ಸಿಎಂ ಭೇಟಿಯಾದ ರಮೇಶ ಜಾರಕಿಹೊಳಿ, ಆರ್ ಅಶೋಕ್: ಕುತೂಹಲಕ್ಕೆ ಎಡೆ
ಬೆಂಗಳೂರು, ಮೇ 30: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡು ಕೆಲ ಶಾಸಕರು ಬಿನ್ನಮತೀಯ ಚಟುವಟಿಕೆ ನಡೆಸಿದ್ದಾರೆ ಎಂಬ ವದಂತಿ ಎದ್ದಿದೆ.
ಇದರ ಬೆನ್ನಲ್ಲೇ ಶನಿವಾರ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಸದ್ಯ ಬೆಳಗಾವಿ ಜಿಲ್ಲೆಯಿಂದಲೇ ಕಿಡಿ ಹೊತ್ತಿಕೊಂಡಿರುವುದರಿಂದ ರಮೇಶ ಜಾರಕಿಹೊಳಿ ಅವರ ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮುಖಂಡ ರಮೇಶ್ ಕತ್ತಿ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಕೆಲ ಶಾಸಕರು ಬಿನ್ನಮತೀಯ ಚಟುವಟಿಕೆ ನಡೆಸಿದ್ದಾರೆ ಎಂಬುದರ ಬಗ್ಗೆ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಅಲ್ಲದೇ ಕಂದಾಯ ಸಚಿವ ಆರ್ ಅಶೋಕ್ ಅವರೂ ಕೂಡ ಯಡಿಯೂರಪ್ಪ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕೈದು ಜನ ಒಟ್ಟಿಗೆ ಸೇರಿ ಊಟ ಮಾಡಿದರೆ ಅದು ಬಂಡಾಯ ಅಲ್ಲ. ಯಡಿಯೂರಪ್ಪನವರು ಈ ವಯಸ್ಸಿನಲ್ಲಿಯೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮೂರು ವರ್ಷಕ್ಕೆ ಒಂದು ದಿನವೂ ಕಡಿಮೆ ಇಲ್ಲದಂತೆ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದರು.
-
ಕರ್ನಾಟಕ ಸರ್ಕಾರ: ಕಲೆ, ಸಾಹಿತ್ಯ ಗಣ್ಯರಿಗೆ ಗೌರವ, ಸಾಂಸ್ಕೃತಿಕ ಪ್ರಶಸ್ತಿಗಳ ಆಯ್ಕೆ ಪಟ್ಟಿ ಪ್ರಕಟ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್











Click it and Unblock the Notifications