ಡಿಕೆ ಶಿವಕುಮಾರ್ ಸಾಮರ್ಥ್ಯಕ್ಕೆ ಸವಾಲಾಗುವ ಹುದ್ದೆ ನೀಡಲಿದೆ ಹೈಕಮಾಂಡ್
ಬೆಂಗಳೂರು, ಜೂನ್ 06: ಸಚಿವ ಡಿ.ಕೆ.ಶಿವಕುಮಾರ್ ತಮ್ಮ ನಾಯಕತ್ವವನ್ನು, ತಮ್ಮ ರಾಝಕೀಯ ಚತುರತೆಯನ್ನು, ಸಂಘಟನಾ ಶಕ್ತಿಯನ್ನು ಹಲವು ಭಾರಿ ಋಜುವಾತು ಪಡಿಸಿದ್ದಾರೆ. ಆದರೆ ಅವರಿಗೆ ಈವರೆಗೆ ಅವರ ಸಾಮರ್ಥ್ಯಕ್ಕೆ ತಕ್ಕಂತ ಹುದ್ದೆ ಕಾಂಗ್ರೆಸ್ನಲ್ಲಿ ಸಿಕ್ಕಿಲ್ಲವೆಂದೇ ಹೇಳಬೇಕು.
ಆದರೆ ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅವರ ಸಾಮರ್ಥ್ಯಕ್ಕೆ ತಕ್ಕುದಾದುದು ಮಾತ್ರವಲ್ಲ, ಅವರ ಸಾಮರ್ಥ್ಯಕ್ಕೆ ಸವಾಲೆನಿಸುವಂತಹಾ ಹುದ್ದೆಯನ್ನು ನೀಡಲು ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಪುಟಿದೇಳಲು ದಾರಿ ಹುಡುತ್ತಿರುವ ರಾಜ್ಯ ಕಾಂಗ್ರೆಸ್ನ ಸಾರಥ್ಯವನ್ನು ಡಿ.ಕೆ.ಶಿವಕುಮಾರ್ ಅವರಿಗೆ ವಹಿಸಲು ಹೈಕಮಾಂಡ್ ಚಿಂತಿಸಿದೆ.
ಲೋಕಸಭೆ ಚುನಾವಣೆ ಸೋಲಿನ ಬಳಿಕ ಹಲವು ಬದಲಾವಣೆಗಳನ್ನು ಮಾಡಲು ಹೈಕಮಾಂಡ್ ತೀರ್ಮಾನಿಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಾಸ್ ಲೀಡರ್ ಎಂದು ಗುರುತಿಸಿಕೊಂಡಿರುವ, ಕ್ಲಾಸ್ ರಾಜಕೀಯದತ್ತ ಹೊರಳುತ್ತಿರುವ ಡಿ.ಕೆ.ಶಿವಕುಮಾರ್ ಅವರಿಗೆ ನೀಡುವ ಎಲ್ಲ ಸಾಧ್ಯತೆ ಇದೆ.

ದಿನೇಶ್ ಗುಂಡೂರಾವ್ಗೆ ಮಂತ್ರಿ ಸ್ಥಾನ?
ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿ, ಅವರ ಮಂತ್ರಿ ಸ್ಥಾನವನ್ನು ಈಗಿನ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ನೀಡಲಾಗುತ್ತದೆ ಎನ್ನಲಾಗುತ್ತಿದೆ. ಆದರೆ ಕಾರ್ಯಾಧ್ಯಕ್ಷ ಸ್ಥಾನ ಮಾತ್ರ ಈಶ್ವರ್ ಖಂಡ್ರೆ ಅವರ ಬಳಿಯೇ ಉಳಿಯಲಿದೆ.

ಸಾಮರ್ಥ್ಯ ಪ್ರದರ್ಶಿಸಿರುವ ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್ ಅವರು ಚುನಾವಣೆಗಳಲ್ಲಿ, ಉಪಚುನಾವಣೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಈಗಾಗಲೇ ಪ್ರದರ್ಶಿಸಿದ್ದಾರೆ. ಹಿಂದೆ ಸಹ ಹಲವು ಬಾರಿ ತಮ್ಮ ರಾಜಕೀಯ ಚತುರತೆಯನ್ನು ಪ್ರದರ್ಶಿಸಿದ್ದಾರೆ. ದೇವೇಗೌಡ ಅವರೇ ಸೋಲುಣ್ಣುವಂತೆ ಮಾಡಿದ್ದ ಭಾರಿ ರಾಜಕೀಯ ಚತುರ ಅವರು. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ನೊಂದಿಗೆ ಸಮನ್ವಯ ಸಾಧಿಸುವ ಅತ್ಯುತ್ತಮ ಚತುರತೆ ಇದೆ.

ಡಿ.ಕೆ.ಶಿ ಸಾಮರ್ಥ್ಯದ ಮೇಲೆ ಹೈಕಮಾಂಡ್ಗೆ ವಿಶ್ವಾಸ
ರಾಜಕೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಅಸಮಾಧಾನವನ್ನು ಶಮನ ಮಾಡುವ, ಅವಶ್ಯಕ ಸಂದರ್ಭದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಎಲ್ಲ ಮಾದರಿಯ ರಾಜಕೀಯವನ್ನು ಕಂಡಿರುವ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವ ಶಕ್ತಿ ಇದೆ ಎಂಬುದು ಹೈಕಮಾಂಡ್ ನಂಬಿಕೆ.

ಹಿರಿಯರು-ಕಿರಿಯರು ಡಿಕೆಶಿ ಮಾತು ಕೇಳುತ್ತಾರೆ
ಡಿ.ಕೆ.ಶಿವಕುಮಾರ್ ಅವರ ಮಾತನ್ನು ಪಕ್ಷದ ಹಿರಿಯರು ಮತ್ತು ಕಿರಿಯರು ಸಮಾನವಾಗಿ ಕೇಳುತ್ತಾರೆ. ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಟಫ್ ರಾಜಕಾರಣಿ, ಮಾಸ್ ರಾಜಕಾರಣಿ ಎಂಬ ಖ್ಯಾತಿಯೂ ಇದ್ದು ಇದು ಪಕ್ಷವನ್ನು ಅಸಮಾಧಾನಗಳಿಲ್ಲದೆ ಏಕಪಕ್ಷೀಯವಾಗಿ ಕಟ್ಟಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸ ಹೈಕಮಾಂಡ್ನದ್ದು.

ಜಾರಕಿಹೊಳಿ ಸಹೋದರರು ಅಸಮಾಧಾನ ಹೊರಹಾಕಿದ್ದರು
ಆದರೆ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಅಸಮಾಧಾನವಿದೆ. ಜಾರಕಿಹೊಳಿ ಸಹೋದರರು ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ರಮೇಶ್ ಜಾರಕಿಹೊಳಿ ಕಾಂಗ್ರೆಸ್ನಿಂದ ದೂರವಾಗಲು ಈ ಅಸಮಾಧಾನವೇ ಕಾರಣ.

ಎಂ.ಬಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದರು
ಇನ್ನು ಗೃಹ ಸಚಿವರ ಎಂ.ಬಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಪಕ್ಷದ ವರಿಷ್ಠರೊಂದಿಗೆ ಖಾರವಾಗಿ ಅಸಮಾಧಾನ ಹೊರ ಹಾಕಿದ್ದ ಆಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಅವರಷ್ಟೆ ಅಲ್ಲದೆ ಇನ್ನೂ ಕೆಲವು ನಾಯಕರು ಡಿ.ಕೆ.ಶಿವಕುಮಾರ್ ಅವರ ಮೇಲೆ ಅಸಮಾಧಾನ ಇದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications