ದಲಿತರನ್ನು ಹೊರಗಿಟ್ಟು ಅದ್ಯಾವ ಬಾಯಿಯಲ್ಲಿ ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ: ಸಚಿವ ಪ್ರಿಯಾಂಕ್ ಖರ್ಗೆ!
ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಅವರು ನೀಡಿರುವ ಹೇಳಿಕೆಯುವ ವಿವಾದಕ್ಕೆ ಕಾರಣವಾಗಿದ್ದು. ಈ ಹೇಳಿಕೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಟೀಕಿಸಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ: ಯತ್ನಾಳ್
ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS ನ ಅಂತರಂಗದ ಧೋರಣೆ.

ದಲಿತರಿಗೆ ಪುಷ್ಪಾರ್ಚನೆಗೆ ಅಧಿಕಾರವಿಲ್ಲ,
ದಲಿತರಿಗೆ ನೀರು ಕುಡಿಯುವ ಅಧಿಕಾರವಿಲ್ಲ,
ದಲಿತರಿಗೆ ಆಡಳಿತದ ಅಧಿಕಾರವಿಲ್ಲ,
ದಲಿತರಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲ,
ದಲಿತರಿಗೆ ವ್ಯವಹಾರ ನಡೆಸುವ ಅಧಿಕಾರವಿಲ್ಲ,
ದಲಿಗರಿಗೆ ಬದುಕುವ ಅಧಿಕಾರವೂ ಇಲ್ಲ.
ಇದು ಮನುವಾದಿಗಳ ಅಂತರಂಗ, ಬಹಿರಂಗ ಎಲ್ಲವೂ..
ದಲಿತರು ಹಿಂದೂ ಧರ್ಮದ ವ್ಯಾಪ್ತಿಯೊಳಗಿಲ್ಲವೇ ?
ಇದೇ ಧೋರಣೆಯಿಂದಲೇ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ಹೊರಗಿಟ್ಟಿದ್ದಲ್ಲವೇ?
ಇದೇ ಧೋರಣೆಯಿಂದಲೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ದೇವಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಲ್ಲವೇ ?
ಈ ಶೋಷಣೆಯ ಧೋರಣೆಗಾಗಿಯೇ ಅಲ್ಲವೇ ಬಾಬಾ ಸಾಹೇಬರು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದಿದ್ದು ? ಎಂದು ಪ್ರಶ್ನೆ ಮಾಡಿದ್ದಾರೆ.
ಬಾಬಾ ಸಾಹೇಬರ ಸಂವಿಧಾನದ ಕಾಲಘಟ್ಟದಲ್ಲೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೇ ದಲಿತರ ಬಗ್ಗೆ ಈ ಪರಿ ತಿರಸ್ಕಾರವಿರುವಾಗ ಹಿಂದಿನ ವ್ಯವಸ್ಥೆ ದಲಿತರೆಡೆಗೆ ಇನ್ನೆಷ್ಟರ ಮಟ್ಟಿಗೆ ಕ್ರೂರವಾಗಿದ್ದಿರಬಹುದು. ಸಾಮಾಜಿಕ ವ್ಯವಸ್ಥೆಯಲ್ಲಿ ಧಾರ್ಮಿಕ ಬಣ್ಣ ಲೇಪಿಸಿ ಒಂದು ವರ್ಗದ ಮನುಷ್ಯರನ್ನು ನಿಷ್ಕೃಷ್ಟವಾಗಿ ಕಾಣುತ್ತಿರುವಾಗ ಹಿಂದೂ ಧರ್ಮದಲ್ಲಿ ಯಾವ ಶ್ರೇಷ್ಠತೆಯನ್ನು ಹುಡುಕುತ್ತೀರಿ ? ದಲಿತರನ್ನು ಹೊರಗಿಟ್ಟು ಅದ್ಯಾವ ಬಾಯಿಯಲ್ಲಿ ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದಾಗ ಬಾಯಿ ಬಡಿದುಕೊಂಡಿದ್ದ ಬಿಜೆಪಿ ನಾಯಕರು ಯತ್ನಾಳರ ಮಾತಿಗೆ ಮೌನವಾಗಿರುವುದೇಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ. BJP ನಾಯಕರ ಕಣ್ಣು, ಕಿವಿ, ಬಾಯಿಗಳಿಗೆ ಬೀಗ ಹಾಕಿಕೊಂಡಿರುವುದೇಕೆ ಎಂದೂ ಅವರು ಕೇಳಿದ್ದಾರೆ.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications