ಸೋಲಿನ ಹತಾಶೆ; ಎಂಟಿಬಿ ನಾಗರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಶರತ್ ಬಚ್ಚೇಗೌಡ
ಬೆಂಗಳೂರು, ಮೇ 18: ಡಿ.ಶೆಟ್ಟಿಹಳ್ಳಿ ಗಲಾಟೆಗೂ ನನಗೂ ಯಾವುದೇ ಸಂಬಂಧವಿಲ್ಲದಿದ್ದರು ನನ್ನ ಹೆಸರು ಬಳಿಸಿಕೊಂಡು ನನ್ನ ತೇಜೋವಧೆ ಮಾಡಲು ಹೊರಟಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ದ ಮಾನನಷ್ಟಮೊಕದ್ದಮೆ ದಾಖಲಿಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ಕಾಳಜಿ ಹಾಗೂ ಅಭಿವೃದ್ಧಿ ಜೊತೆಯಲ್ಲಿ ಮಾಡಬೇಕಾದ ರಾಜಕಾರಣ, ಆದರೆ ಸಾವಿನ ಮನೆಯಲ್ಲಿ ಮಾಡುವ ಸ್ಥಿತಿ ತಲುಪಿರುವುದು ವಿಷಾದನೀಯ ಸಂಗತಿ ಎಂದು ಎಂಟಿಬಿ ನಾಗರಾಜ್ ವಿರುದ್ದ ವಾಗ್ದಾಳಿ ನಡೆಸಿದರು. ಗಲಾಟೆಗೂ ನನಗೂ ಸಂಬಂಧವಿಲ್ಲದಿದ್ದರೂ ನನ್ನ ಹೆಸರನ್ನ ಬಳಿಸಿಕೊಂಡರೇ ಇದಕ್ಕೆ ಕಾನೂನು ಹೋರಾಟದ ಮೂಲಕ ಉತ್ತರ ನೀಡುತ್ತೇನೆ ಎಂದು ಗುಡುಗಿದರು.

ವಿಧಾನಸಭಾ ಚುನಾವಣಾ ಮತದಾನ ಮತ್ತು ಮತ ಎಣಿಕೆ ಎರಡು ಶಾಂತಿಯುತವಾಗಿ ನಡೆದಿದ್ದು, ಸೋಲಿನಿಂದ ಹತಾಶರಾಗಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು ಇದಕ್ಕೆ ತಕ್ಕ ಉತ್ತರ ನೀಡುತ್ತೇನೆ ಎಂದು ಕಿಡಿಕಾರಿದರು.
ಮೇ 13 ಮತ ಎಣಿಕೆಯ ದಿನದಂದು ನಂದುಗುಡಿ ಹೋಬಳಿಯ ಡಿ.ಶೆಟ್ಟಿಹಳ್ಳಿಯಲ್ಲಿ ನಡೆದ ಕುಟುಂಬ ಕಲಹವನ್ನು ರಾಜಕೀಯ ಪ್ರೇರಿತವಾಗಿ ಬಿಂಬಿಸಲು ಹೊರಟಿರುವುದು ಖಂಡನೀಯ. ಇತ್ತ ಹೊಸಕೋಟೆಯಲ್ಲಿ ಮೇ 13 ರಂದು ನಡೆದ ಘಟನೆಯನ್ನು ಬಿಜೆಪಿ ಪಕ್ಷ ತನ್ನ ಸೋಷಿಯಲ್ ಮಿಡಿಯಾದಲ್ಲಿ ಕಾಂಗ್ರೆಸ್ ಹಾಗೂ ನನ್ನ ಹೆಸರಿಗೆ ಕಪ್ಪು ಮಸಿ ಬಳಿಯುವ ದುರುದ್ದೇಶದಿಂದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಒಂದು ರಾಷ್ಟ್ರೀಯ ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ ಮಾಹಿತಿ ಇಲ್ಲದ ಹಾಗೂ ತತ್ವ ಸಿದ್ಧಾಂತಗಳ ಮಹತ್ವ ತಿಳಿಯದ ವ್ಯಕ್ತಿಯನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಹೇಳಿದಂತೆ ಕೇಳಿದ ವ್ಯಕ್ತಿಯ ವ್ಯಕ್ತಿತ್ವ ಅರಿವಾಗದಿರುವುದು ಬೇಸರ ಸಂಗತಿ ಎಂದು ಶರತ್ ಬಚ್ಚೇಗೌಡ ಕಿಡಿಕಾರಿದರು.
ಇನ್ನೂ ಡಿ.ಶೆಟ್ಟಿಹಳ್ಳಿ ಗಲಾಟೆ ಕುರಿತು ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಫ್ಐಆರ್ ಪ್ರತಿಯಲ್ಲಿ ಯಾವುದೇ ರಾಜಕೀಯ ಪಕ್ಷ ಹಾಗೂ ರಾಜಕೀಯ ಗಲಾಟೆ ಎಂದು ನಮೂದಿಸಿಲ್ಲ. ಕುಟುಂಬದ ಕಲಹಗಳಿಂದ ನಡೆದ ಮಾತಿನ ಚಕಮುಕಿಯಲ್ಲಿ ಈ ಘಟನೆ ನಡೆದಿದೆ. ಆದರೂ ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದರೇ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications