕ್ಷೌರಿಕರಿಗೂ ಅಪಾರವಾದಂತಹ ಗೌರವ ಮತ್ತು ಹೋರಾಟದ ಶಕ್ತಿ ತುಂಬಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ತಮ್ಮ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕು ಎಂದು ರಾಜ್ಯದ ಎಲ್ಲಾ ಕ್ಷೌರಿಕರ ಪರವಾಗಿ ಮನವಿ ಮಾಡಿಕೊಂಡಿದ್ದೇವೆ ಎಂದು ರಾಜ್ಯಾಧ್ಯಕ್ಷರಾದ ಎಂ.ಬಿ. ಶಿವಕುಮಾರ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಕನಕ ಗುರುಪೀಠ ಸ್ವಾಮೀಜಿಯವರಿಗೆ, ಕುರುಬ ಜನಾಂಗದ ಮಂತ್ರಿಗಳಿಗೆ, ಶಾಸಕರುಗಳಿಗೆ, ಮಾಜಿ ಮಂತ್ರಿಗಳು ಹಾಗೂ ಶಾಸಕರುಗಳಿಗೆ ಮತ್ತು ಕುರುಬ ಸಮುದಾಯದ ಮುಖಂಡರುಗಳಿಗೆ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗುವುದು ಎಂದು ಇದೇ ಸಂಧರ್ಭದಲ್ಲಿ ತಿಳಿಸಿದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications