ಮತ್ತೆ ಚರ್ಚ್ ಮೇಲೆ ದಾಳಿ:ಸಿದ್ದು ಸರಕಾರ ಏನನ್ನುತ್ತೆ ಈಗ?
ಬಂಟ್ವಾಳ, ಅ 15: ದಕ್ಷಿಣ ಭಾರತದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗ ಚರ್ಚ್ ಮೇಲೆ ದಾಳಿಗಳು ನಡೆಯುತ್ತಿದ್ದವು. ವಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ, ಬಿಜೆಪಿ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಸರಕಾರದ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.
ಬಂಟ್ವಾಳದಲ್ಲಿರುವ ಲೇಡಿ ಆಫ್ ಲೊರೆಟ್ಟೊ ಚರ್ಚ್ ಮೇಲೆ ಭಾನುವಾರ (ಅ 13) ನಸುಕಿನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಚರ್ಚಿನ ಲೇಡಿ ಲೊರೆಟ್ಟೊ ವಿಗ್ರಹದ ಗಾಜನ್ನು ದುಷ್ಕರ್ಮಿಗಳು ಪುಡಿಗೈದಿದ್ದಾರೆ.
ನಾನು ಎಂದಿನಂತೆ ಶನಿವಾರ (ಅ 12) ರಾತ್ರಿ ಹತ್ತು ಗಂಟೆ ಸುಮಾರಿಗೆ ಚರ್ಚಿನ ಮುಖ್ಯ ದ್ವಾರವನ್ನು ಮುಚ್ಚಿ ಮನೆಗೆ ತೆರಳಿದ್ದೆ. ನಮ್ಮ ಮನೆ ಚರ್ಚಿನಿಂದ 500 ಮೀಟರ್ ದೂರದಲ್ಲಿದೆ.

ಭಾನುವಾರ ಬೆಳಗ್ಗೆ ಐದು ಗಂಟೆಗೆ ಬಂದು ಚರ್ಚ್ ಬಾಗಿಲು ತೆರೆದೆ. ಭಾನುವಾರದಂದು ಸಾಮೂಹಿಕ ಪ್ರಾರ್ಥನೆ ಬೆಳಗ್ಗೆ ಎಂಟು ಗಂಟೆಗೆ ಆರಂಭವಾಗುತ್ತದೆ. ಹಾಗಾಗಿ ಆ ಕೆಲಸದಲ್ಲಿ ನಾನು ನಿರತನಾಗಿದ್ದೆ. ಪ್ರಾರ್ಥನೆಗೆ ಬಂದವರು ದಾಳಿ ನಡೆದಿರುವ ಬಗ್ಗೆ ನನಗೆ ಮಾಹಿತಿ ನೀಡಿದರು ಎಂದು ಚರ್ಚಿನ ಪಾದ್ರಿ ಫಾದರ್ ಓಸ್ವಾಲ್ಡ್ ಲೊಸಾರ್ಡೊ ಹೇಳಿದ್ದಾರೆ.
ದಾಳಿಯಿಂದ ನಾವು ಮಾನಸಿಕ ಆಘಾತಕ್ಕೆ ಒಳಗಾಗಿದ್ದೇವೆ. ಬಂಟ್ವಾಳ ಪೊಲೀಸ್ ಠಾಣೆಗೆ ಸೋಮವಾರ ದೂರು ನೀಡಿದ್ದೇವೆ. ನಾವು ಈ ಘಟನೆಯ ಬಗ್ಗೆ ಯಾರನ್ನೂ ದೂಷಿಸುವುದಿಲ್ಲ. ನಮಗೆ ನ್ಯಾಯ ದೊರಕಿಸ ಕೊಡಬೇಕೆಂದು ಫಾದರ್ ಲೊಸಾರ್ಡೊ ಆಗ್ರಹಿಸಿದ್ದಾರೆ.
ಎಪ್ಪತ್ತು ವರ್ಷಗಳಷ್ಟು ಹಳೆಯದಾದ ಈ ಚರ್ಚ್ ಬಂಟ್ವಾಳ - ಮೂಡಬಿದರೆ ರಾಜ್ಯ ಹೆದ್ದಾರಿಯಲ್ಲಿದೆ. ಸ್ಥಳೀಯ ಶಾಸಕ ಮತ್ತು ಸಚಿವರೂ ಆಗಿರುವ ರಮಾನಾಥ್ ರೈ ಮತ್ತು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಜೆ ಆರ್ ಲೋಬೋ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications