Kaynes Company: ಕೇನ್ಸ್ ಕಂಪನಿಗೆ 20 ಎಕರೆ ಭೂಮಿ, ಹೂಡಿಕೆ ವಿಸ್ತರಣೆಗೆ ಕೋರಿಕೆ
ಮೈಸೂರು ಜಿಲ್ಲೆಯ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿಗೆ ಭೇಟಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ರಾಜ್ಯದಲ್ಲಿ ಹೂಡಿಕೆ ವಿಸ್ತರಣೆ ಮಾಡುವಂತೆ ಕೋರಿದರು. ನಿಮಗೆ ಅಗತ್ಯವಾದ ಭೂಮಿ ಮತ್ತಿತರ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವ ಭರವಸೆ ಸಹ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಹೆಸರಾಗಿರುವ ಕೇನ್ಸ್ ಟೆಕ್ನಾಲಜೀಸ್ ಕಂಪನಿಯು ಚಾಮರಾಜನಗರದಲ್ಲಿ ತನ್ನ ಘಟಕವನ್ನು ವಿಸ್ತರಿಸಲು 20 ಎಕರೆ ಭೂಮಿ ಕೇಳಿದೆ. ಈಗ ಅಲ್ಲಿ ಕಂಪನಿಗೆ ಹೊಂದಿಕೊಂಡಿರುವ ಭೂಮಿಯು ಕೃಷಿಯೇತರ ಉದ್ದೇಶಕ್ಕೆ ಮೀಸಲಾಗಿದೆ. ಇದನ್ನು ಬಗೆಹರಿಸಿ ಕಂಪನಿಗೆ ಭೂಮಿ ಕೊಡಲಾಗುವುದು. ಏಳು ರಾಜ್ಯಗಳಲ್ಲಿ ಅಸ್ತಿತ್ವ ಹೊಂದಿರುವ ಕಂಪನಿಯು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಬೇಕು. ಚಾಮರಾಜನಗರದಲ್ಲಿ ಕಂಪನಿಯು ಮುಂದಿನ ವರ್ಷದ ವೇಳೆಗೆ ಒಟ್ಟು 1,500 ಕೋಟಿ ರೂ. ಹೂಡಿಕೆಯಾದಂತಾಗಲಿದೆ. ಜತೆಗೆ 3 ಸಾವಿರ ಜನ ಉಳಿದುಕೊಳ್ಳುವಂಥ ಹಾಸ್ವೆಲ್ ನಿರ್ಮಿಸಲಿದೆ' ಎಂದರು.

ಕೇನ್ಸ್ ಕಂಪನಿಯು 1988ರಲ್ಲಿ ಸ್ಥಾಪನೆಯಾದ ದಿನದಿಂದಲೂ ಮೈಸೂರನ್ನು ಕೇಂದ್ರ ಕಚೇರಿಯಾಗಿ ಹೊಂದಿದೆ. 70 ಜನರಿಂದ ಆರಂಭವಾದ ಚಾಮರಾಜನಗರ ಘಟಕದಲ್ಲಿ ಈಗ 700 ಉದ್ಯೋಗಿಗಳಾಗಿದ್ದಾರೆ. ಕಂಪನಿಯು ತನ್ನ ಉತ್ಪನ್ನಗಳನ್ನು ರೈಲ್ವೇಸ್, ಐಒಟಿ, ಐಟಿ, ವೈದ್ಯಕೀಯ, ಆಟೋಮೋಟೀವ್, ಏರೋಸ್ಪೇಸ್ ಮತ್ತು ರಕ್ಷಣಾ ವಲಯಗಳಿಗೆ ಸಮರ್ಥವಾಗಿ ಪೂರೈಸುತ್ತಿದೆ. ಕಂಪನಿಯು ಒಟ್ಟಾರೆಯಾಗಿ 1,500 ಉದ್ಯೋಗಿಗಳನ್ನು ಹೊಂದಿದ್ದು, 3 ಖಂಡಗಳ 26 ದೇಶಗಳಲ್ಲಿ 250ಕ್ಕೂ ಹೆಚ್ಚು ಗ್ರಾಹಕ ಸಂಸ್ಥೆಗಳ ಜಾಲವನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಮುಳುವಾಡದಲ್ಲೂ ಸ್ಥಾಪಿಸಲು ಮನವಿ
ಈ ಭೇಟಿಯ ಸಂದರ್ಭದಲ್ಲಿ ಸಚಿವರು, ಪಿಸಿಬಿ ತಯಾರಿಸುವ ಕೇನ್ಸ್ ಕಂಪನಿಯು ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೂಡ ಒಂದು ಪಿಸಿಬಿ ಉತ್ಪಾದನಾ ಘಟಕ ಸ್ಥಾಪಿಸಬೇಕು; ಅಲ್ಲಿ ವಿದ್ಯುತ್ ಮತ್ತು ನೀರಿಗೆ ಯಾವ ಕೊರತೆಯೂ ಇಲ್ಲ. ಇದರಿಂದ ಕೈಗಾರಿಕಾ ವಿಕೇಂದ್ರೀಕರಣವನ್ನು ಕೂಡ ಸಾಧಿಸಿದಂತಾಗುತ್ತದೆ ಎಂದು ಮನವಿ ಮಾಡಿಕೊಂಡರು. ಜತೆಗೆ ಕೆಜಿಎಫ್ ನಲ್ಲಿ ಕೂಡ ಕೈಗಾರಿಕೆಗೆ ಭೂಮಿ ಲಭ್ಯವಿದೆ. ಕೇನ್ಸ್ ಕಂಪನಿ ಅಲ್ಲೂ ಘಟಕ ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಸಚಿವರು ಪ್ರಸ್ತಾಪಿಸಿದರು.
ಕೇನ್ಸ್ ಟೆಕ್ನಾಲಜೀಸ್ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ರಮೇಶ್ ಆರ್ ಕಣ್ಣನ್, ಅಧ್ಯಕ್ಷೆ ಸವಿತಾ ರಮೇಶ್, ನಿರ್ದೇಶಕ ಜಯರಾಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸೈಯಂಟ್ ಕಂಪನಿಗೂ ಭೇಟಿ
ಇದೇ ಸಂದರ್ಭದಲ್ಲಿ ಸಚಿವರು ಮತ್ತೊಂದು ಎಲೆಕ್ಟ್ರಾನಿಕ್ ಉತ್ಪನ್ನಗಳ ಕಂಪನಿಯಾದ ಸೈಯಂಟ್ ಗೂ ಭೇಟಿ ನೀಡಿ, ಅಲ್ಲಿಯ ಸೌಲಭ್ಯಗಳನ್ನು ವೀಕ್ಷಿಸಿದರು. ಕಂಪನಿಯ ಉನ್ನತಾಧಿಕಾರಿಗಳು ಕಂಪನಿಯು ಮಾಡುತ್ತಿರುವ ಉನ್ನತ ಮಟ್ಟದ ವಿನ್ಯಾಸ, ಡಿಜಿಟಲ್ ಟ್ವಿನ್ ಕ್ರಿಯೇಷನ್, ದೀರ್ಘಾವಧಿ ತಾಂತ್ರಿಕ ಸಹಭಾಗಿತ್ವ ಇತ್ಯಾದಿಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications