ಎಂ.ಕೆ.ಗಣಪತಿ ಆತ್ಮಹತ್ಯೆ : ಡಿಸೆಂಬರ್ನಲ್ಲಿ ವರದಿ
Recommended Video

ಬೆಂಗಳೂರು, ನವೆಂಬರ್ 24 : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಿವೃತ್ತ ನ್ಯಾ.ಕೆ.ಎನ್.ಕೇಶವನಾರಾಯಣ ಆಯೋಗ ಪೂರ್ಣಗೊಳಿಸಿದೆ. ಮತ್ತೊಂದು ಕಡೆ ಸುಪ್ರೀಂಕೋರ್ಟ್ ಆದೇಶದಂತೆ ಸಿಬಿಐ ಸಹ ತನಿಖೆಯನ್ನು ನಡೆಸುತ್ತಿದೆ.
ಕರ್ನಾಟಕ ಸರ್ಕಾರ 2016ರ ಜುಲೈನಲ್ಲಿ ತಿಂಗಳಿನಲ್ಲಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಆಯೋಗವನ್ನು ರಚನೆ ಮಾಡಿತ್ತು. ಡಿಸೆಂಬರ್ ಅಂತ್ಯದಲ್ಲಿ ಆಯೋಗ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಲಿದೆ.

ಆಯೋಗ ಎಂ.ಕೆ.ಗಣಪತಿ ಕುಟುಂಬ ಸದಸ್ಯರು, ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ಎಫ್ಎಸ್ಎಲ್ ವಿಜ್ಞಾನಿಗಳು ಸೇರಿ 49 ಜನರ ಹೇಳಿಕೆಯನ್ನು ಆಯೋಗ ಸಂಗ್ರಹ ಮಾಡಿದೆ.
ಗಣಪತಿ ಅವರ ಬಳಸುತ್ತಿದ್ದ ಫೋನ್, ಅವರು ಕೊನೆಯದಾಗಿ ನೀಡಿದ ಹೇಳಿಕೆ, ಮಡಿಕೇರಿ ವಿನಾಯಕ ಲಾಡ್ಜ್ ನ ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ವಿವಿಧ ಸಾಕ್ಷಿಗಳನ್ನು ಆಯೋಗ ಸಂಗ್ರಹಿಸಿ ಪ್ರತ್ಯೇಕವಾದ ತನಿಖೆ ನಡೆಸಿದೆ.
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್ ಆರೋಪಿಗಳಾಗಿದ್ದಾರೆ. ಕರ್ನಾಟಕದ ಸರ್ಕಾರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಸಚಿವರಿಗೆ ಕ್ಲೀನ್ ಚಿಟ್ ನೀಡಿತ್ತು.
ಎಂ.ಕೆ.ಗಣಪತಿ ಆತ್ಮಹತ್ಯೆ ಅವರ ತಂದೆ ಕುಶಾಲಪ್ಪ ಅವರು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತನಿಖೆಗೆ ಆದೇಶ ನೀಡಿದೆ.
ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಎಂ.ಕೆ.ಗಣಪತಿ ಅವರು ಜುಲೈ 7ರಂದು ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿದ್ದರು. ನಂತರ ಮಡಿಕೇರಿ ವಿನಾಯಕ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications