ಕ್ಷೌರಿಕರನ್ನು ಎಸ್ಟಿಗೆ ಸೇರಿಸುವ ಹೋರಾಟಕ್ಕೆ ಈಶ್ವರಪ್ಪ ಬೆಂಬಲ
ಬೆಂಗಳೂರು, ಅ 12: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಹೋರಾಟದಲ್ಲಿ ಕ್ಷೌರಿಕರನ್ನು ಸೇರಿಸಿಕೊಳ್ಳುವ ಮನವಿಗೆ ಸಚಿವ ಈಶ್ವರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕುರುಬರ ಹೋರಾಟ ಸಮಿತಿಯ ಮುಂದಾಳತ್ವ ವಹಿಸಿರುವ ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪ ಅವರನ್ನು ಭೇಟಿಯಾದ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ.ಬಿ ಶಿವಕುಮಾರ್, ಕ್ಷೌರಿಕರ ಗುರುಪೀಠದ ಡಾ|| ಲಿಂಗರಾಜ್ ಗುರೂಜಿ ಮತ್ತು ಅಭಿಮಾನಿ ಕ್ಷೌರಿಕ ಮುತ್ತುರಾಜ್, ಎಚ್ ಎನ್ ನರಸಿಂಹಮೂರ್ತಿ ಅವರ ನಿಯೋಗ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.
ದಿನನಿತ್ಯ ಅಪಮಾನಕ್ಕೆ ಅಪಹಾಸ್ಯಕ್ಕೆ ಜಾತಿನಿಂದನೆ, ಧ್ವನಿ ಇಲ್ಲದಂತಹ ಜಾತಿಯ ಶಕ್ತಿಯೂ ಇಲ್ಲದೆ ಶಕ್ತಿಹೀನವಾದಂತಹ, ನಿರ್ಗತಿಕ ಕ್ಷೌರಿಕ ಸಮಾಜಕ್ಕೆ ಸ್ವಾತಂತ್ರ ಬಂದು 73 ವರ್ಷ ಕಳೆದರೂ ರಾಜ್ಯದಲ್ಲಿ ಕೆಲವು ಹಳ್ಳಿಗಾಡಿನಲ್ಲಿ ದಲಿತರಿಗೆ ಮುಕ್ತವಾಗಿ ಸೇವೆ ಮಾಡುವುದಕ್ಕೆ ಆಗುತ್ತಿಲ್ಲ ಎಂದರೆ ಸರ್ಕಾರದಿಂದ ಸೌಲಭ್ಯವನ್ನು ತಗೆದುಕೊಳ್ಳುವುದು ಕಷ್ಟ. ಜಾತಿ ಜನಗಣತಿಯ ಸಮೀಕ್ಷೆ ಬಂದರೆ ಕ್ಷೌರಿಕರ ನಿಜವಾದ ಜನಸಂಖ್ಯೆ ಗೊತ್ತಾಗುತ್ತದೆ.

ಆಗ ನಮಗೆ ಮೀಸಲಾತಿ ಪಡೆಯಲು ಅನುಕೂಲವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕ್ಷೌರಿಕರ ಹೆಸರಿನಲ್ಲಿ ಕರೆಯಲ್ಪಡುವ ಸುಮಾರು 24 ಪಂಗಡಗಳಾದ ಬಂಡಾರಿ, ಹಡಪದ, ಸವಿತಾ, ಭಜಂತ್ರಿ, ನಾಯಿಂದ ಹಲವು ಹೆಸರಿನಿಂದ ಕರೆಯಲ್ಪಡುವ ಎಲ್ಲರೂ ಈ ಹೋರಾಟದಲ್ಲಿ ಭಾಗಿಯಾಗಲು ಸಜ್ಜಾಗಬೇಕು. ಕುರುಬ ಜನಾಂಗದ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ಎಸ್.ಟಿ ಗೆ ಸೇರಿಸಬೇಕು ಎಂಬ ಕ್ಷೌರಿಕರ ಮನವಿಗೆ ಬೆಂಬಲ ವ್ಯಕ್ತಪಡಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ.

ಈ ಮೂಲಕ ರಾಜ್ಯದ ಎಲ್ಲಾ ಕ್ಷೌರಿಕರಿಗೂ ಅಪಾರವಾದಂತಹ ಗೌರವ ಮತ್ತು ಹೋರಾಟದ ಶಕ್ತಿ ತುಂಬಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ತಮ್ಮ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕು ಎಂದು ರಾಜ್ಯದ ಎಲ್ಲಾ ಕ್ಷೌರಿಕರ ಪರವಾಗಿ ಮನವಿ ಮಾಡಿಕೊಂಡಿದ್ದೇವೆ ಎಂದು ರಾಜ್ಯಾಧ್ಯಕ್ಷರಾದ ಎಂ.ಬಿ. ಶಿವಕುಮಾರ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಕನಕ ಗುರುಪೀಠ ಸ್ವಾಮೀಜಿಯವರಿಗೆ, ಕುರುಬ ಜನಾಂಗದ ಮಂತ್ರಿಗಳಿಗೆ, ಶಾಸಕರುಗಳಿಗೆ, ಮಾಜಿ ಮಂತ್ರಿಗಳು ಹಾಗೂ ಶಾಸಕರುಗಳಿಗೆ ಮತ್ತು ಕುರುಬ ಸಮುದಾಯದ ಮುಖಂಡರುಗಳಿಗೆ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗುವುದು ಎಂದು ಇದೇ ಸಂಧರ್ಭದಲ್ಲಿ ತಿಳಿಸಿದರು.
-
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ












Click it and Unblock the Notifications