Budget 2023; ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ : ಸಚಿವ ಸುನಿಲ್ ಕುಮಾರ್
ಮಧ್ಯಮ ವರ್ಗದ ಆದ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತನ್ನ ಆಯವ್ಯಯ ರೂಪಿಸಿದೆ ಎಂದು ಸಚಿವ ವಿ ಸುನಿಲ್ ಕುಮಾರ ಹೇಳಿದರು.
ಬೆಂಗಳೂರು, ಫೆಬ್ರವರಿ1: ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಸಮತೋಲಿತ ಬಜೆಟ್ ಇದಾಗಿದ್ದು, ಮಧ್ಯಮ ವರ್ಗದ ಆದ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತನ್ನ ಆಯವ್ಯಯ ರೂಪಿಸಿದೆ ಎಂದು ಸಚಿವ ವಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಮೃತ ಕಾಲದಲ್ಲಿ ಏಳು ಆದ್ಯತಾ ವಲಯವನ್ನು " ಸಪ್ತರ್ಷಿ" ಎಂದು ಪರಿಗಣಿಸಿ ಕೇಂದ್ರ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗಿದೆ. ಹಸಿರು ಕ್ರಾಂತಿಗಾಗಿ ಪಿಎಂ ಪ್ರಣಾಮ್ ಯೋಜನೆ ರೂಪಿಸಲಾಗಿದ್ದು, ಮತ್ಸ್ಯ ಸಂಪದ ಯೋಜನೆಯಲ್ಲಿ 6000 ಕೋಟಿ ರೂ. ಹೂಡಿಕೆ ಪ್ರಸ್ತಾಪಿಸಿರುವುದು ರಾಷ್ಟ್ರದ ಕರಾವಳಿ ಭಾಗದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.
ಎಲ್ಲದಕ್ಕಿಂತ ಹೆಚ್ಚಾಗಿ ಭದ್ರ ಮೇಲ್ದಂಡೆ ಯೋಜನೆಗಾಗಿ ಬಜೆಟ್ ನಲ್ಲಿ 5300 ಕೋಟಿ ರೂ. ನಿಗದಿ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಸಿರು ಇಂಧನ ಕ್ಷೇತ್ರವನ್ನು ಆದ್ಯತಾ ವಲಯವಾಗಿ ಗುರುತಿಸಲಾಗಿದ್ದು, 2030 ರ ವೇಳೆಗೆ 5 ಎಂಎಂಟಿ ಹಸಿರು ಹೈಡ್ರೋಜನ್ ಉತ್ಪಾದನಾ ಗುರಿ ನಿಗದಿ ಮಾಡಲಾಗಿದ್ದು, 35000 ಕೋಟಿ ರೂ. ಹೂಡಿಕೆಗೆ ನಿರ್ಧರಿಸಿರುವುದು ಸ್ವಾಗತಾರ್ಹ. ಇದು ರಾಜ್ಯಗಳ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಬಂಡವಾಳ ಹೂಡಿಕೆ ಮಿತಿಯನ್ನು 10 ಲಕ್ಷ ಕೋಟಿಗೆ ಹೆಚ್ಚಳ ಮಾಡಲಾಗಿದ್ದು, ಇದು ಜಿಡಿಪಿಯ ಶೇ.3.3 ರಷ್ಟಾಗುತ್ತದೆ. ಇದು ಭಾರತದ ಬದಲಾದ ಆರ್ಥಿಕ ಶಕ್ತಿಗೆ ನಿದರ್ಶನ ಎಂದು ಹೇಳಿದ್ದಾರೆ.
ಕೊರೋನಾ ಕಾಲಘಟದಲ್ಲಿ ದೇಶದ ಯಾವೊಬ್ಬ ಪ್ರಜೆಯೂ ಹಸಿದಿರಬಾರದೆಂಬ ಕಾರಣಕ್ಕೆ ಪಿಎಂ ಗರೀಬ್ ಕಲ್ಯಾಣ ಯೋಜನೆಯಲ್ಲಿ ಉಚಿತವಾಗಿ ಅಕ್ಕಿ ಹಾಗೂ ಧಾನ್ಯ ವಿತರಣೆ ಮಾಡಲಾಗಿತ್ತು. ಮುಂದಿನ ಒಂದು ವರ್ಷದ ಅವಧಿಗೆ ಈ ಯೋಜನೆ ವಿಸ್ತರಣೆ ಮಾಡಿರುವುದು ಕೇಂದ್ರ ಸರ್ಕಾರದ ಮಾತೃ ಹೃದಯದ ಸಂಕೇತ. ಅದೇ ರೀತಿ ಮಧ್ಯಮ ವರ್ಗದವರ ಬಹು ನಿರೀಕ್ಷಿತ ಆದಾಯ ತೆರಿಗೆ ಮಿತಿ ಹೆಚ್ಚಳ ಮಾಡಲಾಗಿದೆ. 5 ಲಕ್ಷ ರೂ.- 7 ಲಕ್ಷ ರೂ.ಗೆ ತೆರಿಗೆ ವಿನಾಯಿತಿ ನೀಡಿರುವುದು ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications