ಡಿಕೆ ಶಿವಕುಮಾರ್ ಚನ್ನಪಟ್ಟಣದಿಂದ ಸ್ಪರ್ಧೆ; ಇದನ್ನೇ ತುಘಲಕ್ ದರ್ಬಾರ್ ಅನ್ನುವುದು: ಸುರೇಶ್ ಕುಮಾರ್ ಕಿಡಿ
ಬೆಂಗಳೂರು, ಜೂನ್ 20: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಅನಗತ್ಯ ಪ್ರಹಸನ. ಇದಕ್ಕೆ ಏನು ಹೇಳಬೇಕು? ಸಾರ್ವಜನಿಕರ ಹಣ, ರಾಷ್ಟ್ರದ ಸಂಪತ್ತು ಹೇಗೆ ವೈಯಕ್ತಿಕ ಪ್ರತಿಷ್ಠೆಗೆ ವೆಚ್ಚವಾಗುತ್ತೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಉಪಮುಖ್ಯಮಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಚರ್ಚೆ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ನಡೆ ಕುರಿತು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ವಿಧಾನಸಭೆಗೆ ಚುನಾವಣೆಗಳು ನಡೆದದ್ದು 2023 ಮೇ ತಿಂಗಳಲ್ಲಿ. ಮೇ 13ರಂದು ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಸರ್ಕಾರ ರಚಿಸಲು ಅರ್ಹತೆ ಪಡೆಯಿತು. ಕನಕಪುರ ಕ್ಷೇತ್ರದಿಂದ ಆಯ್ಕೆಯಾದ ಶ್ರೀ ಡಿ.ಕೆ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯೂ ಆದರು, ಕನಕಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಶ್ರೀ ಡಿ.ಕೆ.ಶಿವಕುಮಾರ್ ರವರಿಗೆ ರಾಜ್ಯದ ಇನ್ನುಳಿದ 223 ಕ್ಷೇತ್ರಗಳ ಸದಸ್ಯರಂತೆ 2028 ನೇ ಇಸವಿ ಯವರೆಗೂ ಅವಧಿ ಇದೆ.
ಇದೀಗ ಡಿ.ಕೆ. ಶಿವಕುಮಾರ್ ರಾಜಕಾರಣದಲ್ಲಿ ಹೊಸ ನಾಂದಿ ಹಾಡುವ ಸಡಗರದಲ್ಲಿದ್ದಾರೆ. ಕಳೆದ ವರ್ಷ, 2023 ರ ಮೇ ತಿಂಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೊನ್ನೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿ ಕೇಂದ್ರದ ಸಚಿವರೂ ಆಗಿದ್ದಾರೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ತನ್ನ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟಿದ್ದಾರೆ.
ಈಗ ಶಾಸಕ ಸ್ಥಾನ ಖಾಲಿಯಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಉಪಚುನಾವಣೆ ಅಗತ್ಯವಾಗಿದೆ. ಇತಿಹಾಸದಲ್ಲಿ ಓರ್ವ ವ್ಯಕ್ತಿ ತನ್ನ ರಾಜಧಾನಿಯನ್ನು ದೆಹಲಿಯಿಂದ ಸಾವಿರಾರು ಮೈಲಿ ದೂರದ ಮಹಾರಾಷ್ಟ್ರ ದಲ್ಲಿನ ದೌಲತಾಬಾದಿಗೆ ಬದಲಾಯಿಸಿದ್ದ. ನಂತರ ಮತ್ತೆ ದೌಲತಾಬಾದಿಂದ ದೆಹಲಿಗೆ ವಾಪಸ್ಸು ರಾಜಧಾನಿಯನ್ನು ತಂದ . ಇತಿಹಾಸದಲ್ಲಿ ಈ ವಿಲಕ್ಷಣ ವ್ಯಕ್ತಿ ಹೆಸರು ಯಾವಾಗಲೂ ನೆನಪಿರುತ್ತದೆ. ಇದನ್ನೇ ತುಘಲಕ್ ದರ್ಬಾರ್ ಅನ್ನುವುದು.
ಇದೀಗ ಕನಕಪುರದಿಂದ ಆಯ್ಕೆಯಾಗಿ 2028ರ ವರೆಗೆ ಶಾಸಕನಾಗಿ ಮುಂದುವರಿಯುವ ಅವಕಾಶ ಮತ್ತು ಕರ್ತವ್ಯ ಹೊಂದಿರುವ ಶ್ರೀ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಒಂದು ಅನಗತ್ಯ ಪ್ರಹಸನವೇ ಹೌದು.
ಮಾಧ್ಯಮಗಳಲ್ಲಿ ಕೇಳಿ ಬಂದಂತೆ ಚನ್ನಪಟ್ಟಣದಿಂದ ಸ್ಪರ್ಧಿಸಿ ತಾನು ಗೆದ್ದು, ಈಗಾಗಲೇ ಆಯ್ಕೆ ಯಾಗಿರುವ ಕನಕಪುರ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಲ್ಲಿಂದ ಮೊನ್ನೆ ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ತನ್ನ ಸಹೋದರ ಡಿ.ಕೆ. ಸುರೇಶ್ ಗೆ ಸ್ಪರ್ಧಿಸುವಂತೆ ಮಾಡಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡುವ ಮಹದೋದ್ದೇಶ ಡಿಕೆ ಶಿವಕುಮಾರ್ ಅವರದಂತೆ. ಇದಕ್ಕೆ ಏನು ಹೇಳಬೇಕು? ಸಾರ್ವಜನಿಕರ ಹಣ, ರಾಷ್ಟ್ರದ ಸಂಪತ್ತು ಹೇಗೆ ವೈಯಕ್ತಿಕ ಪ್ರತಿಷ್ಠೆಗಾಗಿ ವೆಚ್ಚವಾಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಡಿ.ಕೆ.ಶಿವಕುಮಾರ್ ರವರ ಈ ನಡೆ ವಿವೇಚನೆ ಮತ್ತು ವಿವೇಕದಿಂದ ಕೂಡಿದ ಅತಿರೇಕದ ನಡೆ ಎಂದೆನಿಸದು! ರಾಹುಲ್ ಗಾಂಧಿಯವರು ಇದಕ್ಕೆ ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications