ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾಮೀನು ರದ್ಧತಿ ಅರ್ಜಿ ವಿಚಾರಣೆ ಮುಂದೂಡಿಕೆ, ಸಂತೋಷ್‌ಗೆ ರಿಲೀಫ್

|
Google Oneindia Kannada News

ಬೆಂಗಳೂರು, ಆಗಸ್ಟ್. 24 : ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ಧತಿ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಆ.30ಕ್ಕೆ ಮುಂದೂಡಿದೆ.

ಕೆ.ಎಸ್.ಈಶ್ವರಪ್ಪ ಆಪ್ತ ಕಾರ್ಯದರ್ಶಿ ವಿನಯ್ ಅಪಹರಣ ಪ್ರಕರಣದಲ್ಲಿ ಎನ್.ಆರ್.ಸಂತೋಷ್ ಆರೋಪಿ. ಈ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. ಆದರೆ, ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಜಾಮೀನು ರದ್ದುಗೊಳಿಸುವಂತೆ 62ನೇ ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಕೆಎಸ್ ಈಶ್ವರಪ್ಪ ಅವರ ಪಿಎ ವಿನಯ್ ರನ್ನು ಅಪಹರಿಸಲು ಯತ್ನಕೆಎಸ್ ಈಶ್ವರಪ್ಪ ಅವರ ಪಿಎ ವಿನಯ್ ರನ್ನು ಅಪಹರಿಸಲು ಯತ್ನ

Minor relief for NR Santosh, Court adjourns hearing till August 30, 2017

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆ.30ಕ್ಕೆ ವಿಚಾರಣೆಯನ್ನು ಮುಂದೂಡಿತು. ಇದರಿಂದಾಗಿ ಎನ್‌.ಆರ್.ಸಂತೋಷ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಒಟ್ಟು ಒಂಭತ್ತು ಆರೋಪಿಗಳಿದ್ದಾರೆ.

ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಮತ್ತೊಬ್ಬ ಆರೋಪಿ ಬಂಧನಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಮತ್ತೊಬ್ಬ ಆರೋಪಿ ಬಂಧನ

ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸಂತೋಷ್ ವಿಚಾರಣೆ ನಡೆಸಿದ್ದಾರೆ. ಆದರೆ, ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಜಾಮೀನು ರದ್ಧತಿಗೆ ಮನವಿ ಮಾಡಿದ್ದರು.

ನಿರೀಕ್ಷಣಾ ಜಾಮೀನು ನೀಡುವಾಗ ತನಿಖೆಗೆ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಲಾಗಿತ್ತು. ಆದರೆ, ಅದನ್ನು ಅವರು ಪಾಲಿಸುತ್ತಿಲ್ಲ ಎಂದು ಪೊಲೀಸರು ಹೇಳಿದ್ದು, ಜಾಮೀನು ರದ್ಧತಿ ಕೋರಿದ್ದಾರೆ.

English summary
Minor relief for N.R.Santosh in K.S.Eshwarappa personal assistant Vinay kidnap attempt case. Bengaluru court adjourned hearing till August 30, 2016. Mahalakshmi layout police appealed court for cancellation of N.R.Santosh bail. N.R.Santosh main accused in the case and he is personal assistant of B.S.Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X