ಡಿವೈಎಸ್ಪಿ ಎಂ.ಕೆ.ಗಣಪತಿ ಡೆತ್ ನೋಟ್ ಎಲ್ಲಿ?
ಬೆಂಗಳೂರು, ಜುಲೈ, 08: ಮಂಗಳೂರು ಐಜಿ ಕಚೇರಿಯಲ್ಲಿ ಡಿವೈ ಎಸ್ ಪಿಯಾಗಿದ್ದ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಿಐಡಿ ಅಂಗಳಕ್ಕೆ ತಲುಪಿದೆ. ಇದರೊಂದಿಗೆ ಹಲವಾರು ಪ್ರಶ್ನೆಗಳು ತಲೆ ಎತ್ತಿವೆ. ಆತ್ಮಹತ್ಯೆಗೂ ಮುನ್ನ ಎಂಕೆ ಗಣಪತಿ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿತ್ತು.
ಆದರೆ ಆತ್ಮಹತ್ಯೆ ಮಾಡಿಕೊಂಡು ಒಂದು ದಿನ ಕಳೆಯುತ್ತಾ ಬಂದಿದ್ದರೂ ಡೆತ್ ನೋಟ್ ಬಗ್ಗೆ ಪೊಲೀಸರು ಚಕಾರ ಎತ್ತಿಲ್ಲ. ಹಾಗಾದರೆ ಗಣಪತಿ ಡೆತ್ ನೋಟ್ ಬರೆದಿಟ್ಟಿಲ್ಲವೇ? ಅಥವಾ ಡೆತ್ ನೋಟ್ ಬಹಿರಂಗವಾದರೆ ಇನ್ನಷ್ಟು ಜನರ ಬಣ್ಣ ಬೀದಿಗೆ ಬರುತ್ತದೆ ಎಂಬ ಆತಂಕ ಪೊಲೀಸ್ ಇಲಾಖೆ ಮತ್ತು ಸರ್ಕಾರವನ್ನು ಕಾಡುತ್ತಿದ್ದೆಯೇ ಎಂಬ ಪ್ರಶ್ನೆ ಜನರಲ್ಲಿ ಮನೆಮಾಡಿದೆ.[ಸಚಿವ ಜಾರ್ಜ್ ಬಂಧನಕ್ಕೆ ಆಗ್ರಹಿಸಿ ಬೀದಿಗಿಳಿದ ಬಿಜೆಪಿ]

ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುವಾರ ಮಧ್ಯಾಹ್ನ ಲಾಡ್ಜ್ ಗೆ ಆಗಮಿಸಿದ ಗಣಪತಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು.[ಸಮವಸ್ತ್ರದಲ್ಲೇ ನೇಣಿಗೆ ಶರಣಾದ ಡಿವೈಎಸ್ಪಿ ಗಣಪತಿ]
ಖಾಸಗಿ ವಾಹಿನಿಗಳಿಗೆ ನೀಡಿದ ಕೊನೆ ಸಂದರ್ಶನದಲ್ಲಿ ಸಚಿವ ಕೆ ಜೆ ಜಾರ್ಜ್ ಮತ್ತು ಗುಪ್ತಚರ ದಳದ ಎಡಿಜಿಪಿ ಎ ಎಂ ಪ್ರಸಾದ್ ಅವರ ಹೆಸರನ್ನು ಹೇಳಿದ್ದಾರೆ. ಹಿರಿಯ ಅಧಿಕಾರಿಗಳಿಂಕದ ಕಿರುಕುಳ ಆಗುತ್ತಿದೆ ಎಂದು ಸಹ ಹೇಳಿದ್ದರು. ಇದೀಗ ಆತ್ಮಹತ್ಯೆ ತನಿಖೆ ಸಿಐಡಿ ಅಂಗಳದಲ್ಲಿದ್ದೂ ಡೆತ್ ನೋಟ್ ನ್ನು ಮಾಧ್ಯಮಗಳಿಗೆ ನೀಡದಿರುವುದು ಯಾಕೆ ಎಂಬುದಕ್ಕೆ ಸರ್ಕಾರವೇ ಉತ್ತರ ಹೇಳಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications