ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ರಾಜೀನಾಮೆ: ವಿಶೇಷ ಅಧಿಕವೇಶನಕ್ಕೆ ಆಗ್ರಹ..
ಬೆಂಗಳೂರು, ಜೂನ್ 18: ಆರ್.ಸಿ.ಬಿ. ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದ ದುರಂತ, 11 ಜನರ ಸಾವಿನ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ರಾಜೀನಾಮೆ ಕೊಡಬೇಕು ಮತ್ತು ಈ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಈ ಕುಕಾಲ್ತುಳಿತದ ಮೂಲಕ 11 ಜನ ಅಮಾಯಕ ಯುವಜನರ ಸಾವಿನ ಚರ್ಚೆಯನ್ನು ಜಾತಿ ಗಣತಿ ಮಾಡಿಸುವುದಾಗಿ ಪ್ರಕಟಿಸಿ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಆಕ್ಷೇಪಿಸಿದರು. ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಇವತ್ತು ಪ್ರತಿಭಟನೆ ಮುಂದುವರೆಸಿದ್ದೇವೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೈಪೋಟಿಯ ರೂಪದಲ್ಲಿ ಸಂಭ್ರಮದಲ್ಲಿ ನಾ ಮುಂದು ನಾ ಮುಂದು ಎಂಬಂತೆ ಪಾಲ್ಗೊಂಡಿದ್ದರು. ವಿಧಾನಸೌಧದಲ್ಲಿ ಒಬ್ಬರು, ವಿಮಾನನಿಲ್ದಾಣದಲ್ಲಿ ಒಬ್ಬರು, ಸ್ಟೇಡಿಯಂನಲ್ಲಿ ಒಬ್ಬರು ಎಂಬಂತೆ ಪೈಪೋಟಿ ನಡೆದಿತ್ತು ಎಂದು ತಿಳಿಸಿದರು. ಈಗ ನನಗೇನೂ ಸಂಬಂಧ ಇಲ್ಲ ಎಂಬ ವಾತಾವರಣ ಸೃಷ್ಟಿಸಿ ಇನ್ನೊಬ್ಬರ ಹೆಗಲ ಮೇಲೆ ಹಾಕುವ ವಾತಾವರಣ ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು.
ಸಿಎಂ, ಡಿಸಿಎಂ ಹುಚ್ಚಾಟದಿಂದ 11 ಸಾವು: ವಿಜಯೇಂದ್ರ
ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಿಸಲು ಮತ್ತು ಇಮೇಜ್ ವೃದ್ಧಿಗೆ ಆರ್.ಸಿ.ಬಿ. ವಿಜಯೋತ್ಸವದ ಕಾರ್ಯಕ್ರಮ ಏರ್ಪಡಿಸಿದ್ದಾರೆ ಹಾಗೂ 11 ಜನರ ಸಾವಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿಯವರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾರ್ಯಕ್ರಮ ನಡೆಸಿದ್ದಾರೆ. ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ನಡುವಿನ ಪೈಪೋಟಿ, ಹುಚ್ಚಾಟದಿಂದ 11 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇಂಥ ಭಂಡ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜನಪ್ರಿಯತೆ ಕಳಕೊಂಡಿದ್ದಾರೆ. ರಾಜ್ಯ ಸರಕಾರದ ಪ್ರಾಯೋಜಕತ್ವದಲ್ಲಿ ಈ 11 ಜನರು ಸಾಯುವಂತಾಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದೇವೆ ಎಂದು ಪ್ರಕಟಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications