ಪ್ರಹ್ಲಾದ್ ಜೋಶಿ ಜೊತೆಗಿನ ರಹಸ್ಯ ಸಭೆ ಕುರಿತು ಸತ್ಯ ಬಿಚ್ಚಿಟ್ಟ ಜನಾರ್ದನ ರೆಡ್ಡಿ
ಹುಬ್ಬಳ್ಳಿ, ಫೆಬ್ರವರಿ 21: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಿಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೈಕಮಾಂಡ್ ಮುಂದೆ ತಮ್ಮ ಬೇಡಿಕೆ ಇಟ್ಟಿದ್ದಾರೆ. ಇತ್ತ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರು ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರು ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮಾತನಾಡಿ, ಇದು ವೈಯಕ್ತಿಕ ಭೇಟಿ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಮಾರ್ಚ್ ತಿಂಗಳಲ್ಲಿ ನನ್ನ ಮೊಮ್ಮಗನ ನಾಮಕರಣ ಇದ್ದುಹೀಗಾಗಿ ಜೋಶಿ ಅವರಿಗೆ ಆಹ್ವಾನ ನೀಡಲು ಬಂದಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ , ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗಿಲ್ಲ. ಏನೇ ಬೆಳವಣಿಗೆ ಇದ್ದರೂ ಹೈಕಮಾಂಡ್ ನೋಡಿಕೊಳ್ಳುತ್ತದೆ. ನಾನು ಹೈಕಮಾಂಡ್ ನಿರ್ಧಾರಕ್ಕೆ ಬಂದ ಎಂದು ಹೇಳಿದರು.

ಇನ್ನೂ ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತಮಾಡಿ, ಮುಡಾ ಹಗರಣ ಹೋರಾಟದ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್ ,ಛಲವಾದಿ ನಾರಾಯಣಸ್ವಾಮಿ ಚರ್ಚೆ ಮಾಡುತ್ತಾರೆ. ಅಗತ್ಯ ಇದ್ದರೆ, ನಾವು ಸಭೆ ಮಾಡಿ ಮುಂದಿನ ಹೋರಾಟ ರೂಪುರೇಷೆ ರೂಪಿಸುತ್ತವೆ. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ ಆಗಿದ್ದು, ಅಮೆರಿಕ ಅಧ್ಯಕ್ಷ ಟ್ರಂಪ್ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಈ ಹಿಂದೆ ಚೈನಾ ಅಂಬಾಸಿಡರ್ ರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು.
ಕಾಂಗ್ರೆಸ್ ಪಾರ್ಟಿ ಭ್ರಷ್ಟಾಚಾರದ ಮೂಲಕ ಬೇರೆ ದೇಶದ ಜೊತೆಗೆ ಕೈ ಜೋಡಿಸಿ ದೇಶದ ಪ್ರಜಾಪ್ರಭುತ್ವ ಬುಡ ಅಲಾಡಿಸುತ್ತಿದ್ದು, ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ನೈತಿಕ ಇಲ್ಲ. ಬಿಜೆಪಿ ಸೋಲಿಸು ಈ ರೀತಿಯಲ್ಲಿ ಷಡ್ಯಂತರವನ್ನು ಕಾಂಗ್ರೆಸ್ ಮಾಡಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನಾ ಮಾಡಲು ಹಕ್ಕಿಲ್ವಾ ಎಂದ ಅವರು, ಪ್ರಜಾಪ್ರಭುತ್ವ ಬಗ್ಗೆ ಕಾಂಗ್ರೆಸ್ ನಾಯಕರು ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಮಾನಸಿಕತೆ. ನಾವು ಹೋರಾಟ ಮಾಡೇ ಮಾಡುತ್ತದೆ ಎಂದರು.
ಇನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯೇಂದ್ರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ಅದರ ಬಗ್ಗೆ ಮಾತನಾಡುತ್ತಾರೆ. ಜನಾರ್ದನ ರೆಡ್ಡಿ ಸಹ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನುವುದು ನನಗೆ ಗೊತ್ತಿಲ್ಲ ಅವರನ್ನೆ ಕೇಳಿ. ರಾಜ್ಯಾಧ್ಯಕ್ಷರು ಆಯ್ಕೆ ಆದ ಕೋರ್ ಕಮಿಟಿ ಆಗುತ್ತದೆ ಎಂದರು. ಭ್ರಷ್ಟರು, ನೀಚರು, ಇವರೇ ಕಾಂಗ್ರೆಸ್ ನಲ್ಲಿದ್ದು ನಿತಿನ್ ಗಡ್ಕರಿ ಪ್ರಧಾನಿ ಆಗಬೇಕೆಂದ ಲಾಡ್ ಹೇಳಿಕೆ ಬಾಲಿಶ, ಚೈಲ್ಡಿಸ್ ಹೇಳಿಕೆ ಎಂದು ತಿಳಿಸಿದರು.
ಹರಿಯಾಣದಲ್ಲಿ ನಾವೇ ಗೆಲ್ಲತ್ತಿವಿ ಅಂತ ಎಲ್ಲಾ ತಯಾರಿ ಮಾಡಿಕೊಂಡಿದ್ದರು. ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಸೂಟು ಬೂಟ್ ತೆಗೆದುಕೊಂಡಿದ್ದರು, ಆಮೇಲೆ ಏನಾಯಿತು ಕಾಂಗ್ರೆಸ್ ಡಮ್ ಅಂತು. ನಕಲಿ ಗಾಂಧಿ ಕುಟುಂಬ ಯಾವತ್ತೂ ಲೀಡರ್ ಸ್ಥಾನ ಬಿಟ್ಟು ಕೊಡಲ್ಲ, ಹಾಳಾದ ಊರಿಗೆ ಉಳಿದವನ್ನೇ ಗೌಡ ಎನ್ನುವುದು ಕಾಂಗ್ರೆಸ್ ನಾಯಕರ ಮನಸ್ಥಿತಿ ಆಗಿದೆ. ಮೋದಿ ವಿರುದ್ಧ ಮಾತನಾಡಿದ್ರೆ ಸಂತೋಷ ಲಾಡ್ ಮಂತ್ರಿ ಸ್ಥಾನ ಉಳಿಯುತ್ತೆ ಎಂದ್ರೆ ಉಳಿಸಿಕೊಳ್ಳಲಿ. ಇನ್ನು ಲಾಡ್ ರಾಹುಲ್ ಗಾಂಧಿ ತರ ಮಾತನಾಡೋದು ನಿಲ್ಲಿಸಿ, ನೀವು ಚುನಾವಣೆ ಬಳಿಕ ಜಿರೋ ಆಗುತ್ತಿದ್ದಿರಿ ಲಾಡ್ ಅವರೇ ಎಂದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications