ಐಎಎಸ್ ಅಧಿಕಾರಿಗೆ ಧಮಕಿ, ಶಿವಮೂರ್ತಿ ನಾಯ್ಕ್ ಕಿವಿ ಹಿಂಡಿದ ಸಿಎಂ
ಬೆಂಗಳೂರು, ಅಕ್ಟೋಬರ್ 12 : ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಹಿಂಡಿದ್ದಾರೆ. ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾಗೆ ಧಮಕಿ ಹಾಕಿದ ಆರೋಪವನ್ನು ಶಾಸಕರು ಎದುರಿಸುತ್ತಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, 'ಶಿವಮೂರ್ತಿ ನಾಯ್ಕ್ ಜೊತೆ ಈಗಾಗಲೇ ಮಾತನಾಡಿದ್ದೇನೆ. ನೋಡಪ್ಪ ಈ ಥರ ಮಾಡಬಾರದು, ಸರಿಯಲ್ಲ ಎಂದು ಹೇಳಿದ್ದೇನೆ' ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಶಾಸಕ ಶಿವಮೂರ್ತಿ ನಾಯ್ಕ್ ಅವರು ಐಎಎಸ್ ಅಧಿಕಾರಿಗೆ ಧಮಕಿ ಹಾಕಿದ ಆರೋಪ ಎದುರಿಸುತ್ತಿದ್ದಾರೆ. ಪುತ್ರನಿಗೆ ಗ್ರಾನೈಟ್ ಗಣಿಗಾರಿಕೆ ನಡೆಸಲು ಅನುಮತಿ ನೀಡಿಲ್ಲ ಎಂದು ಶಾಸಕರು ಧಮಕಿ ಹಾಕಿದ್ದಾರೆ ಎಂಬುದು ಆರೋಪ.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿರುವ ರಾಜೇಂದ್ರಕುಮಾರ್ ಕಟಾರಿಯಾ ಅವರು, ಶಾಸಕರು ಧಮಕಿ ಹಾಕಿರುವ ಬಗ್ಗೆ ಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿಗಳು, ಐಎಎಸ್ ಅಧಿಕಾರಿಗಳ ಸಂಘಕ್ಕೆ ದೂರು ನೀಡಿದ್ದಾರೆ.
'ಶಾಸಕರ ವರ್ತನೆಯಿಂದಾಗಿ ದಕ್ಷತೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. ಕಾನೂನು ರೀತಿ ಕೆಲಸ ಮಾಡಿದರೂ ಶಾಸಕರಿಂದ ಅಡ್ಡಿಯಾಗುತ್ತಿದೆ. ಬೆದರಿಕೆಯನ್ನೂ ಹಾಕಿದ್ದಾರೆ. ಹಾಗಾಗಿ ಸೂಕ್ತ ರಕ್ಷಣೆಯನ್ನು ಒದಗಿಸಬೇಕು' ಎಂದು ಕಟಾರಿಯಾ ಅವರು ಮನವಿ ಮಾಡಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications