Ramesh Jarkiholi VS Lakshmi Hebbalkar: ವಿಷ ಕನ್ಯೆ ಎಂದ ರಮೇಶ್ ಜಾರಕಿಹೊಳಿಗೆ ತಿರುಗೇಟು ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ, ಜೂನ್ 28: ವಿಷ ಕನ್ಯೆ ಎಂಬ ಪದ ಬಳಿಕೆ ಮಾಡಿರುವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ನಾನು ಉತ್ತರ ಕೊಡುವುದಿಲ್ಲ. ಅವರ ಸಂಸ್ಕೃತಿ ಎಂಥದ್ದು ಎಂದು ರಾಜ್ಯದ ಜನರು ನೋಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಜನರೇ ತಕ್ಕ ಉತ್ತರ ಕೊಡುತ್ತಾರೆ. ಭಾರತ ದೇಶದ ಸಂಸ್ಕೃತಿಯಲ್ಲಿ ವಿಶ್ವಾಸ ಇಟ್ಟವರು ನಾವು. ಅವರು ವಿಷ ಕನ್ಯೆ ಅಂತಾರೋ, ಇನ್ನೊಂದು ಕನ್ಯೆ ಅಂತಾರೋ ಅವರು ಏನೂ, ಸಂಸ್ಕೃತಿ ಏನು ಎನ್ನುವುದು ಇಡೀ ರಾಜ್ಯದ ಜನರು ನೋಡಿದ್ದಾರೆ. ಅವರ ಸಂಸ್ಕೃತಿ ಬಗ್ಗೆಯೂ ನೋಡಿದ್ದಾರೆ. ಅವರು ದೊಡ್ಡವರು ಅವರ ಬಗ್ಗೆ ಮಾತನಾಡಲ್ಲ ಎಂದರು.

ನಮ್ಮ ಬಳಿ ಎಲ್ಲಿ ದುಡ್ಡು ಇದೆ. ನಾನು ಹೆಸರಿಗಷ್ಟೆ ಲಕ್ಷ್ಮೀ ನನ ಬಳಿ ಹಣ ಇಲ್ಲ. ಅವರಿಗೆ ಸಾಹುಕಾರ್ ಅಂತಾರೆ ನಮ್ಮ ಬಳಿ ಎಲ್ಲಿ ದುಡ್ಡು ಸಾಹುಕಾರಗಳು ಅವರಲ್ವಾ ಎಂದು ಲೇವಡಿ ಮಾಡಿದರು. ನಾನು ಯಾರ ಬಳಿಯಾದರೂ ಹಣ ತೆಗದುಕೊಂಡಿದ್ದರೆ ದಾಖಲೆ ಕೊಡಲಿ ಆಮೇಲೆ ಮಾತನಾಡುತ್ತೇನೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರ ಸೊಕ್ಕಿನಿಂದ ಏನಾಯಿತು ಎನ್ನುವುದು ರಾಜ್ಯದ ಜನರಿಗೆ ಗೊತ್ತಾಗಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಮತಗಳಿಂದ ಚನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸಿದರು. ಬಳಿಕ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಶತಾಯಗತಾಯ ನನಗೆ ಸೋಲಿಸಬೇಕು ಎಂದು ಬಂದಿದ್ದರು. ಅದಕ್ಕೆ ಜನ ಏನೂ ಉತ್ತರ ಕೊಟ್ಟಿದ್ದಾರೆ ಎನ್ನುವುದು ಗೊತ್ತು. ದೊಡ್ಡ ಹಾರವನ್ನು ತಂದು ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಿಗೆ ಹಾಕುತ್ತೇನೆ ಎಂದು 2018ರಲ್ಲಿ ನಾನೇ ಗೆಲ್ಲಿಸಿದ್ದು, ನಾನೇ ಸೋಲಿಸುತ್ತೇನೆ ಎಂದಿದ್ದರು. ಇಲ್ಲಿಯವರೆಗೂ ನಾನು ಇನ್ನೂವರೆಗೂ ಹಾರ ಎಲ್ಲಿದೆ ಎಂದು ಕಾಯುತ್ತಿದ್ದೇನೆ. ಗೆದ್ದ ಮೇಲೂ ನಾನೂ ಉತ್ತರ ಕೊಡಲಿಲ್ಲ. ಈಗೂ ಉತ್ತರ ಕೊಡಲ್ಲ. ಕಾಲಾಯತ್ಸಮೈ ನಮಃ ಯಾರಿಗೆ ಸೊಕ್ಕು ಬಂದಿದೆ.ಯಾರು ಏನೂ ಮಾಡಿದ್ದಾರೆ ಎನ್ನುವ ಉತ್ತರ ಬರಲಿದೆ ಎಂದರು.
ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಒಳ್ಳೆಯ ಮುಖ್ಯಮಂತ್ರಿಯನ್ನು ನೇಮಕ ಮಾಡಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೆ ಅಂತಿಮ. ಈಗಾಗಲೇ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಆಶ್ವಾಸನೆಯನ್ನು ಕಾಂಗ್ರೆಸ್ ಈಡೇರಿಸಿ ಮುಂದೆ ಹೋಗುತ್ತಿದ್ದೇವೆ ಎಂದರು.
ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಾದ್ಯಂತ ಪಕ್ಷ ಸಂಘನಟೆ ಮಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಘಟನೆ ಮಾಡಿ ಮುಖ್ಯಮಂತ್ರಿಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದಹಾಗೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಾನು ತಳಮಟ್ಟದದಿಂದ ಬಂದ ಕಾರ್ಯಕರ್ತೆ. ಮುಖ್ಯಮಂತ್ರಿಯನ್ನು ಯಾರೂ ಮಾಡಬೇಕು ಎನ್ನುವುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ರಾಜಕಾರಣ ನಿಂತ ನೀರಲ್ಲ. ರಾಜಕಾರಣ ಎಂದರೆ ಯುದ್ಧದಲ್ಲಿ ಸೋಲನ್ನು ಒಪ್ಪಿಕೊಂಡು ಶಸ್ತ್ರಾಸ್ತ್ರವನ್ನು ತ್ಯಾಗ ಮಾಡಿದಾಗ ಅದು ಸೋಲು. ರಾಜಕಾರಣದಲ್ಲಿ ಸೋಲು ಒಂದೆ ಎಂದು ತೆಗೆದುಕೊಳ್ಳಲಾಗುವುದಿಲ್ಲ. ಸೋಲನ್ನು ಕೂಡ ಸಹ ಸಮಾನವಾಗಿ ಸ್ವೀಕಾರ ಮಾಡಿ ಗೆಲುವಿನ ಮುನ್ನಡಿನ್ನು ಬರೆದಿರುವುದು ಜನರಿಗೆ ಗೋತ್ತಿದೆ.ಈಗ ನನ್ನ ಮಗ ಸೋಲು ಕಂಡಿದ್ದಾನೆ. ಎಲ್ಲಿ ಸೋಲು ಕಂಡಿದ್ದಾನೋ ಅಲ್ಲಿಯೇ ಗೆಲ್ಲಬೇಕು ಎನ್ನುವ ಛಲ ನನ್ನ ಮಗ ಮಾಡಿದ್ದಾನೆ. ಇದೊಂದೆ ಸೋಲಿನಿಂದ ಕಂಗೇಡುವಂತಿಲ್ಲ. ನಾವು ಮೌನಕ್ಕೆ ಜಾರಿರುವುದು ಎಲ್ಲಿ ನಮ್ಮಿಂದ ತಪ್ಪಾಗಿದೆ ಎನ್ನುವುದನ್ನು ಹುಡುಕುತ್ತಿದ್ದೇವೆ ಎಂದರು.
ನಾನು ಆಸೆ ಪಟ್ಟರೆ ಡಿಸಿಎಂ ಮಾಡಿ ಬಿಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ನನಗೆ ಏನೇ ಸ್ಥಾನ ಮಾನ ಕೊಟ್ಟರು ಹೈಕಮಾಂಡ್ ತೀರ್ಮಾನ. ರಾಜ್ಯದಲ್ಲಿ ನನಗೆ ದೊಡ್ಡ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಇದನ್ನು ನಿಭಾಯಿಸುತ್ತೇನೆ. ನಾನು ಮುಗಿಲಿಗೆ ಏಣಿ ಹಾಕುವಳು ಅಲ್ಲ ಎಂದು ಹೇಳಿದ್ದರು.












Click it and Unblock the Notifications