ಕೈ-ಕಮಲ ನಡುವೆ ಪಂಚೆ ರಾಜಕೀಯ; ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ; ಸಿ ಟಿ ರವಿಗೆ ಟಾಂಗ್ ಕೊಟ್ಟ ಚಲುವರಾಯಸ್ವಾಮಿ
ಮೈಸೂರು, ಜುಲೈ 01: ಕಾಂಗ್ರೆಸ್-ಬಿಜೆಪಿ ನಡುವೆ ಪಂಚೆ ರಾಜಕೀಯ ಮುನ್ನೆಲೆಗೆ ಬಂದಿದ್ದು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಪಂಚೆ ಬಗ್ಗೆ ಮಾತನಾಡುವ ಮೊದಲು ಸಿ ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ ಎಂದು ಸಿ ಟಿ ರವಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. 65 ಸ್ಥಾನಕ್ಕೆ ಕುಸಿದಿರುವ ಅವರಲ್ಲಿ ಕಚ್ಚಾಟ ಇಲ್ವಾ? ನಮ್ಮಲ್ಲಿ ಡಿಕೆಶಿ, ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ? ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತಾನಾಡುತ್ತಾರೆ. ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ. ಅದರಲ್ಲಿ ಒಬ್ಬರು ಇಬ್ಬರು ಉಳಿದುಕೊಂಡಿದ್ದಾರೆ. ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ನಮ್ಮ ಪಂಚೆ ಸರಿ ಮಾಡೋದು ಬೇಡ, ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳೋಕೆ ಹೇಳಿ ಎಂದು ಹೇಳಿದರು.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎರಡನೇ ಟೋಲ್ ಸಂಗ್ರಹ ಆರಂಭ ವಿಚಾರವಾಗಿ ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ಉದ್ಧಟತನವಾಗಿದೆ. ಜನರಿಗೆ ಟೋಲ್ ಕಟ್ಟದಂತೆ ಕರೆ ನೀಡಲಾಗಿದೆ. ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ, ನೇರವಾಗಿ ಪ್ರತಿಭಟನೆಗೆ ಹೋಗುವುದಿಲ್ಲ.ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ, ಟೋಲ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ. ಈ ಸಂಬಂಧ ನಮ್ಮ ಶಾಸಕರು ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದರು.
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಟೋಲ್ ಸಂಗ್ರಹ ವಿಚಾರವಾಗಿ ಮಾತನಾಡಿ, ಅಭಿವೃದ್ದಿ ಕಾರ್ಯಗಳಿಗೆ ಕೇಂದ್ರ ಸರ್ಕಾರ ಎಲ್ಲಿಂದಲೋ ಹಣ ತರುವುದಿಲ್ಲ. ರಾಜ್ಯ ಸರ್ಕಾರಗಳು ಕಟ್ಟುವ ತೆರಿಗೆಯಿಂದಲೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತದೆ. ಹೀಗಿದ್ದರೂ ರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕಾಮಗಾರಿ ಪೂರ್ಣವಾಗದೇ ಟೋಲ್ ಸಂಗ್ರಹ ಮಾಡುವುದು ಬೇಡ ಅಂತ ಹೇಳಿದ್ದೇವೆ.

ಹೈವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವುದರಿಂದ ಎಡಿಜಿಪಿ ಅಲೋಕ್ಕುಮಾರ್ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಲ್ಲ ಸಮಸ್ಯೆಗಳನ್ನು ಸರಿ ಮಾಡಿಕೊಂಡು ಟೋಲ್ ಸಂಗ್ರಹಿಸಿದರೆ ನಮ್ಮ ಅಡ್ಡಿ ಇಲ್ಲ. ಶೀರ್ಘದಲ್ಲೇ ಇದಕ್ಕೊಂದು ರೆಮಿಡಿ ಕಂಡು ಹಿಡಿಯುತ್ತೇವೆ ಎಂದು ಕೆಂಡಾಮಂಡಲರಾದರು.
ದಿನ ಬೆಳಗಾದ್ರೆ ಜೆಡಿಎಸ್ ಬಿಜೆಪಿಯವರು ಏನೇನೋ ಮಾತನಾಡಿ ಪ್ರಚಾರ ತೆಗೆದುಕೊಳ್ಳೋಕೆ ನೋಡುತ್ತಾರೆ. ಗ್ಯಾರಂಟಿ ಯೋಜನೆಗಳು ಜಾರಿ ಆಗೋದೇ ಇಲ್ಲ ಅಂತ ಎರಡೂ ಪಕ್ಷ ಹೋರಾಟ ಮಾಡಿದೆ. ದೇಶದ ಇತಿಹಾಸದಲ್ಲೇ ಯಾವುದೇ ಸರ್ಕಾರ ಈ ರೀತಿ ಮಾಡಿದೆಯಾ? ಎಂದು ಪ್ರಶ್ನಿಸಿದರು.
ಜುಲೈ 5 ರಿಂದ ಯಡಿಯೂರಪ್ಪ ಧರಣಿ ಆರಂಭಿಸುವ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ, ಬೊಮ್ಮಾಯಿ, ಸಾಮ್ರಾಟ್ ಅಶೋಕ್, ಸಿ ಟಿ ರವಿ ಎಲ್ಲರೂ ಬಂದು ಹೋರಾಟ ಮಾಡಲಿ ಎಂದು ಎನ್ ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.
ಪ್ರತಿ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾದರೆ ಅಭಿವೃದ್ಧಿ ಕಾರ್ಯಗಳು ಅಸಾಧ್ಯ. ಯಾವುದೇ ಒಂದು ಪಕ್ಷದ ಸರ್ಕಾರ ಹತ್ತು ವರ್ಷ ಅಧಿಕಾರದಲ್ಲಿದ್ದರೆ ಮಾತ್ರ ಪೂರ್ಣಾ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗಲಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾದರೆ ಅಭಿವೃದ್ಧಿಗೆ ಮಾರಕವಾಗಲಿದೆ, ಅದೇ ರೀತಿ ಸಮ್ಮಿಶ್ರ ಸರ್ಕಾರವಿದ್ದರೂ ಸಹ ಅಭಿವೃದ್ಧಿ ಕಾರ್ಯ ಅಸಾಧ್ಯ. ಜಿಲ್ಲಾ ಉಸ್ತುವಾರಿ ಕೂಡ ಐದು ವರ್ಷ ಒಬ್ಬರ ಕೈಯಲ್ಲೇ ಇರಬೇಕು, ಮಂಡ್ಯ ಜಿಲ್ಲೆಗೆ 20 ವರ್ಷಗಳ ಕಾಲ ಬೇರೆ ಜಿಲ್ಲೆಯವರು ಉಸ್ತುವಾರಿ ಸಚಿವರಾಗಿದ್ದರು.ಪರಿಣಾಮ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡಲು ಆಗಲಿಲ್ಲ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications