NEP: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಬಸನಗೌಡ ಯತ್ನಾಳ್
ಬೆಂಗಳೂರು, ನವೆಂಬರ್ 20: ಕರ್ನಾಟಕದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷವು ಬಿಜೆಪಿ ಅಧಿಕಾರಾವಧಿಯಲ್ಲಿ ಜಾರಿ ಆಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (National Education Policy) ರದ್ದುಗೊಳಿಸುವುದಾಗಿ ಘೋಷಿಸಿತ್ತು. ಇದಕ್ಕೆ ಬಿಜೆಪಿಯು ವ್ಯಾಪಕವಾಗಿ ಖಂಡಿಸಿತ್ತು. ಇದೀಗ ಇದಕ್ಕೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸಹ ಧ್ವನಿಗೂಡಿಸಿದ್ದಾರೆ. ರಾಜ್ಯಕ್ಕೆ ಎನ್ಇಪಿ ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸೋಮವಾರ ಸಂಜೆ ಸಾಮಾಜಿಕ ಜತಾಲಾಣ X ನಲ್ಲಿ ಟ್ವೀಟ್ ಮಾಡಿರುವ ಅವರು, NEP ಬಾಲ್ಯದ ಆರೈಕೆ ಮತ್ತು ಶಿಕ್ಷಣದ ಪ್ರಾಮುಖ್ಯತೆಯನ್ನು ಗುರುತಿಸುತ್ತದೆ. ಇದು ಅಧಿಕಾರಾವಧಿ, ಬಡ್ತಿ ಮತ್ತು ಸಂಬಳ ರಚನೆಯ ದೃಢವಾದ ಅರ್ಹತೆ ಆಧಾರಿತ ರಚನೆಯನ್ನು ಹೈಲೈಟ್ ಮಾಡುವ ಗುರಿಯನ್ನು ಹೊಂದಿದೆ ಎಂದು ನೂತನ ಶಿಕ್ಷಣ ನೀತಿಯ ಮಹತ್ವ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲೆಗಳಲ್ಲಿ ಬೋಧನಾ ಮಾಧ್ಯಮವಾಗಿ ಸ್ಥಳೀಯ ಭಾಷೆಗಳ ಬಳಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ನೀತಿ ಅಡಿಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಆರಾಮದಾಯಕ ಮತ್ತು ಉತ್ತಮವಾಗಿ ಪಠ್ಯವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.
ಈ NEP ಜಾರಿಯಾದ ಬಳಿಕ ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ವೃತ್ತಿಪರ ಮತ್ತು ಕೌಶಲ್ಯ ಆಧಾರಿತ ತರಬೇತಿಯ ಏಕೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ. ಹೀಗೆ ನಮ್ಮ ಪದವೀಧರರು ಹೆಚ್ಚು ಉದ್ಯೋಗಶೀಲರು ಮತ್ತು ಕೌಶಲ್ಯಪೂರ್ಣರಾಗುತ್ತಾರೆ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಪರಿವರ್ತಿಸಲು ಎನ್ಇಪಿ ಸಮಯದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.
NEP recognizes importance of early childhood care and education.
— Basanagouda R Patil (Yatnal) (@BasanagoudaBJP) November 20, 2023
It aims to highlight a robust merit based structure of tenure, promotion and salary structure
NEP aims to promote the use of local languages as a medium of instruction in schools and ensure students are more…
ಎನ್ಇಪಿ ನಿಷೇಧಿಸುವುದಾಗಿ ಸಿಎಂ ಹೇಳಿಕೆ
ಬಿಜೆಪಿ ವಿರೋಧ ಪಕ್ಷದ ನಾಯಕ ಆಕಾಂಕ್ಷಿಯಾಗಿದ್ದ ಶಾಸಕ ಯತ್ನಾಳ್ ಅವರಿಗೆ ನಿರಾಸೆಯಾಗಿದೆ. ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ವಾರ ಕಳೆದಿದೆ. ಹೊಸ ರಾಜ್ಯಾಧ್ಯಕ್ಷರಿಗೂ ಮೊದಲು ಯತ್ನಾಳ್ ಅವರು ಎನ್ಇಪಿ ನಿಷೇಧ ಕುರಿತು, ರಾಜ್ಯದ ಮಕ್ಕಳಿಗೆ ಎನ್ಇಪಿ ಅಗತ್ಯತೆ ಮೇಲೆ ಮಾತನಾಡಿದ್ದಾರೆ. ಈ ಮೂಲಕ ಸರ್ಕಾರ ಎನ್ಇಪಿ ನಿಷೇಧ ನಿರ್ಧಾರದ ವಿರುದ್ಧ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ರಾಷ್ಟ್ರೀಯ ಶಿಕ್ಷಣ ನಿತಿಯನ್ನು ತೆಗೆಯುವುದಾಗಿ ತಿಳಿಸಿತ್ತು. ಅದರಂತೆ ಈ ನೀತಿಯನ್ನು ಶೀಘ್ರವೇ ನಿಷೇಧಿಸಲಾಗುವುದು ಎಂದು ಖುದ್ದು ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಇದು ಬಿಜೆಪಿ ಸಿದ್ಧಾಂತದ ಅಂಶಗಳು ಇದರಲ್ಲಿವೆ ಅಂತಲೂ ಕೆಲವರು ಆರೋಪಿಸಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications