Get Updates
Get notified of breaking news, exclusive insights, and must-see stories!

S.Suresh Kumar: '81 ದಿನಗಳ ನಂತರ ನಾನು ಮನೆಗೆ ವಾಪಸ್ಸು ಬಂದೆ': ಹೊಸ ಹುಟ್ಟು ಪಡೆದ ಬಿಜೆಪಿ ನಾಯಕ, ಭಾವುಕ ಪೋಸ್ಟ್

ಬೆಂಗಳೂರು, ನವೆಂಬರ್ 09: ಎಂಥವರಿಗೇ ಆಗಲಿ ಆರೋಗ್ಯ ಸಮಸ್ಯೆ ಕಾಡಲು ಶುರು ಮಾಡಿದರೆ, ಸಾಕಪ್ಪಾ ಸಾಕು ಎಂಬತಾಗುತ್ತದೆ. ವಿಲ ವಿಲ ಒದ್ದಾಡುತ್ತಾರೆ. ಗಂಭೀರ ಸಮಸ್ಯೆ ಇದ್ದರಂತೂ ಖಿನ್ನತೆಗೆ ಒಳಗಾಗಿ ಬಿಡುತ್ತಾರೆ. ಉತ್ತಮ ಆರೋಗ್ಯ ಮುಂದೇ ಬೇರೆನು ಇಲ್ಲ ಎಂಬ ಮಾತು ಸತ್ಯವೆನಿಸುತ್ತದೆ. ಗುಣಮುಖವಾಗಿ ಬಂದರೆ ಹೊಸ ಚೈತನ್ಯ, ಇದು ಮರು ಹುಟ್ಟು ಎನ್ನುತ್ತಾರೆ. ಇಂತದ್ದೇ ಮಾತುಗಳನ್ನು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಡಿದ್ದಾರೆ.

ಹೌದು...ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬರೋಬ್ಬರಿ 81 ದಿನಗಳ ಅನಾರೋಗ್ಯದ ದಿನಗಳನ್ನು ಕಳೆದು, ಕುಟುಂಬ ಎಲ್ಲವನ್ನು ಬಿಟ್ಟು, ಕಹಿ ದಿನಗಳ ಜೊತೆಗೆ ಹೋರಾಡಿ ಮನಗೆ ವಾಪಾಸ್ ಮರಳಿದ್ದಾರೆ.

MLA S Suresh Kumar return to Home after 81 Days Suffer Health Issues His Reborn Posts Viral

ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಭಾವುಕ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ''ನನ್ನ ಎಲ್ಲಾ ಆತ್ಮೀಯ ಬಂಧುಗಳಿಗೆ ನಿಮ್ಮ ಸುರೇಶ್ ಕುಮಾರ್ ಮಾಡುವ ನಮಸ್ಕಾರಗಳು. 81 ದಿನಗಳ ನಂತರ ನಾನು ನಮ್ಮ ಮನೆಗೆ ವಾಪಸ್ಸು ಬಂದಿದ್ದೇನೆ. ಇದು ನನ್ನ ಪುನರ್‌ ಜನ್ಮ'' ಎಂದು ಅನಾರೋಗ್ಯದ ದಿನಗಳನ್ನು ನೆನೆದು ಪೋಸ್ಟ್ ಹಂಚಿಕೊಂಡಿದ್ದಾರೆ.

ಹಾಗಾದರೆ ಶಾಸಕರ ಪೋಸ್ಟ್‌ನಲ್ಲಿ ಏನಿದೆ?

ಸುರೇಶ್ ಕುಮಾರ್ ಅವರು ಪೋಸ್ಟ್‌ನಲ್ಲಿ ''81 ದಿನಗಳ ನಂತರ ನಾನು ನಮ್ಮ ಮನೆಗೆ ವಾಪಸ್ಸು ಬಂದಿದ್ದೇನೆ. ನಾನು ಮನೆಗೆ ಬಂದಾಗ ನನ್ನಮ್ಮನ ಮುಖದ ಮೇಲೆ ಉಕ್ಕಿ ಬಂದ ಭಾವನೆ ಕಂಡು ಕಣ್ಣೀರು ಬಂತು.

ತುರ್ತು ಪರಿಸ್ಥಿತಿಯಲ್ಲಿ ಕಳೆದ 15 ತಿಂಗಳ ಸೆರೆಮನೆ ವಾಸದ ಅವಧಿ ಬಿಟ್ಟರೆ ಇದೇ ನಾನು ನನ್ನ ಮನೆ ಬಿಟ್ಟು ಇಷ್ಟು ದೀರ್ಘಕಾಲ ಇದ್ದದ್ದು. ಈ 81 ದಿನ ನಾನು ಅನುಭವಿಸಿದ ಚಿಕನ್ ಗುನ್ಯಾ ಗಂಭೀರ ಸಮಸ್ಯೆ, ನೋವು, ಸಂಕಟ, ವೇದನೆ, ಆತಂಕ...ಅಷ್ಟಿಷ್ಟಲ್ಲ.

ವೈದ್ಯರು ನೀಡಿದ ಅತ್ಯುತ್ತಮ ಚಿಕಿತ್ಸೆ, ನನ್ನನ್ನು ಜತನವಾಗಿ ನೋಡಿಕೊಂಡ ನನ್ನ ಕುಟುಂಬ, ಎಂತೆಂಥ ಪರಿಸ್ಥಿತಿಯಲ್ಲಿಯೂ ನನ್ನ ಜೊತೆಗೆ ನಿಂತ ನನ್ನ ಹತ್ತಿರದ ಮಿತ್ರರ ತಂಡ , ನನ್ನ ಆರೋಗ್ಯ ಸುಧಾರಣೆಗಾಗಿ ಹಾರೈಸಿದ, ವಿವಿಧ ದೇವಸ್ಥಾನಗಳಲ್ಲಿ ನನ್ನ ಹೆಸರಿನಲ್ಲಿ ಪೂಜೆ ಸಲ್ಲಿಸಿರುವ ಅಸಂಖ್ಯಾತ ಕಾರ್ಯಕರ್ತರು - ಹಿತೈಷಿಗಳು...

ಈ ಎಲ್ಲವೂ ನನಗೆ ಪುನರ್ಜನ್ಮ ನೀಡಿದೆ. ಇದು ನಿಜಕ್ಕೂ ನನಗೆ ಒಂದು ಹೊಸ ಹುಟ್ಟು. ಇನ್ನೂ ಕೆಲವು ದಿನಗಳು ನಾನು ವಿಶ್ರಾಂತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ವೈದ್ಯರು ಸೂಚನೆ ನೀಡಿದ್ದಾರೆ.

ಕೆಲವೇ ದಿನಗಳಲ್ಲಿ ನನ್ನ ಸಹಜ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುತ್ತೇನೆ. ನಾಗರಿಕರನ್ನು ಭೇಟಿ ಮಾಡುವುದು, ಅಧಿಕಾರಿಗಳ ಸಭೆ ನಡೆಸುವುದು, ನಾಗರಿಕರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವುದು...ಈ ಸಂಗತಿಗಳನ್ನು ಮಾಡಲು ಒಂದು ಸಮಯ ಸೂಚಿ ಸಿದ್ಧಪಡಿಸುತ್ತಿದ್ದೇನೆ.

ಎಲ್ಲರ ಹಾರೈಕೆ, ಆಶೀರ್ವಾದ, ಸಹಕಾರ ನನ್ನ ಮೇಲೆ ಹೀಗೆ ಇರಲಿ. ನವೆಂಬರ್ ಇಪ್ಪತ್ತರ ನಂತರ ಪ್ರಾರಂಭವಾಗುವ ಈ ಭೇಟಿಗೆ ತಾವೆಲ್ಲರೂ ಸಹಕರಿಸಬೇಕೆಂದು ಕೋರುತ್ತೇನೆ'' ಎಂದು ಬರೆದುಕೊಂಡಿದ್ದಾರೆ.

ನ.20ರ ನಂತರ ಕ್ಷೇತ್ರದ ಕೆಲಸದಲ್ಲಿ ಶಾಸಕರು ಸಕ್ರಿಯ

ಈ ಮೂಲಕ ಅವರು ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಬಳಲಿದ್ದೇನೆ. ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಬಂದಿದ್ದೇನೆ. ಅಗತ್ಯದಷ್ಟು ವಿಶ್ರಾಂತಿ ಪಡೆದು, ನವೆಂಬರ್ 20ರ ನಂತರ ಕ್ಷೇತ್ರದ ಇತರ ಕೆಲಸ ಕಾರ್ಯಗಳಲ್ಲಿ ತೊಡಗುವೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿನ ಚೇತರಿಕೆ ಕುಟುಂಬಸ್ಥರಲ್ಲಿ, ಕಾರ್ಯಕರ್ತರಲ್ಲಿ, ಆಪ್ತರದಲ್ಲಿ ಹರ್ಷ ಮೂಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+