ದೇವೇಗೌಡ, ಎಚ್ಡಿಕೆಗೆ ಇಕ್ಬಾಲ್ ಅನ್ಸಾರಿ ಬಹಿರಂಗ ಸವಾಲು!
ಕೊಪ್ಪಳ, ಫೆಬ್ರವರಿ 5 : ಜಮೀರ್ ಅಹಮದ್ ಖಾನ್ ಬಳಿಕ ಗಂಗಾವತಿ ಕ್ಷೇತ್ರದ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. 'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದಾಗಿ' ಘೋಷಿಸಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳನ್ನು ಮಾಡಿರುವ ಇಕ್ಬಾಲ್ ಅನ್ಸಾರಿ ಅವರು, 'ದೇವೇಗೌಡರು ತಮ್ಮ ವಿರುದ್ಧ ಯಾವುದೇ ಕ್ರಮಗಳನ್ನು ಬೇಕಾದರೂ ಕೈಗೊಳ್ಳಬಹುದು' ಎಂದು ಬಹಿರಂಗ ಸವಾಲು ಹಾಕಿದ್ದಾರೆ. ['ಜೆಡಿಎಸ್ ದೇವೇಗೌಡ ಕುಟುಂಬದ ಸ್ವಂತ ಬಸ್ ಇದ್ದಂತೆ']
'ಎಚ್.ಡಿ.ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತ ನಾಯಕರನ್ನು ಮುಗಿಸಲು ಹುನ್ನಾರ ನಡೆಸಿದ್ದಾರೆ' ಎಂದು ಆರೋಪಿಸಿರುವ ಅನ್ಸಾರಿ ಅವರು, 'ಜೆಡಿಎಸ್ ಪಕ್ಷದೊಳಗಿನ ಭಿನ್ನಮತಕ್ಕೆ ಕುಮಾರಸ್ವಾಮಿ ಅವರೇ ನೇರವಾಗಿ ಹೊಣೆ' ಎಂದು ದೂರಿದ್ದಾರೆ. [ಜಮೀರ್ ಉಲ್ಟಾ ಹೊಡೆಯಲು ಕಾರಣ ಹೀಗೂ ಇರಬಹುದೇ?]
ಇಕ್ಬಾಲ್ ಅನ್ಸಾರಿ ಅವರ ಆರೋಪಗಳಿಗೆ ತಿರುಗೇಟು ನೀಡಿರುವ ಎಚ್.ಡಿ.ಕುಮಾರಸ್ವಾಮಿ ಅವರು, '4 ಜನರಿಂದ ಪಕ್ಷ ಉಳಿದಿಲ್ಲ. ಲಕ್ಷಾಂತರ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ. ಅಸಮಾಧಾನಗೊಂಡವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರವಾಗಿ ಗೆದ್ದು ತೋರಿಸಲಿ' ಎಂದು ಸವಾಲು ಹಾಕಿದ್ದಾರೆ. ಅನ್ಸಾರಿ ಅವರು ಹೇಳಿದ್ದೇನು? ಚಿತ್ರಗಳಲ್ಲಿ ನೋಡಿ...

ನಾಯಕರ ವಿರುದ್ಧ ಸಿಡಿದೆದ್ದ ಅನ್ಸಾರಿ
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬಳಿಕ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಗುರುವಾರ ಕೊಪ್ಪಳದಲ್ಲಿ ಮಾತನಾಡಿದ ಅನ್ಸಾರಿ ಅವರು, ಪಕ್ಷದ ನಾಯಕರು ತಮ್ಮ ವಿರುದ್ಧ ಯಾವುದೇ ಕ್ರಮಗಳನ್ನು ಬೇಕಾದರೂ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಬೆಂಬಲಿಗರು ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಾರೆ
'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ನನ್ನ ಬೆಂಬಲಿಗರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಾರೆ. ಪಕ್ಷದ ಬಿಫಾರಂ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನಾನು ಮಾತುಕತೆ ನಡೆಸಿದ್ದೇನೆ. ಬಿಫಾರಂ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ' ಎಂದು ಅನ್ಸಾರಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇನೆ
'ಲೋಕಸಭೆ, ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇನೆ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿಯೂ ನೀಡುತ್ತೇನೆ. ಎಚ್.ಡಿ.ದೇವೇಗೌಡರು ನನ್ನ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುತ್ತಿದ್ದಾರೆ. ಯಾವ ಕ್ರಮಗಳನ್ನು ಬೇಕಾದರೂ ಅವರು ಕೈಗೊಳ್ಳಲಿ' ಎಂದು ಅನ್ಸಾರಿ ಸವಾಲು ಹಾಕಿದರು.

'ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ'
'ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರೆ ಅವರು ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡುತ್ತಾರೆ. ನನಗೆ ಮತ ಹಾಕಿರುವ ಜನರು ಕುಡಿಯುವ ನೀರು, ರಸ್ತೆ ಮುಂತಾದ ಸೌಲಭ್ಯಗಳನ್ನು ಕೇಳುತ್ತಾರೆ. ಅವುಗಳನ್ನು ನೀಡಲು ಅನುದಾನ ಬೇಕಾಗಿದೆ. ವಿರೋಧ ಪಕ್ಷದಲ್ಲಿ ಕುಳಿತುಕೊಂಡು ಐದು ವರ್ಷ ನಾನೇನು ಮಾಡಲಿ?' ಎಂದು ಅನ್ಸಾರಿ ಅವರು ಪ್ರಶ್ನಿಸಿದ್ದಾರೆ.

'ಅಲ್ಪಸಂಖ್ಯಾತರನ್ನು ಮುಗಿಸಲು ಹುನ್ನಾರ'
'ಜೆಡಿಎಸ್ ಪಕ್ಷದಲ್ಲಿನ ಭಿನ್ನಮತಗಳಿಗೆ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಅಲ್ಪಸಂಖ್ಯಾತ ನಾಯಕರನ್ನು ಮುಗಿಸಲು ಅವರು ಸಂಚು ರೂಪಿಸಿದ್ದಾರೆ. ನನ್ನ ಮತ್ತು ಅವರ ನಡುವೆ ಭಾರೀ ಅಂತರ ಉಂಟಾಗಿದೆ' ಎಂದು ಅನ್ಸಾರಿ ಅವರು ಆರೋಪ ಮಾಡಿದ್ದಾರೆ.

ತಿರುಗೇಟು ನೀಡಿದ ಕುಮಾರಸ್ವಾಮಿ
ಇಕ್ಬಾಲ್ ಅನ್ಸಾರಿ ಅವರ ಆರೋಪಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. 'ಜೆಡಿಎಸ್ ಪಕ್ಷ ನಾಲ್ಕು ಜನರಿಂದ ಉಳಿದಿಲ್ಲ. ಲಕ್ಷಾಂತರ ಕಾರ್ಯಕರ್ತರಿಂದ ಉಳಿದಿದೆ. ನಮ್ಮ ಬಗ್ಗೆ ಆರೋಪ ಮಾಡುವವರು ಶಾಸಕ ಸ್ಥಾನಕ್ಕೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಟ್ಟು, ಸ್ವತಂತ್ರವಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿ' ಎಂದು ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಅನ್ಸಾರಿ ಅಸಮಾಧಾನ ಇದೇ ಮೊದಲಲ್ಲ
ಇಕ್ಬಾಲ್ ಅನ್ಸಾರಿ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವುದು ಇದೇ ಮೊದಲಲ್ಲ. ಹಿಂದೆಯೂ ಅವರು ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 'ಜೆಡಿಎಸ್ ಪಕ್ಷ ದೇವೇಗೌಡ ಮತ್ತು ಅವರ ಮಕ್ಕಳ ಸ್ವಂತ ಬಸ್ ಇದ್ದ ಹಾಗೆ. ತಾವೆಲ್ಲ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಂತೆ. ಜೆಡಿಎಸ್ ಶಾಸಕರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರೆ, ದೇವೇಗೌಡರು ಅವರನ್ನು ದೂರವಿಡುತ್ತಿದ್ದಾರೆ' ಎಂದು ದೂರಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications