ಭಾಗ್ಯಲಕ್ಷೀ ಯೋಜನೆಯ ಹೆಸರು ಬದಲು: ಇಲ್ಲಿದೆ ಪೋಷಕರಿಗೆ ಮಹತ್ವದ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 10: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ದೃಷ್ಟಿಯಿಂದ ಅಂದಿನ ಬಿಜೆಪಿ ಸರ್ಕಾರ ಭಾಗ್ಯಲಕ್ಷೀ ಯೋಜನೆಯನ್ನು ಜಾರಿಗೆ ತಂದಿತು. 2006ರಲ್ಲಿ ಆರಂಭವಾದ ಈ ಯೋಜನೆಯ ಮೊತ್ತವು ಕೆಲವು ಫಲಾನುಭವಿಗಳ ಕೈ ಸೇರುವ ಸಮಯ ಸಮೀಪಿಸುತ್ತಿದೆ. ಬಾಂಡ್ ಮೆಚ್ಯುರಿಟಿ ಆದ ಬಗ್ಗೆ ಲೆಕ್ಕಚಾರ ಆರಂಭವಾಗಿದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಟಿವಿ 9 ಕನ್ನಡದ ಜೊತೆ ಮಾತನಾಡಿದ ಅವರು, 'ಮುಂಚೆ ಅವರು ಭಾಗ್ಯಲಕ್ಷೀ ಅಂತಾ ಘೋಷಣೆ ಮಾಡಿದ್ದರು. ಅದು ಈಗ ಸುಕನ್ಯ ಸಮೃದ್ಧಿ ಯೋಜನೆ ಅಂತಾ ಬದಲಾಗಿದೆ. ಆ ಹೆಸರು ಬದಲಾಗಿದೆ. ಮೊದಲು ಎಲ್ಐಸಿ ಅವರು ಇದನ್ನು ಮಾಡುತ್ತಿದ್ದರು. ಭಾಗ್ಯಲಕ್ಷೀ ಬಾಂಡ್ ಅಂತಾ ಎಲ್ಐಸಿ ಅವರು ಕೊಡುತ್ತಿದ್ದರು. ಆದರೆ ಈಗ ನಾವು ಪೋಸ್ಟ್ ಆಫೀಸ್ನಲ್ಲಿ ಒಂದು ಹೆಣ್ಣು ಮಗು ಜನಿಸಿದ ದಿನದಿಂದ ಹದಿನೆಂಟು ವರ್ಷದ ವರೆಗೆ ವರ್ಷಕ್ಕೆ ಇಂತಿಷ್ಟು ಅಂತಾ ಹಣ ಹಾಕುತ್ತೇವೆ' ಎಂದರು.

'ಭಾಗ್ಯಲಕ್ಷೀ ಯೋಜನೆಯೇ ಸುಕನ್ಯ ಸಮೃದ್ಧಿ ಯೋಜನೆ ಅಂತಾ ಹೆಸರು ಬದಲಾಗಿದೆ. ಮೊದಲು ಎಲ್ಐಸಿ ಅವರು ಬಾಂಡ್ ಕೊಡುತ್ತಿದ್ದರು. ಈಗ ಪೋಸ್ಟ್ ಆಫೀಸ್ನಲ್ಲಿ ಈ ಯೋಜನೆ ಮಾಡಲಾಗುತ್ತಿದೆ. ಮಗುವಿನ 21ನೇ ವಯಸ್ಸಿಗೆ ಹಣ ಕೊಡುತ್ತೇವೆ. ಒಂದು ವೇಳೆ ಆ ಮಗುವಿಗೆ ವಿದ್ಯಾಭ್ಯಾಸಕ್ಕೆ ಬೇಕು ಅಂದರೆ ಹತ್ತೊಂಬತ್ತು ವರ್ಷಕ್ಕೆ ಒಂದುವರೆ ಲಕ್ಷ ರೂಪಾಯಿ ಹಣ ಕೊಡುತ್ತೇವೆ. ಇಲ್ಲಾ 21ನೇ ವಯಸ್ಸಿಗೆ ಒಂದು ಲಕ್ಷದ ಎಂಬತ್ತು ಸಾವಿರದವರೆಗೂ ಆಗುತ್ತದೆ. ಅದನ್ನು ಕೊಡುತ್ತೇವೆ' ಎಂದು ಹೇಳಿದರು.
'ನಾನು ಈಗ ಎರಡು ಲಕ್ಷ ಹಣ ನೀಡುವ ಬಗ್ಗೆ ಮಾಹಿತಿ ಪಡೆದುಕೊಂಡೆ. ಯಾರ್ಯಾರದು ಈಗಾಗಲೇ ಭಾಗ್ಯಲಕ್ಷೀ ಬಾಂಡ್ ಮೆಚ್ಯುರಿಟಿ ಆಗಿದೆ ಅವರ ಹಣ ಲೆಕ್ಕಚಾರ ಮಾಡಿ ನೀಡಲು ನಮ್ಮ ಅಧಿಕಾರಿಗಳು ಸನ್ನದ್ಧರಾಗುತ್ತಿದ್ದಾರೆ. ಸರ್ಕಾರದ ಈ ಯೋಜನೆ ಖಂಡಿತಾ ಫಲಾನುಭವಿಗಳಿಗೆ ಸಿಗುವಂತೆ ಮಾಡುತ್ತೇವೆ' ಎಂದರು.

'ಸರ್ಕಾರದಿಂದ ಅನೇಕ ಜನಪರ ಯೋಜನೆಗಳು ಬರುತ್ತದೆ. ಅದರ ಲಾಭವನ್ನು ಪಡೆದುಕೊಳ್ಳಿ. ಜೀವನಕ್ಕೆ ಅದರಿಂದ ಸಿಗುವ ಉಪಯೋಗವನ್ನು ಪಡೆದುಕೊಳ್ಳಿ ಎಂದು ಜನರಿಗೆ ಕರೆ ನೀಡಿದ ಸಚಿವರು, ಸರ್ಕಾರಗಳು ಬರುತ್ತವೆ ಹೋಗುತ್ತವೆ ಆದರೆ ಕೆಲವು ಪ್ರಮುಖ ಯೋಜನೆಗಳು, ಜನ ಸಾಮಾನ್ಯರ ಯೋಜನೆಗಳು ಉಳಿಯುತ್ತವೆ. ಇದನ್ನೇ ನಾವು ಮೈಲುಗಲ್ಲು ಎನ್ನುತ್ತೇವೆ' ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
-
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ










Click it and Unblock the Notifications