Bigg Boss: ಬಿಗ್ಬಾಸ್ ಮನೆಗೆ ಪ್ರದೀಪ್ ಈಶ್ವರ್; ಸ್ಪೀಕರ್ ಗೆ ದೂರು ನೀಡಿದ ವಂದೇ ಮಾತರಂ ಸಂಸ್ಥೆ!
ಬೆಂಗಳೂರು, ಅಕ್ಟೋಬರ್ 10: ಕನ್ನಡ ಕಿರುತೆರೆಯ ಬೃಹತ್ ರಿಯಾಲಿಟಿ ಶೋ ಎಂಬ ಖ್ಯಾತಿಯ ಬಿಗ್ಬಾಸ್ ಕನ್ನಡದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಣಿಸಿಕೊಂಡಿದ್ದು,ಈ ಕುರಿತು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್ಗೆ ಯು ಟಿ ಖಾದರ್ ಅವರಿಗೆ ದೂರು ನೀಡಿದೆ.
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಯು ಟಿ ಖಾದರ್ ದೂರು ನೀಡುವ ಮೂಲಕ ಸೇವಾ ಸಂಸ್ಥೆಯು ಆಗ್ರಹಿಸಿದೆ.

ಇನ್ನು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿರುವುದನ್ನ ಪ್ರಶ್ನಿಸಿ ವಿಧಾನಸಭೆ ಸ್ವೀಕರ್ ಯು ಟಿ ಖಾದರ್ ಅವರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯ ಸರಕಾರದಿಂದ ಸಂಬಳ ಪಡೆಯುತ್ತಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್ ಅವರು ಜವಾಬ್ದಾರಿಯುತ ಪ್ರಜೆಯಾಗಿದ್ದಾರೆ.
ತಮ್ಮ ಕ್ಷೇತ್ರದ ಜನರಿಗೆ ಏನಾದರೂ ಸಮಸ್ಯೆಯಾದಗ ಸ್ಪಂದಿಸುವುದು ಇವರ ಕರ್ತವ್ಯ. ಆದರೆ, ಈ ಜವಾಬ್ದಾರಿ ಮರೆತು ಇವರು ಬಿಗ್ಬಾಸ್ ಮನರಂಜನೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಇಂತಹ ತಪ್ಪು ಮಾಡಿರುವ ಇವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ದೂರು ನೀಡಿದೆ.
ಶಾಸಕರಾಗಿ ಜನರ ಸಮಸ್ಯೆ ಆಲಿಸುವುದನ್ನ ಬಿಟ್ಟು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. ಹೀಗಾಗಿ ಇವರನ್ನ ಶಾಸಕ ಸ್ಥಾನದಿಂದ ವಜಾ ಮಾಡಬೇಕು. ಇವರಿಗೆ ಯಾವುದೇ ಶಾಸಕ ಭತ್ಯೆ ನೀಡಬಾರದು. ತಕ್ಷಣದಿಂದಲೇ ಇವರನ್ನು ಅಮಾನತ್ತು ಮಾಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಬಿಗ್ ಬಾಸ್ ಗೆ ಪ್ರದೀಪ್ ಈಶ್ವರ್; ಸುಧಾಕರ್ ಹೇಳಿದ್ದೇನು?
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದು, ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಮಾಜಿ ಸಚಿವ ಕೆ ಸುಧಾಕರ್ ಲೇವಡಿ ಮಾಡಿದ್ದಾರೆ.
ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್ಎ ಬಿಗ್ ಬಾಸ್ ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ.
ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.
ಬಿಗ್ ಬಾಸ್ ಗೆ ಪ್ರದೀಪ್ ಈಶ್ವರ್;ಬಿಜೆಪಿ ಹೇಳಿದ್ದೇನು?
ರಾಜ್ಯದ ಅಭಿವೃದ್ಧಿ ಸಂಪೂರ್ಣ ನಿಂತು ವಿಧಾನಸೌಧವೇ ಮನರಂಜನೆಗಷ್ಟೇ ಮೀಸಲಾದ ಬಿಗ್ ಬಾಸ್ ಮನೆಯಂತಾಗಿದೆ. ಅದಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರ ಸಂಪುಟ ಸಹೋದ್ಯೋಗಿಗಳನ್ನು ಬಿಗ್ ಬಾಸ್ ಮನೆಗೇ ಕಳಿಸಿಕೊಟ್ಟು ಕೃತಾರ್ಥರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಹೇಳಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications