ನಾಲಿಗೆ ಹರಿ ಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ : ಯತ್ನಾಳ್ಗೆ ಎಚ್ಚರಿಕೆ ಕೊಟ್ಟ ನಿರಾಣಿ
ಬೆಂಗಳೂರು,ಜನವರಿ 14: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಿಂಪ್ ಅಂತ ಭಾಷೆ ಪ್ರಯೋಗಿಸಿದ್ದು, ಯತ್ನಾಳ್ ಗೆ ಸಚಿವ ಮುರುಗೇಶ್ ನಿರಾಣಿ ಕಠೋರವಾಗಿ ಗುಡುಗಿದ್ದಾರೆ. ನಾಲಿಗೆ ಹರಿ ಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ಕೊಟ್ಟಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಿಂಪ್ ಅಂತ ಭಾಷೆ ಪ್ರಯೋಗಿಸಿದ್ದು, ಆ ಸಂಸ್ಕೃತಿಯಲ್ಲಿ ಇದ್ದವರೇ ಆ ರೀತಿ ಮಾತಾಡಿದ್ದಾರೆ. ಅಪ್ಪನಿಗೆ ಹುಟ್ಟಿದವರು ಈ ರೀತಿ ಮಾತನಾಡಲ್ಲ. ನಾಲಿಗೆ ಹರಿ ಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ. ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಪಕ್ಷದಲ್ಲಿ ಇರೋಕೆ ಆಗಲ್ಲ ಅಂದರೆ ರಾಜೀನಾಮೆ ಕೊಟ್ಟು ಹೋಗಲಿ. ರಾಜೀನಾಮೆ ಕೊಟ್ಟು ಹೋಗಿ , ಪ್ರತಿಭಟನೆ ಮಾಡಲಿ ಎಂದು ಸಚಿವ ಮುರಗೇಶ ನಿರಾಣಿ ಯತ್ನಾಳ್ ವಿರುದ್ದ ಕಿಡಿಕಾರಿದ್ದಾರೆ.
ಇನ್ನೂ ಶಾಸಕ ಯತ್ನಾಳ್ ಆಟಕ್ಕೆ ವಿಜಯಪುರದ ಜನರು ಉತ್ತರ ಕೊಡುತ್ತಾರೆ. 2ಎ ಮೀಸಲಾತಿ ಬೇಡಿಕೆ ಇಂದು, ನಿನ್ನೆಯದಲ್ಲ. ಪಂಚಮಸಾಲಿಗೆ 2ಎ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಾರಿಗೆ ಬದ್ಧತೆ ಇದೆ. 2C, 2D ಸ್ಥಾಪನೆ ಮಾಡಿ ಮೀಸಲಾತಿಗೆ ಸರ್ಕಾರ ಮುಂದಾಗಿತ್ತು. ಇಷ್ಟೆಲ್ಲಾ ಮಾಡಿದರೂ ನಮ್ಮ ಮೇಲೆ ಗೂಬೆ ಕೂರಿಸಲು ಪ್ರಯತ್ನ ಮಾಡುತ್ತಿದ್ದಾರೆ. SC, ST, ಒಕ್ಕಲಿಗ ಸಮುದಾಯ ಶಾಂತಿಯುತವಾಗಿ ಮನವಿ ಮಾಡಿದೆ ಎಂದು ಹೇಳಿದರು.

ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಏಕೆ ಮೀಸಲಾತಿ ಕೇಳಲಿಲ್ಲ. ಅಂದು 2016ರಲ್ಲಿ ಕಾಂತರಾಜ್ ವರದಿಯಲ್ಲಿ ಮೀಸಲಾತಿ ಕೊಡಬಾರದು ಎಂದು ಹೇಳಿತ್ತು. ಆಗ ಯತ್ನಾಳ್ , ಜಯಮೃತ್ಯುಂಜಯ ಸ್ವಾಮೀಜಿಗಳು ಎಲ್ಲಿ ಮಲಗಿದ್ದರು. ರಾಜಕೀಯ ಕಾರಣಕ್ಕಾಗಿ ಪಂಚಮಸಾಲಿ ಹೋರಾಟ ನಡೆಸುತ್ತಿದ್ದಾರೆ . ಲಿಂಗಾಯಿತ ಸಮುದಾಯ ಒಡೆಯುವ ಹುನ್ನಾರ ನಡೆಸಿದ್ದಾರೆ. ಅಂದು ಸ್ವಾಮೀಜಿ ಕಾಂತರಾಜ್ ವರದಿ ವಿರೋಧಿಸಲಿಲ್ಲ ಇಂದು ಲಿಂಗಾಯತ ಸಮುದಾಯ ಒಡೆಯಲು ಹೋರಾಟ ಮಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಮೀಸಲಾತಿ ನೀಡಬೇಕು ಶ್ರೀಗಳು ಇದನ್ನೆಲ್ಲಾ ತಿಳಿದುಕೊಳ್ಳಬೇಕು ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications