B.Sriramulu: ಬಿಜೆಪಿ ನಾಯಕ ಶ್ರೀರಾಮುಲುಗೆ ಬಂತು ದೊಡ್ಡ ಆಫರ್, ಯಾರಿಂದ?
ಬಿಜೆಪಿಯಲ್ಲಿ ಅಸಮಾಧಾನಗೊಂಡು ಪಕ್ಷ ತೊರೆಯುವ ಹೇಳಿಕೆ ನೀಡಿರುವ ಪ್ರಭಾವಿ ನಾಯಕ ಹಾಗೂ ಸಂಸದ ಬಿ.ಶ್ರೀರಾಮುಲು ಅವರಿಗೆ ದೊಡ್ಡ ಆಫರ್ವೊಂದು ಬಂದಿದೆ ಎಂದು ಹೇಳಲಾಗುತ್ತಿದೆ. ಪಕ್ಷದ ಸಭೆಯಲ್ಲೇ ಶ್ರೀರಾಮುಲು ಅವರು ನಾನು ಪಕ್ಷ ತೊರೆಯುತ್ತೇನೆ ಎಂಬ ಹೇಳಿಕೆ ನೀಡಿದ್ದರು. ಇದರು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್ ಕೂಡ ಶ್ರೀರಾಮುಲು ಅವರಿಗೆ ಗಾಳ ಹಾಕಿದೆ ಎನ್ನುವ ಮಾತಿದೆ. ಮತ್ತೊಂದೆಡೆ ಬಿಜೆಪಿಯಲ್ಲೇ ಶ್ರೀರಾಮುಲು ಅವರಿಗೆ ದೊಡ್ಡ ಆಫರ್ವೊಂದು ಕೊಡಲಾಗಿದೆ ಎಂಬ ಗುಸುಗುಸು ಇದೆ.
ನಿಷ್ಠಾವಂತರಿಗೆ, ಕಷ್ಟ ಪಟ್ಟು ಕೆಲಸ ಮಾಡುವವರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ ಎಂದು ಶ್ರೀರಾಮುಲು ಅವರು ಸಭೆಯಲ್ಲೇ ಸಿಡಿದಿದ್ದರು. ಇನ್ನು ಬಣ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬಸನಗೌಡ ಪಾಟೀಲ ಯತ್ನಾಳ್ ಕೂಡ ತಮ್ಮದು ನಿಷ್ಠಾವಂತ ಬಣ ಎಂದೇ ಕರೆದುಕೊಂಡಿದ್ದಾರೆ. ಸದ್ಯ ಯತ್ನಾಳ್ ಹಾಗೂ ಶ್ರೀರಾಮುಲು ಅವರ ಅಸಮಾಧಾನಗಳು ಒಂದೇ ಆಗಿರುವುದರಿಂದ ರಾಮುಲು ಅವರನ್ನು ತಮ್ಮ ಬಣಕ್ಕೆ ಸೆಳೆಯಲು ಯತ್ನಾಳ್ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಯತ್ನಾಳ್ ಅವರು ಶ್ರೀರಾಮುಲು ಅವರನ್ನು ಇದೇ ವಿಚಾರವಾಗಿ ಸಂಪರ್ಕಿಸಿದ್ದಾರೆ ಎಂದೂ ಮೂಲಗಳಿಂದ ತಿಳಿದುಬಂದಿದೆ. ಇನ್ನು ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಕಾವು ಕೂಡ ಹೆಚ್ಚಾಗಿದೆ. ಈ ಹಿನ್ನೆಲೆ ಯತ್ನಾಳ್ ಅವರು ತಮ್ಮ ಬಣದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಲು ಮುಂದಾಗಿದೆ. ಮತ್ತೊಂದೆಡೆ ನಾನೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ, ಗೆಲುವು ಖಚಿತ ಎನ್ನುವ ವಿಶ್ವಾಸದಲ್ಲಿದ್ದಾರೆ ಯತ್ನಾಳ್.
ಆದರೆ, ಇದೀಗ ಬಿ.ಶ್ರೀರಾಮುಲು ಅವರನ್ನು ಬಂಡಾಯ ಬಣಕ್ಕೆ ಸೇರಿಸಿಕೊಳ್ಳಲು ಯತ್ನಾಳ್ ಅವರು ಕಸರತ್ತು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಹ ಸಂದರ್ಭ ಒದಗಿ ಬಂದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ತಮ್ಮ ಬಣದಿಂದಲೇ ನೀಡಲಾಗುವುದು ಎಂದು ಬಿ.ಶ್ರೀರಾಮುಲು ಅವರಿಗೆ ಆಫರ್ ಕೊಡಲಾಗಿದೆ ಎಂದೂ ಹೇಳಲಾಗುತ್ತಿದೆ. ರಾಮುಲು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಅವಕಾಶ ನೀಡ್ತೇವೆ ಎಂದು ಯತ್ನಾಳ್ ಅವರು ತಿಳಿಸಿದ್ದಾರಂತೆ. ಆದರೆ, ರಾಮುಲು ಅವರು ಈ ಆಫರ್ ತಿರಸ್ಕರಿಸಿದ್ದಾರೆ ಎಂದೂ ತಿಳಿದುಬಂದಿದೆ.
ನನಗೆ ರಾಜ್ಯಾಧ್ಯಕ್ಷ ಸ್ಥಾನವೇನೂ ಬೇಡ. ನಿಮ್ಮೊಂದಿಗೆ ನಾನು ಮೊದಲಿನಿಂದಲೂ ಉತ್ತಮ ಒಡನಾಟ ಹೊಂದಿದ್ದೇನೆ. ನಮ್ಮ ನಡುವೆ ರಾಜಕೀಯದ ಹೊರತಾಗಿಯೂ ಉತ್ತಮ ಗೆಳೆತನವೂ ಇದೆ. ಹೀಗಾಗಿ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಶ್ರೀರಾಮುಲು ಅವರು ಯತ್ನಾಳ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಶ್ರೀರಾಮುಲು ಅವರು ಅಸಮಾಧಾನ ಹೊರಹಾಕಿ ಪಕ್ಷ ಬಿಡುತ್ತೇನೆ ಎಂದು ಹೇಳಿದ ಕೂಡಲೇ ಕಾಂಗ್ರೆಸ್ ಕೂಡ ಅಲರ್ಟ್ ಆಗಿತ್ತು. ಅಲ್ಲದೆ ರಾಮುಲು ಅವರನ್ನು ಹೇಗಾದರೂ ಮಾಡಿ ಕಾಂಗ್ರೆಸ್ಗೆ ಕರೆತರಬೇಕು ಎನ್ನುವ ಲೆಕ್ಕಾಚಾರದಲ್ಲೇ ಇದೆ ಎಂದು ಚರ್ಚೆಗಳು ನಡೆಯುತ್ತಿವೆ. ಇದೀಗ ಸ್ವಪಕ್ಷದಿಂದಲೇ ರಾಮುಲು ಅವರಿಗೆ ದೊಡ್ಡ ಆಫರ್ ಬಂದಿದ್ದು, ಯತ್ನಾಳ್ ಅವರ ಬಣ ಸೇರಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications