ಸಚಿವ ಸ್ಥಾನ ಇನ್ನೆಷ್ಟು ದಿನ ಇರುತ್ತೋ ಗೊತ್ತಿಲ್ಲ ಎಂದ ರಾಜ್ಯದ ಪ್ರಭಾವಿ ಸಚಿವ: ರಿಪೋರ್ಟ್ ಕಾರ್ಡ್ ಸಂಕಷ್ಟ!
ಕರ್ನಾಟಕದ ಪ್ರಭಾವಿ ಸಚಿವರೊಬ್ಬರು ಸಚಿವ ಸ್ಥಾನ ಕಳೆದುಕೊಳ್ಳುವ ಮಾತನಾಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಸಚಿವ ಸಂಪುಟ ಬದಲಾವಣೆ ಅಥವಾ ಪುನರ್ರಚನೆಯ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಹ ಹೇಳಿದೆ. ಆದರೆ, ಇದರ ನಡುವೆ ರಾಜ್ಯದ ಪ್ರಭಾವಿ ಸಚಿವರು ಸಚಿವ ಸ್ಥಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನೆಷ್ಟು ದಿನ ಸಚಿವ ಸ್ಥಾನ ಇರಲಿದೆ ಎನ್ನುವ ಬಗ್ಗೆ ಮಾತನಾಡಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಸದ್ಯದ ಮಟ್ಟಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತುಸು ನಿರಾಳವಾದಂತೆ ಇದ್ದರೂ ಸರ್ಕಾರದ ಮಟ್ಟದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿರುವಂತಿದೆ. ಇದೀಗ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ಕರ್ನಾಟಕ ಸರ್ಕಾರದಲ್ಲಿ ಕಳೆದ ತಿಂಗಳು ಇದ್ದಂತಹ ಪರಿಸ್ಥಿತಿ ಈಗ ಇಲ್ಲ. ಕಳೆದ ಮೂರ್ನಾಲ್ಕು ತಿಂಗಳಿನಿಂದ ರಾಜ್ಯದಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆಯಾಗುತ್ತಿದ್ದವು. ಮುಡಾ ಹಾಗೂ ವಕ್ಫ್ ಆಸ್ತಿ ಸೇರಿದಂತೆ ಹಲವು ಗಂಭೀರ ವಿಚಾರಗಳಲ್ಲಿ ರಾಜ್ಯ ಸರ್ಕಾರವು ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ, ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಹೊಸ ಹುಮ್ಮಸಿನಲ್ಲಿದೆ. ಆದರೆ, ಸಚಿವರು ಇನ್ನೆಷ್ಟು ದಿನ ಸಚಿವ ಸ್ಥಾನ ಇರಲಿದೆ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ. ಉನ್ನತ ಶಿಕ್ಷಣ ಡಾ.ಎಂ.ಸಿ.ಸುಧಾಕರ್ ಅವರು ಸಚಿವ ಸ್ಥಾನದ ಬಗ್ಗೆ ಮಾತನಾಡಿದ್ದು, ನನಗೆ ಸಚಿವ ಸ್ಥಾನ ಎಷ್ಟು ದಿನಗಳ ಕಾಲ ಇರಲಿದೆಯೋ ಗೊತ್ತಿಲ್ಲ ಎಂದಿದ್ದಾರೆ.
ಮುಂದುವರಿದು ಕಾಂಗ್ರೆಸ್ ಪಕ್ಷದ (ಹೈಕಮಾಂಡ್) ಅವರು ನನ್ನ ಮೇಲೆ ನಂಬಿಕೆ ಇರಿಸಿ ಸಚಿವ ಸ್ಥಾನ ಕೊಟ್ಟಿದ್ದಾರೆ. ಹೈಕಮಾಂಡ್ ಕೊಟ್ಟಿರುವ ಜವಾಬ್ದಾರಿಯನ್ನು ನಾನು ಚಾಚೂ ತಪ್ಪದೆ ಪಾಲಿಸಿದ್ದೇನೆ ಹಾಗೂ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ ಎನ್ನುವ ಮೂಲಕ ಉನ್ನತ ಶಿಕ್ಷಣ ಡಾ.ಎಂ.ಸಿ.ಸುಧಾಕರ್ ಅವರು ಶಾಕಿಂಗ್ ಹೇಳಿಕೆಯನ್ನು ಕೊಟ್ಟಿದ್ದಾರೆ.
ನಾನು ನನ್ನ ಕೊಟ್ಟಿರುವ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿದ್ದೇನೆ ಎಂದಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೇರಿ ಪಕ್ಷದ ಹಿರಿಯ ನಾಯಕರು ನನ್ನಗೆ ಪಕ್ಷದಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ. ಆದರೆ, ಈ ಸಚಿವ ಸ್ಥಾನ ಇನ್ನೆಷ್ಟು ದಿನ ಇರಲಿದೆಯೋ ಗೊತ್ತಿಲ್ಲ. ಆದರೆ, 2028 ರವರೆಗೂ ನಾನು ಶಾಸಕನಾಗಿಯಂತೂ ಇರುತ್ತೇನೆ ಎಂದಿದ್ದಾರೆ. ಈ ಹೇಳಿಕೆ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಿಪೋರ್ಟ್ ಕಾರ್ಡ್ ತರಿಸಿಕೊಂಡಿದ್ದ ಹೈಕಮಾಂಡ್
ಈಚೆಗೆ ರಾಜ್ಯದ ಸಚಿವರೆಲ್ಲರ ರಿಪೋರ್ಟ್ ಕಾರ್ಡ್ ಅನ್ನು ಕಾಂಗ್ರೆಸ್ ಹೈಕಮಾಂಡ್ ತರಿಸಿಕೊಂಡಿತ್ತು. ಕರ್ನಾಟಕದಲ್ಲಿ ಯಾವ ಸಚಿವರ ಕಾರ್ಯ ವೈಖರಿ ಯಾವ ರೀತಿ ಇದೆ ಎನ್ನುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮೂಲಕ ತರಿಸಿಕೊಳ್ಳಲಾಗಿತ್ತು. ಈ ರಿಪೋರ್ಟ್ ಕಾರ್ಡ್ನ ಆಧಾರ ಮೇಲೆ ಏನಾದರೂ ಬದಲಾವಣೆ ಆಗಲಿದೆಯೇ ಎನ್ನುವ ಪ್ರಶ್ನೆ ಇದೀಗ ಎದುರಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications