ಕಾಂಗ್ರೆಸ್ ಪ್ರತಿಭಟನೆ ವೇಳೆ ಸಚಿವೆ ಉಮಾಶ್ರೀ ಅಸ್ವಸ್ಥ
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಚಿವೆ ಉಮಾಶ್ರೀ. ಪ್ರತಿಭಟನೆ ವೇಳೆ ವೇದಿಕೆಗೆ ಆಗಮಿಸಿದಾಗ ಇದ್ದಕ್ಕಿದ್ದಂತೆ ಅಸ್ವಸ್ಥರಾದ ಸಚಿವೆ.
ಮೈಸೂರು, ಫೆಬ್ರವರಿ 27: ಪ್ರತಿಭಟನೆಯೊಂದರಲ್ಲಿ ಭಾಗಿಯಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅವರು ಅಸ್ವಸ್ಥರಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣ ಖಂಡಿಸಿ ಬಾಗಲಕೋಟೆಯ ಹುನಗುಂದದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿತ್ತು. ಈ ಧರಣಿಯಲ್ಲಿ ಪಾಲ್ಗೊಂಡಿದ್ದ ಸಚಿವೆ ಉಮಾಶ್ರೀ ಪ್ರತಿಭಟನಾ ವೇದಿಕೆಗೆ ಬಂದಾಗ ಅಸ್ವಸ್ಥರಾದರು.

ಬಳಿಕ ಇವರನ್ನ ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿ ಸಲಿಸಲಾಗಿದ್ದು, ಸಚಿವೆ ಉಮಾಶ್ರೀ ಅವರಿಗೆ ವೈದ್ಯಾಧಿಕಾರಿ ಕುಸುಮಾ ಅವರು ಚಿಕಿತ್ಸೆ ನೀಡಿದ್ದಾರೆ. ಆನಂತರ, ಉಮಾಶ್ರೀ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯೆ ಕುಸುಮಾ, ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಅವರಿಗೆ ಸದ್ಯಕ್ಕೆ ವಿಶ್ರಾಂತಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.












Click it and Unblock the Notifications