ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷೌರಿಕರನ್ನು ಎಸ್ಟಿಗೆ ಸೇರಿಸುವ ಹೋರಾಟಕ್ಕೆ ಈಶ್ವರಪ್ಪ ಬೆಂಬಲ

|
Google Oneindia Kannada News

ಬೆಂಗಳೂರು, ಅ 12: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಹೋರಾಟದಲ್ಲಿ ಕ್ಷೌರಿಕರನ್ನು ಸೇರಿಸಿಕೊಳ್ಳುವ ಮನವಿಗೆ ಸಚಿವ ಈಶ್ವರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕುರುಬರ ಹೋರಾಟ ಸಮಿತಿಯ ಮುಂದಾಳತ್ವ ವಹಿಸಿರುವ ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪ ಅವರನ್ನು ಭೇಟಿಯಾದ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ.ಬಿ ಶಿವಕುಮಾರ್‌, ಕ್ಷೌರಿಕರ ಗುರುಪೀಠದ ಡಾ|| ಲಿಂಗರಾಜ್‌ ಗುರೂಜಿ ಮತ್ತು ಅಭಿಮಾನಿ ಕ್ಷೌರಿಕ ಮುತ್ತುರಾಜ್‌, ಎಚ್‌ ಎನ್‌ ನರಸಿಂಹಮೂರ್ತಿ ಅವರ ನಿಯೋಗ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.

ಕ್ಷೌರಿಕರನ್ನೂ ಪರಿಶಿಷ್ಟ ಪಂಗಡ (ಎಸ್‌ಟಿ) ಗೆ ಸೇರಿಸಲು ಮನವಿಕ್ಷೌರಿಕರನ್ನೂ ಪರಿಶಿಷ್ಟ ಪಂಗಡ (ಎಸ್‌ಟಿ) ಗೆ ಸೇರಿಸಲು ಮನವಿ

ದಿನನಿತ್ಯ ಅಪಮಾನಕ್ಕೆ ಅಪಹಾಸ್ಯಕ್ಕೆ ಜಾತಿನಿಂದನೆ, ಧ್ವನಿ ಇಲ್ಲದಂತಹ ಜಾತಿಯ ಶಕ್ತಿಯೂ ಇಲ್ಲದೆ ಶಕ್ತಿಹೀನವಾದಂತಹ, ನಿರ್ಗತಿಕ ಕ್ಷೌರಿಕ ಸಮಾಜಕ್ಕೆ ಸ್ವಾತಂತ್ರ ಬಂದು 73 ವರ್ಷ ಕಳೆದರೂ ರಾಜ್ಯದಲ್ಲಿ ಕೆಲವು ಹಳ್ಳಿಗಾಡಿನಲ್ಲಿ ದಲಿತರಿಗೆ ಮುಕ್ತವಾಗಿ ಸೇವೆ ಮಾಡುವುದಕ್ಕೆ ಆಗುತ್ತಿಲ್ಲ ಎಂದರೆ ಸರ್ಕಾರದಿಂದ ಸೌಲಭ್ಯವನ್ನು ತಗೆದುಕೊಳ್ಳುವುದು ಕಷ್ಟ. ಜಾತಿ ಜನಗಣತಿಯ ಸಮೀಕ್ಷೆ ಬಂದರೆ ಕ್ಷೌರಿಕರ ನಿಜವಾದ ಜನಸಂಖ್ಯೆ ಗೊತ್ತಾಗುತ್ತದೆ.

Minister KS Eshwarappa support Savitha Samaja demand on ST reservation

ಒಳಮೀಸಲಾತಿಯಲ್ಲಿ ಕ್ಷೌರಿಕ ಸಮುದಾಯಕ್ಕೆ ಆದ್ಯತೆ ನೀಡಿ ಒಳಮೀಸಲಾತಿಯಲ್ಲಿ ಕ್ಷೌರಿಕ ಸಮುದಾಯಕ್ಕೆ ಆದ್ಯತೆ ನೀಡಿ

ಆಗ ನಮಗೆ ಮೀಸಲಾತಿ ಪಡೆಯಲು ಅನುಕೂಲವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕ್ಷೌರಿಕರ ಹೆಸರಿನಲ್ಲಿ ಕರೆಯಲ್ಪಡುವ ಸುಮಾರು 24 ಪಂಗಡಗಳಾದ ಬಂಡಾರಿ, ಹಡಪದ, ಸವಿತಾ, ಭಜಂತ್ರಿ, ನಾಯಿಂದ ಹಲವು ಹೆಸರಿನಿಂದ ಕರೆಯಲ್ಪಡುವ ಎಲ್ಲರೂ ಈ ಹೋರಾಟದಲ್ಲಿ ಭಾಗಿಯಾಗಲು ಸಜ್ಜಾಗಬೇಕು. ಕುರುಬ ಜನಾಂಗದ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ಎಸ್‌.ಟಿ ಗೆ ಸೇರಿಸಬೇಕು ಎಂಬ ಕ್ಷೌರಿಕರ ಮನವಿಗೆ ಬೆಂಬಲ ವ್ಯಕ್ತಪಡಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ.

Minister KS Eshwarappa support Savitha Samaja demand on ST reservation

ಈ ಮೂಲಕ ರಾಜ್ಯದ ಎಲ್ಲಾ ಕ್ಷೌರಿಕರಿಗೂ ಅಪಾರವಾದಂತಹ ಗೌರವ ಮತ್ತು ಹೋರಾಟದ ಶಕ್ತಿ ತುಂಬಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ತಮ್ಮ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕು ಎಂದು ರಾಜ್ಯದ ಎಲ್ಲಾ ಕ್ಷೌರಿಕರ ಪರವಾಗಿ ಮನವಿ ಮಾಡಿಕೊಂಡಿದ್ದೇವೆ ಎಂದು ರಾಜ್ಯಾಧ್ಯಕ್ಷರಾದ ಎಂ.ಬಿ. ಶಿವಕುಮಾರ್‌ ಹೇಳಿದ್ದಾರೆ.

Minister KS Eshwarappa support Savitha Samaja demand on ST reservation

ಏನಿದು ಒಳಮೀಸಲಾತಿ ವಿವಾದ? ಇಲ್ಲಿದೆ ಸಂಪೂರ್ಣ ಮಾಹಿತಿ! ಏನಿದು ಒಳಮೀಸಲಾತಿ ವಿವಾದ? ಇಲ್ಲಿದೆ ಸಂಪೂರ್ಣ ಮಾಹಿತಿ!

Recommended Video

Narendra Modi ಇಂದು ಹೊಸ 100 ರುಪಾಯಿಯ ನಾಣ್ಯವನ್ನು ಪರಿಚಯಿಸಿದರು| Oneindia Kannada

ಮುಂದಿನ ದಿನಗಳಲ್ಲಿ ಕನಕ ಗುರುಪೀಠ ಸ್ವಾಮೀಜಿಯವರಿಗೆ, ಕುರುಬ ಜನಾಂಗದ ಮಂತ್ರಿಗಳಿಗೆ, ಶಾಸಕರುಗಳಿಗೆ, ಮಾಜಿ ಮಂತ್ರಿಗಳು ಹಾಗೂ ಶಾಸಕರುಗಳಿಗೆ ಮತ್ತು ಕುರುಬ ಸಮುದಾಯದ ಮುಖಂಡರುಗಳಿಗೆ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗುವುದು ಎಂದು ಇದೇ ಸಂಧರ್ಭದಲ್ಲಿ ತಿಳಿಸಿದರು.

English summary
Minister KS Eshwarappa extended his support Savitha Samaja demand on Scheduled Tribe reservation along with Kurubas said union president M. B Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X