ಸಚಿವ ಸ್ಥಾನಕ್ಕಾಗಿ ಪಟ್ಟು; ಹಿಂದೆ ಮಾಡಿದ ತಪ್ಪು ಮತ್ತೆ ಮಾಡಬೇಡಿ: ವಿನಯ್ ಕುಲಕರ್ಣಿ ಎಚ್ಚರಿಕೆ
ಬೆಳಗಾವಿ, ಜೂನ್ 05: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಲವು ನಾಯಕರ ಅಸಮಾಧಾನ ಮತ್ತೆ ಮುಂದುವರೆದಿದೆ. ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ ಕೆ ಹರಿಪ್ರಸಾದ್ ಹಾಗೂ ಸಲೀಂ ಅಹಮದ್ ಸಚವ ಸ್ಥಾನ ಕೈ ತಪ್ಪಿದ ಹಿನ್ನಲೆ ಬಹಿರಂತವಾಗಿ ಅಸಮಾಧಾನ ಹೊರಹಾಕಿದ್ದು, ಇದೀಗ ವಿನಯ್ ಕುಲಕರ್ಣಿ ಪಕ್ಷದ ವಿರುದ್ದ ಎಚ್ಚರಿಕೆ ಕೊಟ್ಟಿದ್ದಾರೆ.
ಹೌದು, ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ 37 ಶಾಸಕರು ಆಯ್ಕೆಯಾಗಿದ್ದಾರೆ. ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತೆ. ಇದು ಮುಂದಿನ ಲೋಕಸಭೆ ಚುನಾವಣೆ ಮೇಲೆ ಇದು ಶೇ 100 ರಷ್ಟು ಪರಿಣಾಮ ಬೀರುತ್ತೆ.

ಮೊದಲು ಮಾಡಿದ ತಪ್ಪನ್ನೇ ಪಕ್ಷ ಮತ್ತೆ ಮಾಡಬಾರದು. ಕೊಟ್ಟವರಿಗೆ ಸಚಿವ ಸ್ಥಾನ ಕೊಡದೆ ಹೊಸಬರಿಗೆ ಅವಕಾಶ ಕೊಡಿ. ಹೊಸ ನಾಯಕರು ಸಿದ್ಧರಾಗಬೇಕಲ್ವಾ ಎಂದು ಶಾಸಕ ವಿನಯ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಲ ನಮ್ಮ ಸಮಾಜದ 37 ಜನ ಶಾಸಕರು ಆಯ್ಕೆಯಾಗಿದ್ದಾರೆ. ಲಿಂಗಾಯತ ಮತದಾರರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ಹೊಸಬರಿಗೆ ಸಚಿವ ಸ್ಥಾನ ಕೊಡಿ ಅಂತ ಮನವಿ ಮಾಡುತ್ತಿದ್ದೇವೆ. ಹೆಚ್ಚಿನ ಸ್ಥಾನ ಪಡೆದು ಸರ್ಕಾರ ಬಂದಿದೆ.

ಸಮಾಧಾನ ಮಾಡಲು ಏನೇನೋ ಮಾಡಲು ಹೋಗಿ ಈ ತರಹ ಆಗಿದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕೆ ಸಿಗುತ್ತೆ. ಯಾರು ಸಮಾಜಕ್ಕಾಗಿ ಹೋರಾಟ ಮಾಡಿ ಕೆಲಸ ಮಾಡಿದ್ದಾರೆಂದು ಪಕ್ಷ ಅರ್ಥ ಮಾಡಿಕೊಳ್ಳಬೇಕಿತ್ತು. ಆದರೆ ಪಕ್ಷ ಇದನ್ನು ಅರ್ಥ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.
ಇನ್ನೂ 37 ಜನರಲ್ಲಿ ಇಬ್ಬರಿಗೆ ಮಾತ್ರ ಸಚಿವ ಸ್ಥಾನ ಸಿಕ್ಕಿದೆ. ಇನ್ನೂ ಇಬ್ಬರು, ಮೂರು ಜನರಿಗೆ ಸಚಿವ ಸ್ಥಾನ ಕೇಳುತ್ತಿದ್ವಿ. ಸಮಾಜ ಕಟ್ಟುವ ಕೆಲಸ ಮಾಡಿ ನಮ್ಮ ಸಮಾಜದ ಮತ ಕಾಂಗ್ರೆಸ್ಗೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ. ಎಲ್ಲರಿಗೂ ಇದು ಗೊತ್ತಿದೆ. ಯಾವುದೋ ಒತ್ತಡಕ್ಕೆ ಮಣಿದು ಈ ರೀತಿ ಮಾಡಲಾಗಿದೆ. ಇನ್ನೂ ಮಂತ್ರಿಗಿರಿ ವಿಚಾರದಲ್ಲಿ ಮಾತ್ರವಲ್ಲದೆ ಖಾತೆ ಹಂಚಿಕೆಯಲ್ಲಿಯೂ ಲಿಂಗಾಯತರಿಗೆ ಅನ್ಯಾಯ ಆಗಿದೆ ಎನ್ನುವುದು ಎದ್ದು ಕಾಣುತ್ತದೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಸಹಜವಾಗಿ ಮತ್ತೆ ಆಗಿಯೇ ಆಗುತ್ತದೆ. ನಮ್ಮ ಒಂದೇ ಸಮಾಜ ಅಲ್ಲ, ಬೇರೆ ಬೇರೆ ಸಮಾಜಗಳಿಗೂ ಅವಕಾಶ ಸಿಗಬೇಕಿದೆ. ಹೊಸ ಹೊಸ ಯುವಕರಿಗೆ ಸ್ಥಾನ ಬಿಟ್ಟುಕೊಡುವಂತೆ ಕೇಳುತ್ತೇವೆ ಎಂದು ಹೇಳಿದರು.
ಗೋಹತ್ಯೆ ಕಾಯ್ದೆ ಕಾನೂನು ಹಿಂಪಡೆಯುವ ವಿಚಾರವಾಗಿ ಮಾತನಾಡಿ, ಗೋಹತ್ಯೆ ಕಾಯ್ದೆ ಬಗ್ಗೆ ಮಾತನಾಡುವ ಬಿಜೆಪಿಯ ಯಾವ ಮುಖಂಡರ ಮನೆಯಲ್ಲೂಹಸು ಸಾಕಿಲ್ಲ. ಮನೆಯಲ್ಲಿಒಂದು ಆಕಳು ಕಟ್ಟಿ ಸಾಧಕ ಬಾಧಕ ನೋಡಿಕೊಂಡು ಮಾತನಾಡಲಿ. ಇಡೀ ರಾಜ್ಯದಲ್ಲೇ ಅತೀ ಹೆಚ್ಚು ಆಕಳು ಸಾಕಿದವನು ನಾನು. ದೇಸಿ ತಳಿಯ ಹಸುಗಳ ಸಂರಕ್ಷಣೆ ಮಾಡುವುದು ಉತ್ತಮ ವಿಚಾರ. ಆದರೆ, ಎಚ್ಎಫ್ ಆಕಳು ಗಂಡು ಕರು ಹಾಕಿದರೆ ಪ್ರಯೋಜನಕ್ಕೆ ಬರುವುದಿಲ್ಲ. ಅಲ್ಲದೇ, ವಯಸ್ಸಾದ ಎತ್ತುಗಳನ್ನು ಹಾಗೂ ಬರಡು ಬಿದ್ದ ಆಕಳುಗಳನ್ನು ಏನು ಮಾಡಬೇಕು ಎಂದು ವಿನಯ ಕುಲಕರ್ಣಿ ಪ್ರಶ್ನಿಸಿದರು.
ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಬೇಕು. ಇನ್ನು ಗೋಮಾತೆ ಹೆಸರಿನಲ್ಲಿರಾಜಕೀಯ ಮಾಡುವುದನ್ನು ಬಿಟ್ಟು ದನ, ಕರುಗಳನ್ನು ಸಾಕುವವರು, ಒಳ್ಳೆಯ ರೈತರನ್ನು ಕರೆಸಿ ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications