ಸೋಲಿನ ಹತಾಶೆ; ಎಂಟಿಬಿ ನಾಗರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಶರತ್ ಬಚ್ಚೇಗೌಡ
ಬೆಂಗಳೂರು, ಮೇ 18: ಡಿ.ಶೆಟ್ಟಿಹಳ್ಳಿ ಗಲಾಟೆಗೂ ನನಗೂ ಯಾವುದೇ ಸಂಬಂಧವಿಲ್ಲದಿದ್ದರು ನನ್ನ ಹೆಸರು ಬಳಿಸಿಕೊಂಡು ನನ್ನ ತೇಜೋವಧೆ ಮಾಡಲು ಹೊರಟಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ದ ಮಾನನಷ್ಟಮೊಕದ್ದಮೆ ದಾಖಲಿಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ಕಾಳಜಿ ಹಾಗೂ ಅಭಿವೃದ್ಧಿ ಜೊತೆಯಲ್ಲಿ ಮಾಡಬೇಕಾದ ರಾಜಕಾರಣ, ಆದರೆ ಸಾವಿನ ಮನೆಯಲ್ಲಿ ಮಾಡುವ ಸ್ಥಿತಿ ತಲುಪಿರುವುದು ವಿಷಾದನೀಯ ಸಂಗತಿ ಎಂದು ಎಂಟಿಬಿ ನಾಗರಾಜ್ ವಿರುದ್ದ ವಾಗ್ದಾಳಿ ನಡೆಸಿದರು. ಗಲಾಟೆಗೂ ನನಗೂ ಸಂಬಂಧವಿಲ್ಲದಿದ್ದರೂ ನನ್ನ ಹೆಸರನ್ನ ಬಳಿಸಿಕೊಂಡರೇ ಇದಕ್ಕೆ ಕಾನೂನು ಹೋರಾಟದ ಮೂಲಕ ಉತ್ತರ ನೀಡುತ್ತೇನೆ ಎಂದು ಗುಡುಗಿದರು.

ವಿಧಾನಸಭಾ ಚುನಾವಣಾ ಮತದಾನ ಮತ್ತು ಮತ ಎಣಿಕೆ ಎರಡು ಶಾಂತಿಯುತವಾಗಿ ನಡೆದಿದ್ದು, ಸೋಲಿನಿಂದ ಹತಾಶರಾಗಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು ಇದಕ್ಕೆ ತಕ್ಕ ಉತ್ತರ ನೀಡುತ್ತೇನೆ ಎಂದು ಕಿಡಿಕಾರಿದರು.
ಮೇ 13 ಮತ ಎಣಿಕೆಯ ದಿನದಂದು ನಂದುಗುಡಿ ಹೋಬಳಿಯ ಡಿ.ಶೆಟ್ಟಿಹಳ್ಳಿಯಲ್ಲಿ ನಡೆದ ಕುಟುಂಬ ಕಲಹವನ್ನು ರಾಜಕೀಯ ಪ್ರೇರಿತವಾಗಿ ಬಿಂಬಿಸಲು ಹೊರಟಿರುವುದು ಖಂಡನೀಯ. ಇತ್ತ ಹೊಸಕೋಟೆಯಲ್ಲಿ ಮೇ 13 ರಂದು ನಡೆದ ಘಟನೆಯನ್ನು ಬಿಜೆಪಿ ಪಕ್ಷ ತನ್ನ ಸೋಷಿಯಲ್ ಮಿಡಿಯಾದಲ್ಲಿ ಕಾಂಗ್ರೆಸ್ ಹಾಗೂ ನನ್ನ ಹೆಸರಿಗೆ ಕಪ್ಪು ಮಸಿ ಬಳಿಯುವ ದುರುದ್ದೇಶದಿಂದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಒಂದು ರಾಷ್ಟ್ರೀಯ ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ ಮಾಹಿತಿ ಇಲ್ಲದ ಹಾಗೂ ತತ್ವ ಸಿದ್ಧಾಂತಗಳ ಮಹತ್ವ ತಿಳಿಯದ ವ್ಯಕ್ತಿಯನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಹೇಳಿದಂತೆ ಕೇಳಿದ ವ್ಯಕ್ತಿಯ ವ್ಯಕ್ತಿತ್ವ ಅರಿವಾಗದಿರುವುದು ಬೇಸರ ಸಂಗತಿ ಎಂದು ಶರತ್ ಬಚ್ಚೇಗೌಡ ಕಿಡಿಕಾರಿದರು.
ಇನ್ನೂ ಡಿ.ಶೆಟ್ಟಿಹಳ್ಳಿ ಗಲಾಟೆ ಕುರಿತು ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಫ್ಐಆರ್ ಪ್ರತಿಯಲ್ಲಿ ಯಾವುದೇ ರಾಜಕೀಯ ಪಕ್ಷ ಹಾಗೂ ರಾಜಕೀಯ ಗಲಾಟೆ ಎಂದು ನಮೂದಿಸಿಲ್ಲ. ಕುಟುಂಬದ ಕಲಹಗಳಿಂದ ನಡೆದ ಮಾತಿನ ಚಕಮುಕಿಯಲ್ಲಿ ಈ ಘಟನೆ ನಡೆದಿದೆ. ಆದರೂ ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದರೇ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications