"ದೊರೆಸ್ವಾಮಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು'
ಬೆಂಗಳೂರು. ಮಾ. 03: ಕಳೆದ ಎರಡು ದಿನಗಳಿಂದ ವಿಧಾನಸಭೆ ಕಲಾಪ ಬಲಿಯಾಗಿದ್ದರೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಮಾತ್ರ ಸುಮ್ಮನಾಗುತ್ತಿಲ್ಲ. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೊತ್ತಿಕೊಂಡಿರುವ ವಿವಾದಕ್ಕೆ ಇವತ್ತು ಮತ್ತೆ ತುಪ್ಪ ಸುರಿದಿದ್ದಾರೆ. ವಿಧಾನಸಭೆ ಕಲಾಪ ಆರಂಭಕ್ಕೂ ಮೊದಲು ವಿಧಾನಸೌಧದಲ್ಲಿ ಅವರು ಮಾತನಾಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಹೇಳನ ಮಾಡುತ್ತಾರೆ. ನಮಗೆ ಸ್ವಾತಂತ್ರ್ಯಹೋರಾಟಗಾರರ ಮೇಲೆ ನಂಬಿಕೆಯಿದೆ. ಸ್ವಾತಂತ್ರ್ಯ ಹೋರಾಟಗಾರು ಇದ್ದಿದ್ದರೆ ಹೀಗೆ ಮಾತನಾಡುತ್ತಿದ್ದರಾ? ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನೇ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ವಯಸ್ಸಾಗಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ನಮ್ಮಲ್ಲಿ ಹಠಮಾರಿ ಧೋರಣೆಯಿಲ್ಲ. ಪ್ರಧಾನಿ, ಅಂಬೇಡ್ಕರ್ ಬಗ್ಗೆ ಮಾತನಾಡಿದ್ರೆ ಸಹಿಸೋದಕ್ಕೆ ಆಗುತ್ತಾ ಎಂದು ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಪಾಕಿಸ್ತಾನದ ಎಜೆಂಟ್ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೊಟ್ಟಿದ್ದರಿಂದ ವಿವಾದ ಉಂಟಾಗಿದೆ. ಶಾಸಕ ಯತ್ನಾಳ್ ಅವರು ಕ್ಷಮೆ ಕೇಳಬೇಕು, ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕೆಂದು ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿವೆ. ಈ ಮಧ್ಯೆ ರೇಣುಕಾಚಾರ್ಯ ಅವರು ಮತ್ತೆ ಮತ್ತೆ ದೊರೆಸ್ವಾಮಿ ಅವರ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications