ಪುಣ್ಯಕೋಟಿ ಯೋಜನೆ ಭಾಗವಾಗಿ 31 ಹಸು ದತ್ತು ಪಡೆದ ಸಚಿವ ಪ್ರಭು ಚವ್ಹಾಣ್
ಬೆಂಗಳೂರು, ಜುಲೈ 29: ಪುಣ್ಯಕೋಟಿ ದತ್ತು ಯೋಜನೆ ಯೋಜನೆ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದರಂತೆ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಲ್ಲಿ 31 ಗೋವುಗಳನ್ನು ದತ್ತು ಪಡೆದಿರುವುದಾಗಿ ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ್ ಹೇಳಿದ್ದಾರೆ.
ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೋರ್ಟಲ್ ಅನ್ನು ಬಿಡುಗಡೆ ಮಾಡಿದ್ದರು. ಈ ಬಗ್ಗೆ ಸಚಿವ ಪ್ರಭು ಬಿ. ಚವ್ಹಾಣ್ ಅವರು ಹಸುಗಳ ಪೋಷಣೆ ಮತ್ತು ಆರೈಕೆ ಉತ್ತೇಜನೆ ದತ್ತು ಸ್ವೀಕಾರದ ಉದ್ದೇಶವೆಂದು ತಿಳಿಸಿದ್ದಾರೆ.
ಈ ದಿನ 31 ಗೋವುಗಳನ್ನು ದತ್ತು ತೆಗೆದುಕೊಂಡು ಅವುಗಳ ರಕ್ಷಣೆ ಹಾಗೂ ಪೋಷಣೆಗೆ ಸಹಾಯ ಮಾಡಿದ್ದು, ನನ್ನ ಹಿಂದಿನ ಜನ್ಮದ ಪುಣ್ಯವಾಗಿದೆ. ಈ ಹಿಂದೆ ನನ್ನ ಜನ್ಮದಿನದಂದು ಬೀದರ್ ಗೋಶಾಲೆಯಲ್ಲಿ ಗೋವುಗಳನ್ನು ದತ್ತು ಪಡೆದಿದ್ದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನದಂದು ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ 11 ಗೋವುಗಳನ್ನು ದತ್ತು ಪಡೆದಿದ್ದಾರೆ. ಇದು ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಸಚಿವ ಪ್ರಭು ಬಿ. ಚವ್ಹಾಣ್ ಹೇಳಿದರು.
ಪುಣ್ಯಕೋಟಿ ಯೋಜನೆಯ ಅನುಷ್ಠಾನ ಹೆಚ್ಚಾಗಲು ಸಚಿವ ಚವ್ಹಾಣ್, ಎಲ್ಲ ಶಾಸಕರು, ಜನರು ಮತ್ತು ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಸರ್ಕಾರಿ ಹಾಗೂ ಖಾಸಗಿ ಗೋಶಾಲೆಗಳಲ್ಲಿ ನಾನು ಸೇರಿದಂತೆ ಸಾರ್ವಜನಿಕರು 100 ಗೋವುಗಳನ್ನು ದತ್ತು ಪಡೆದಿದ್ದಾರೆ. 1,314 ಮಂದಿ ಗೋಶಾಲೆಗಳಿಗೆ ದೇಣಿಗೆ ನೀಡಿದ್ದಾರೆ ಎಂದರು.
ರಾಜ್ಯಾದ್ಯಂತ ಪುಣ್ಯಕೋಟಿ ದತ್ತು ಯೋಜನೆ ಪೋರ್ಟಲ್ನಲ್ಲಿ 123 ಗೋಶಾಲೆಗಳು ನೋಂದಣಿಯಾಗಿದ್ದು, 60 ಗೋಶಾಲೆಗಳ ನೋಂದಣಿ ಪ್ರಗತಿಯಲ್ಲಿದೆ. 16,650 ಜಾನುವಾರುಗಳನ್ನು ಈ ಯೋಜನೆಯಡಿ ನೋಂದಾಯಿಸಲಾಗಿದೆ. ಈ ಯೋಜನೆ ಜಾರಿಯಿಂದ ದೇಶದಲ್ಲೇ ಇಂತಹ ಕಾರ್ಯಕ್ರಮ ರೂಪಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ ಎಂದು ತಿಳಿಸಿದರು.

ದೇಶದಲ್ಲೇ ಮೊದಲ ರಾಜ್ಯ
ಗೋಹತ್ಯೆ ನಿಷೇಧ ಕಾಯಿದೆ ಜಾರಿಯಾದ ನಂತರ ಜಿಲ್ಲೆಗಳಲ್ಲಿ ಸರ್ಕಾರಿ ಗೋಶಾಲೆ ಸ್ಥಾಪನೆಯಾಗಿದೆ. ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಿದ ದೇಶದಲ್ಲೇ ಮೊದಲ ರಾಜ್ಯ ಕರ್ನಾಟಕ. 2022-23ರ ಬಜೆಟ್ನಲ್ಲಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಸಹಕಾರದೊಂದಿಗೆ ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ಚವ್ಹಾಣ್ ತಿಳಿಸಿದರು.

ಗೋವು ದತ್ತು ಸ್ವೀಕಾರ, ಗೋಶಾಲೆಗೆ ದೇಣಿಗೆ
ರೈತರು ತಂದಿರುವ ಜಾನುವಾರುಗಳು ವೃದ್ಧ, ಅನಾರೋಗ್ಯ ಪೀಡಿತ, ನಿರ್ಗತಿಕ, ಗಂಡು ಕರುಗಳು ಹಾಗೂ ನ್ಯಾಯಾಲಯ ಮತ್ತು ಪೊಲೀಸ್ ವಶದಲ್ಲಿರುವ ಜಾನುವಾರುಗಳಿಗೆ ಆಶ್ರಯ ನೀಡಿ ಪೋಷಣೆ ಮಾಡಲಾಗುತ್ತದೆ. ಪುಣ್ಯಕೋಟಿ ದತ್ತು ಯೋಜನೆಯಡಿ ಗೋಶಾಲೆಯಲ್ಲಿ ಗೋವುಗಳನ್ನು ಸಾಕಲು ಸಾರ್ವಜನಿಕರಿಗೆ ಗೋವು ದತ್ತು ಸ್ವೀಕಾರ, ಗೋಶಾಲೆಗೆ ದೇಣಿಗೆ ಹಾಗೂ ಜಾನುವಾರು ಪೋಷಣೆ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

215ಕ್ಕೂ ಹೆಚ್ಚು ಖಾಸಗಿ ಗೋಶಾಲೆಗಳಲ್ಲಿ ಆಶ್ರಯ
ಸಾರ್ವಜನಿಕರು ಗೋವುಗಳನ್ನು ದತ್ತು ಪಡೆದು ಗೋಸಂರಕ್ಷಣೆಯಲ್ಲಿ ಪಾಲ್ಗೊಳ್ಳುವಂತೆ ಚವ್ಹಾಣ್ ಮನವಿ ಮಾಡಿದರು. ಕರ್ನಾಟಕದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳು ಗೋಶಾಲೆಗಳಿಂದ ಜಾನುವಾರುಗಳನ್ನು ದತ್ತು ಪಡೆಯುವುದನ್ನು ಉತ್ತೇಜಿಸಲು, ರಾಜ್ಯ ಸರ್ಕಾರವು ಜುಲೈ 28 ರಂದು ಹಸು ದತ್ತು ಯೋಜನೆಗೆ ಚಾಲನೆ ನೀಡಿತ್ತು. ರಾಜ್ಯದ 215ಕ್ಕೂ ಹೆಚ್ಚು ಖಾಸಗಿ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಆಶ್ರಯ ನೀಡಲಾಗಿದ್ದು, ಸುಮಾರು 100 ಸರ್ಕಾರಿ ಗೋಶಾಲೆಗಳನ್ನು ಹಂತ ಹಂತವಾಗಿ ಆರಂಭಿಸಲಾಗುತ್ತಿದೆ ಎಂದು ಸಚಿವ ಚವ್ಹಾಣ್ ಹೇಳಿದ್ದರು.

ದತ್ತು ಪಡೆಯಲು ತಿಳಿಸುವಂತೆ ಮನವಿ
ಪುಣ್ಯಕೋಟಿ ದತ್ತು ಪೋರ್ಟಲ್ನಲ್ಲಿ ಪ್ರತಿ ಜಾನುವಾರುಗಳಿಗೆ ವಾರ್ಷಿಕ 11,000 ರೂ.ಗಳನ್ನು ಪಾವತಿಸುವ ಮೂಲಕ ಜಾನುವಾರು ದತ್ತು (ಎಡಿಒಪಿಟಿ) ಯೋಜನೆಯಡಿ ಜಾನುವಾರುಗಳನ್ನು ದತ್ತು ಪಡೆಯಲು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವಂತೆ ಸಚಿವ ಪ್ರಭು ಚವ್ಹಾಣ್ ಬಳ್ಳಾರಿಯಲ್ಲಿ ಯೋಜನೆ ಬಗ್ಗೆ ಮಾಹಿತಿ ನೀಡಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications