ಸಚಿವ ಸ್ಥಾನದ ಆಕಾಂಕ್ಷಿಗಳು: ಇರೋ 1ವರ್ಷದಲ್ಲಿ ಅದೇನು ಕುರ್ಚಿ ಬಿಸಿ ಮಾಡುತ್ತೀರೋ?
ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸಚಿವ ಸ್ಥಾನದ ಆಕಾಂಕ್ಷಿಗಳು ಒತ್ತಡ ಹೇರುತ್ತಲೇ ಬರುತ್ತಿದ್ದಾರೆ. ಆದರೆ, ಪ್ರಬಲ ಬಿಜೆಪಿ ಹೈಕಮಾಂಡ್ ಇದ್ಯಾವುದಕ್ಕೂ ಸೊಪ್ಪು ಹಾಕುತ್ತಿಲ್ಲ. ರಾಜ್ಯದ ನಾಯಕರ ಯಾವ ಶಿಫಾರಸಿಗೂ ಕ್ಯಾರೇ ಅನ್ನುತ್ತಿಲ್ಲ.
ಬಿಎಸ್ವೈ ಸರಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಸಿಎಂ ಮನೆ, ರಾಜ್ಯಾಧ್ಯಕ್ಷರ ಮನೆ, ದೆಹಲಿ ಸುತ್ತುತ್ತಿದ್ದವರಿಗೆ ನೋಡೋಣ ಎನ್ನುವ ಮಾತು ವರಿಷ್ಠರಿಂದ ಬರುತ್ತಿತ್ತೇ ವಿನಃ ಯಾವುದೇ ಖಚಿತ ಭರವಸೆ ಸಿಗುತ್ತಿಲ್ಲ. ಆದರೂ, ಆಕಾಂಕ್ಷಿಗಳ ಪ್ರಯತ್ನ ಮುಂದುವರಿಯುತ್ತಲೇ ಇದೆ.
ಈಗ, ಬಸವರಾಜ ಬೊಮ್ಮಾಯಿಯವರ ಸರದಿ. ಆಕಾಂಕ್ಷಿಗಳ ದೊಡ್ಡ ಲಿಸ್ಟೇ ಇದ್ದರೂ, ಕೊನೆಗೆ ಹೈಕಮಾಂಡ್ ಬಯಸಿದ್ದೇ ಆಗುವುದು ಎನ್ನುವುದು ಬೊಮ್ಮಾಯಿಯವರಿಗೆ ಗೊತ್ತಿರದ ವಿಚಾರವೇನೂ ಅಲ್ಲ. ಅವರು ದೆಹಲಿ ಪ್ರವಾಸಕ್ಕೆ ಹೊರಟಾಗಲೆಲ್ಲಾ ಸಂಪುಟ ವಿಸ್ತರಣೆಯ ವಿಚಾರ ಮುನ್ನಲೆಗೆ ಬರುತ್ತದೆ.
ಕೆಲವು ದಿನಗಳ ಹಿಂದೆ ಮತ್ತೆ ಬೊಮ್ಮಾಯಿಯವರು ದೆಹಲಿಗೆ ಹೋಗಿದ್ದರು. ಅಮಿತ್ ಶಾ ಅವರು ಒಂದು ಹತ್ತು ನಿಮಿಷ ಅವರ ಬಳಿ ಮಾತನಾಡಿದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ಮೋದಿ ಅವರ ಭೇಟಿಗೆ ಸಮಯಾವಕಾಶ ಸಿಗಲಿಲ್ಲ. ಇಷ್ಟಾದರೂ ಸಂಪುಟ ಸೇರಿಕೊಳ್ಳಲು ಬಯಸುತ್ತಿರುವವರ ಮಹತ್ವಾಕಾಂಕ್ಷೆ ಕಮ್ಮಿಯಾಗುತ್ತಿಲ್ಲ. ದೆಹಲಿಯಲ್ಲಿ, ಸಂಪುಟ ವಿಸ್ತರಣೆ ಆದರೂ ಆಗಬಹುದು ಎನ್ನುವ ಪ್ರತಿಕ್ರಿಯೆ ಸಿಎಂ ಅವರಿಂದ ಬಂತು.

ಸಚಿವ ಸಂಪುಟ/ವಿಸ್ತರಣೆಯ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆಯಿಲ್ಲ
ಸಚಿವ ಸಂಪುಟ/ವಿಸ್ತರಣೆಯ ವಿಚಾರದಲ್ಲಿ ಖುದ್ದು ಮುಖ್ಯಮಂತ್ರಿಗಳಿಗೇ ಸ್ಪಷ್ಟತೆಯಿಲ್ಲ. ಯಡಿಯೂರಪ್ಪನವರೇನೋ, ಮೂರು ದಿನದೊಳಗೆ ವಿಸ್ತರಣೆಯಾಗುವುದು ಖಚಿತ ಎಂದು ಹೇಳಿದ್ದರು. ಆದರೆ, ಹೈಕಮಾಂಡ್ ನಿಂದ ಯಾವುದೇ ಗ್ರೀನ್ ಸಿಗ್ನಲ್ ಸಿಗುತ್ತಿಲ್ಲ. ಇನ್ನು ಒಂದು ವರ್ಷದೊಳಗೆ ಚುನಾವಣೆ ನಡೆಯಲೇ ಬೇಕಿದೆ. ಅವಧಿಗೆ ಮುನ್ನ ಚುನಾವಣೆ ನಡೆದರೂ ನಡೆಯಬಹುದು ಎನ್ನುವ ಮಾತು ಕೇಳಿ ಬರುತ್ತಿದೆ.

ನೂತನವಾಗಿ ಸೇರ್ಪಡೆಗೊಳ್ಳುವ ಸಚಿವರು ಏನು ಸಾಧಿಸಲು ಸಾಧ್ಯ
ಒಂದು ವೇಳೆ ಸಂಪುಟ ವಿಸ್ತರಣೆ ಈಗ ಮಾಡಿದರೂ, ಇದರಿಂದ ನೂತನವಾಗಿ ಸೇರ್ಪಡೆಗೊಳ್ಳುವ ಸಚಿವರು ಏನು ಸಾಧಿಸಲು ಸಾಧ್ಯ ಎನ್ನುವ ಮಾತು ಬಿಜೆಪಿ ಆಪ್ತ ವಲಯದಲ್ಲೇ ಕೇಳಿ ಬರುತ್ತಿದೆ. ಅಧಿಕಾರ ಸ್ವೀಕರಿಸಿದ ನಂತರ ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳು, ಮಾಡಬೇಕಾಗಿರುವ ಕೆಲಸಗಳನ್ನು ಅರ್ಥ ಮಾಡಿಕೊಳ್ಳಲೇ ನೂತನ ಸಚಿವರಿಗೆ ಕನಿಷ್ಠ ನಾಲ್ಕೈದು ತಿಂಗಳಾದರೂ ಬೇಕಾಗುತ್ತದೆ. ಇದಾದ ನಂತರ ಇಲಾಖೆಯ ಕೆಲಸಗಳಿಗೆ ಅನುಮೋದನೆಗೆ ಇನ್ನಷ್ಟು ಸುತ್ತಾಡಬೇಕಾಗುತ್ತದೆ. ಅಷ್ಟರಲ್ಲಿ ಚುನಾವಣೆ ದಿನಾಂಕ ಏನಾದರೂ ಘೋಷಣೆಯಾದರೆ, ನೀತಿ ಸಂಹಿತೆ ಜಾರಿಯಾಗುತ್ತದೆ.

ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ
ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳುವ ಪ್ರಕಾರ, "ಈಗ ಸಚಿವ ಸ್ಥಾನ ಸಿಕ್ಕರೆ ಏನು ಮಾಡೋದು. ಕುರ್ಚಿ ಬಿಸಿ ಮಾಡಬಹುದು ಅಷ್ಟೇ, ಕುರ್ಚಿಯೂ ಬಿಸಿ ಆಗಲ್ಲ. ಈಗ ಸಚಿವ ಸ್ಥಾನ ಸಿಕ್ಕರೂ ಸಿಗೋದು ಕೇವಲ ಎಂಟು ತಿಂಗಳು ಅಷ್ಟೇ. ಈ ಎಂಟು ತಿಂಗಳಲ್ಲಿ ಯಾವ ಕ್ರಾಂತಿಕಾರಿ ಅಭಿವೃದ್ಧಿಯನ್ನೂ ಮಾಡಲಾಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಸ್ಟ್. ಇದರಿಂದ ಆಸೆ ಇರುವವರಿಗಷ್ಟೇ ಅನುಕೂಲವಾಗುತ್ತೆ"ಎಂದು ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಸಂಪುಟ ವಿಸ್ತರಣೆ ವಿಳಂಬಕ್ಕೆ ಕಾರಣವಾಗಿರಬಹುದು
ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಸಚಿವ ಸ್ಥಾನ ಸಿಕ್ಕಿದರೂ ಕುರ್ಚಿ ಬಿಸಿ ಮಾಡಲೂ ಸಾಧ್ಯವಿಲ್ಲ. ಜೊತೆಗೆ, ಚುನಾವಣಾ ವರ್ಷವಾಗಿರುವುದರಿಂದ, ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಗೊಂದಲಗಳು ಎದುರಾಗುತ್ತವೆ. ಜೊತೆಗೆ, ಆಕಾಂಕ್ಷಿಗಳಿಗೆ ಸ್ಥಾನ ಸಿಗದೇ ಇದ್ದರೆ, ಪಕ್ಷ ವಿರೋಧಿ ಚಟುವಟಿಕೆ ನಡೆದರೂ ನಡೆಯಬಹುದು. ಈ ಒಂದು ಅಂಶವೂ, ಸಂಪುಟ ವಿಸ್ತರಣೆ ವಿಳಂಬಕ್ಕೆ ಕಾರಣವಾಗಿರಬಹುದು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications